ಜಿಲ್ಲೆಗಳು

ದಸರಾ ಕ್ರೀಡಾಕೂಟದ ಅವ್ಯವಸ್ಥೆ: ನೋಟೀಸ್ ಜಾರಿಗೊಳಿಸಿದ ಶಾಲಿನಿ ರಜನೀಶ್

ಮೈಸೂರು: ದಸರಾ ಕ್ರೀಡಾಕೂಟದಲ್ಲಿ ಅವ್ಯವಸ್ಥೆ ಯಾಗಿರುವ ಬಗ್ಗೆ ದೂರುಗಳು ಬಂದಿದ್ದು, ಈ ಕುರಿತು ಕೂಡಲೇ ವರದಿ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಆಯುಕ್ತ ಡಾ.ಎಚ್.ಎನ್. ಗೋಪಾಲಕೃಷ್ಣ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆ ಇಲ್ಲದೇ ಇರುವುದು. ದಸರಾ ಕ್ರೀಡಾಕೂಟದಲ್ಲಿ ಭಾಗಿಯಾದವರಿಗೆ ನಿಗದಿಗಿಂತ ಕಡಿಮೆ ಗೌರವಧನ ನೀಡಲಾಗಿರುತ್ತದೆ. ಅಲ್ಲದೆ, ಕರಾಟೆ, ಬಾಡಿಬಿಲ್ಡಿಂಗ್, ಚೆಸ್, ಅಂಧರ ಚೆಸ್ ಮತ್ತು ಸೈಕಲ್ ಪೋಲೋ ಸ್ಪರ್ಧೆಗಳಿಗೆ ನಗದು ಬಹುಮಾನ ನೀಡಿರುವುದಿಲ್ಲ. ಕ್ರೀಡಾಕೂಟಕ್ಕೆ ಸೂಕ್ತ ರೀತಿಯಲ್ಲಿ ಮೈದಾನಗಳನ್ನು ಸಿದ್ಧವಾಗಿಲ್ಲದೇ ಇರುವುದು. ಕ್ರೀಡಾಕೂಟವನ್ನು ಮೊಟಕುಗೊಳಿಸಲಾಗಿರುವುದು. ಕ್ರೀಡಾಪಟುಗಳಿಗೆ ಕ್ರೀಡಾ ಸಮವಸ್ತ್ರ, ಶೂ ವಿತರಿಸಿರುವುದಿಲ್ಲ. ಮ್ಯಾರಥಾನ್ ಕ್ರೀಡೆ ರದ್ದುಗೊಳಿಸಲಾಗಿದೆ. ಬೇರೊಂದು ಸಮಿತಿ ಆಯೋಜಿಸಿರುವ ಯೋಗ ಸ್ಪರ್ಧೆಯನ್ನು ಮತ್ತೊಮ್ಮೆ ಆಯೋಜಿಸಲಾಗಿರುವುದು. ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದವರಿಗೆ ಗೌರವಧನ ನೀಡದೇ ಇರುವುದು. ಕಬ್ಬಡಿ ಕ್ರೀಡೆಯಲ್ಲಿ ಅವ್ಯವಸ್ಥೆ. ಈ ರೀತಿಯಾಗಿ ಅವ್ಯವಸ್ಥೆ ಕುರಿತು ಪಟ್ಟಿ ಮಾಡಿರುವ ಅಪರ ಮುಖ್ಯ ಕಾರ್ಯದರ್ಶಿ ಅವರು, ಇದರಿಂದಾಗಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಅನಾನೂಕೂಲವಾಗಿರುತ್ತದೆ ಮತ್ತು ಇಲಾಖೆಯ ಗೌರವಕ್ಕೆ ಧಕ್ಕೆ ಉಂಟಾಗಿರುತ್ತದೆ. ಆದ್ದರಿಂದ ಈ ಮೇಲಿನ ಅಂಶಗಳ ಬಗ್ಗೆ ನಿಮ್ಮ ವರದಿಯನ್ನು ಕೂಡಲೇ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ನೋಟಿಸ್‌ನ ಪ್ರತಿಯನ್ನು ಜಂಟಿ ನಿರ್ದೇಶಕರಿಗೂ ನೀಡಲಾಗಿದೆ.

 ದಸರಾ ಕ್ರೀಡಾಕೂಟ ಆಯೋಜಿಸಲು ಸರ್ಕಾರದ ವತಿಯಿಂದ ೫ ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿತ್ತು. ಕ್ರೀಡಾಕೂಟದ ಅವ್ಯವಸ್ಥೆ ಬಗ್ಗೆ ಪತ್ರಿಕೆಯಲ್ಲಿ ಬಂದಿರುವ ವರದಿಯನ್ನು ಗಮನಿಸಿ ನೋಟಿಸ್ ನೀಡಲಾಗಿದೆ.
– ಡಾ.ಶಾಲಿನಿ ರಜನೀಶ್ 

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago