ಜಿಲ್ಲೆಗಳು

ದಸರಾ ಕ್ರೀಡಾಕೂಟದ ಅವ್ಯವಸ್ಥೆ: ನೋಟೀಸ್ ಜಾರಿಗೊಳಿಸಿದ ಶಾಲಿನಿ ರಜನೀಶ್

ಮೈಸೂರು: ದಸರಾ ಕ್ರೀಡಾಕೂಟದಲ್ಲಿ ಅವ್ಯವಸ್ಥೆ ಯಾಗಿರುವ ಬಗ್ಗೆ ದೂರುಗಳು ಬಂದಿದ್ದು, ಈ ಕುರಿತು ಕೂಡಲೇ ವರದಿ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಆಯುಕ್ತ ಡಾ.ಎಚ್.ಎನ್. ಗೋಪಾಲಕೃಷ್ಣ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆ ಇಲ್ಲದೇ ಇರುವುದು. ದಸರಾ ಕ್ರೀಡಾಕೂಟದಲ್ಲಿ ಭಾಗಿಯಾದವರಿಗೆ ನಿಗದಿಗಿಂತ ಕಡಿಮೆ ಗೌರವಧನ ನೀಡಲಾಗಿರುತ್ತದೆ. ಅಲ್ಲದೆ, ಕರಾಟೆ, ಬಾಡಿಬಿಲ್ಡಿಂಗ್, ಚೆಸ್, ಅಂಧರ ಚೆಸ್ ಮತ್ತು ಸೈಕಲ್ ಪೋಲೋ ಸ್ಪರ್ಧೆಗಳಿಗೆ ನಗದು ಬಹುಮಾನ ನೀಡಿರುವುದಿಲ್ಲ. ಕ್ರೀಡಾಕೂಟಕ್ಕೆ ಸೂಕ್ತ ರೀತಿಯಲ್ಲಿ ಮೈದಾನಗಳನ್ನು ಸಿದ್ಧವಾಗಿಲ್ಲದೇ ಇರುವುದು. ಕ್ರೀಡಾಕೂಟವನ್ನು ಮೊಟಕುಗೊಳಿಸಲಾಗಿರುವುದು. ಕ್ರೀಡಾಪಟುಗಳಿಗೆ ಕ್ರೀಡಾ ಸಮವಸ್ತ್ರ, ಶೂ ವಿತರಿಸಿರುವುದಿಲ್ಲ. ಮ್ಯಾರಥಾನ್ ಕ್ರೀಡೆ ರದ್ದುಗೊಳಿಸಲಾಗಿದೆ. ಬೇರೊಂದು ಸಮಿತಿ ಆಯೋಜಿಸಿರುವ ಯೋಗ ಸ್ಪರ್ಧೆಯನ್ನು ಮತ್ತೊಮ್ಮೆ ಆಯೋಜಿಸಲಾಗಿರುವುದು. ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದವರಿಗೆ ಗೌರವಧನ ನೀಡದೇ ಇರುವುದು. ಕಬ್ಬಡಿ ಕ್ರೀಡೆಯಲ್ಲಿ ಅವ್ಯವಸ್ಥೆ. ಈ ರೀತಿಯಾಗಿ ಅವ್ಯವಸ್ಥೆ ಕುರಿತು ಪಟ್ಟಿ ಮಾಡಿರುವ ಅಪರ ಮುಖ್ಯ ಕಾರ್ಯದರ್ಶಿ ಅವರು, ಇದರಿಂದಾಗಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಅನಾನೂಕೂಲವಾಗಿರುತ್ತದೆ ಮತ್ತು ಇಲಾಖೆಯ ಗೌರವಕ್ಕೆ ಧಕ್ಕೆ ಉಂಟಾಗಿರುತ್ತದೆ. ಆದ್ದರಿಂದ ಈ ಮೇಲಿನ ಅಂಶಗಳ ಬಗ್ಗೆ ನಿಮ್ಮ ವರದಿಯನ್ನು ಕೂಡಲೇ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ನೋಟಿಸ್‌ನ ಪ್ರತಿಯನ್ನು ಜಂಟಿ ನಿರ್ದೇಶಕರಿಗೂ ನೀಡಲಾಗಿದೆ.

 ದಸರಾ ಕ್ರೀಡಾಕೂಟ ಆಯೋಜಿಸಲು ಸರ್ಕಾರದ ವತಿಯಿಂದ ೫ ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿತ್ತು. ಕ್ರೀಡಾಕೂಟದ ಅವ್ಯವಸ್ಥೆ ಬಗ್ಗೆ ಪತ್ರಿಕೆಯಲ್ಲಿ ಬಂದಿರುವ ವರದಿಯನ್ನು ಗಮನಿಸಿ ನೋಟಿಸ್ ನೀಡಲಾಗಿದೆ.
– ಡಾ.ಶಾಲಿನಿ ರಜನೀಶ್ 

andolana

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago