ವರದಿ: ಬಿ.ಎನ್.ಧನಂಜಯಗೌಡ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೆಚ್ಚುತ್ತಿರುವ ಮನೆ ಕಳ್ಳತನ ಮತ್ತು ಪುಂಡು-ಪೋಕರಿಗಳ ಉಪಟಳ ನಿಯಂತ್ರಿಸಲು ಪೊಲೀಸರು ಜಾರಿಗೆ ತಂದಿರುವ ‘ಸ್ಮಾರ್ಟ್ ಇ-ಬೀಟ್ ವ್ಯವಸ್ಥೆ’ ಅತ್ಯುತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದು, ಮನೆ ಕಳವು, ಪುಂಡು-ಪೋಕರಿಗಳ ಉಪಟಳ ತಡೆಯಲು ನಗರದಲ್ಲಿ ೧೪೬೮ ಬೀಟ್ ಪಾಯಿಂಟ್ ವ್ಯವಸ್ಥೆ ಮಾಡಲಾಗಿದೆ.
ಪೊಲೀಸ್ ನೈಟ್ ಬೀಟ್ ವ್ಯವಸ್ಥೆ ಸರಿಯಿಲ್ಲ, ಬೀಟ್ನಲ್ಲಿರುವ ಪೊಲೀಸ್ ಸಿಬ್ಬಂದಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದಿಲ್ಲ, ವಾರಕ್ಕೊಮ್ಮೆ ಬಂದು ಹಾಜರಾತಿಗೆ ಇಡೀ ವಾರದ ಸಹಿ ಮಾಡುತ್ತಾರೆ ಎಂಬಿತ್ಯಾದಿ ದೂರುಗಳ ಹಿನ್ನೆಲೆಯಲ್ಲಿಯೇ ಒಂದು ವರ್ಷದ ಹಿಂದೆಯೇ ‘ಸ್ಮಾರ್ಟ್ ಇ-ಬೀಟ್ ವ್ಯವಸ್ಥೆ’ ಜಾರಿ ಮಾಡಲಾಗಿದೆ.
ಏನಿದು ಇ-ಬೀಟ್ ವ್ಯವಸ್ಥೆ ?: ಎಲೆಕ್ಟ್ರಾನಿಕ್ ಇ-ಬೀಟ್ ವ್ಯವಸ್ಥೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಅಭಿವೃದ್ಧಿ ಪಡಿಸಿದ ಆ್ಯಪ್ ಅನ್ನು ಸಿಬ್ಬಂದಿಯ ಮೊಬೈಲ್ಗಳಿಗೆ ಅಳವಡಿಸಲಾಗುತ್ತದೆ. ಬೀಟ್ನ ನಿಗದಿತ ಪಾಯಿಂಟ್ಗೆ ತೆರಳುವ ಪೊಲೀಸ್ ಸಿಬ್ಬಂದಿ ನಿರ್ದಿಷ್ಟ ಪ್ರದೇಶದಲ್ಲಿ ನಿಂತು ಆ್ಯಪ್ ಆನ್ ಮಾಡಬೇಕು. ಒಂದು ವೇಳೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದರೆ, ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬುದು ಪತ್ತೆಯಾಗುತ್ತದೆ. ಇನ್ನು ಈ ಆ್ಯಪ್ ಮೂಲಕವೇ ಸಿಬ್ಬಂದಿ ಬೀಟ್ನಲ್ಲಿ ಇದ್ದಾರಾ, ಇಲ್ಲವಾ ಎಂಬುದನ್ನು ಮೇಲಧಿಕಾರಿಗಳು ಖಾತ್ರಿ ಪಡಿಸಿಕೊಳ್ಳಬಹುದು.
ಪತ್ತೆ ಪ್ರಕರಣ: ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜುಲೈ ೧೮ರಂದು ಮೈಸೂರು ನಗರ ಸಿಟಿ ಬಸ್ ನಿಲ್ದಾಣದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿತ್ತು. ಆರೋಪಿಯು ತನ್ನ ಇನ್ನಿಬ್ಬರು ಸಹಚರರ ಜತೆ ಮೈಸೂರು ನಗರ, ಮೈಸೂರು, ಮಂಡ್ಯ ಹಾಗೂ ಬೆಂಗಳೂರು ಜಿಲ್ಲೆಗಳಲ್ಲಿ ಮನೆ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದನು.
ಈ ಇಬ್ಬರು ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಒಟ್ಟು ೯ ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಪಟ್ಟಂತೆ, ೧೦.೧೫ ಲಕ್ಷ ರೂ. ಮೌಲ್ಯದ ೧೯೧ ಗ್ರಾಂ ತೂಕದ ಚಿನ್ನಾಭರಣ, ೮.೩೩೦ ಗ್ರಾಂ ತೂಕದ ಬೆಳ್ಳಿ ಪದಾರ್ಥಗಳು, ಏರ್ ಗನ್ ವಶಪಡಿಸಿಕೊಳ್ಳಲಾಗಿತ್ತು. ಈ ಪ್ರಕರಣದಿಂದ ವಿಜಯನಗರ ಠಾಣೆ, ಮೇಟಗಳ್ಳಿ ಠಾಣೆ, ಕೆಆರ್ಎಸ್ ಠಾಣೆ, ಬೆಂಗಳೂರಿನ ಕುಂಬಳಗೋಡು ಠಾಣೆಯ ತಲಾ ೧ ಪ್ರಕರಣ. ಇಲವಾಲ ಠಾಣೆಯ ೨, ಮೈಸೂರು ದಕ್ಷಿಣ ಠಾಣೆಗೆ ಸಂಬಂಧಿಸಿದ ೩ ಪ್ರಕರಣಗಳು ಪತ್ತೆಯಾದಂತಾಗಿವೆ.
ಹೆಚ್ಚಿನ ಪ್ರಕರಣಗಳು ಎಲ್ಲಿ : ಪ್ರಸ್ತಕ ವರ್ಷ ಜುಲೈವರೆಗೂ ೫೬ ಮನೆ ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ೧೬ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿದೆ. ಈ ಪೈಕಿ ಶೇ.೫೦ರಷ್ಟು ಕುವೆಂಪುನಗರ, ವಿಜಯನಗರ, ಮೇಟಗಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನುತ್ತವೆ ಪೊಲೀಸ್ ಮೂಲಗಳು.
ಮೈಸೂರಿನಲ್ಲಿ ಅತ್ಯುತ್ತಮವಾದ ಸ್ಮಾರ್ಟ್ ಇ-ಬೀಟ್ ವ್ಯವಸ್ಥೆ ಇದೆ. ಬೀಟ್ ಸಿಬ್ಬಂದಿ ಎಲ್ಲಿ ಹೋಗುತ್ತಿದ್ದಾರೆ, ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಾಗುತ್ತದೆ. ಈ ಸಂಬಂಧ ಬೀಟ್ ಕಮಿಟಿ ಮಾಡಲಾಗಿದೆ. ನಗರದಲ್ಲಿ ಬೀಟ್ ವ್ಯವಸ್ಥೆ ಮೊದಲಿಗಿಂತಲೂ ಉತ್ತಮವಾಗಿದೆ. ಮನೆಗೆ ಬೀಗ ಹಾಕಿಕೊಂಡು ಬೇರೆ ಊರುಗಳಿಗೆ ಹೋಗುವವರು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದು. ಸಹಾಯವಾಣಿ ೧೧೨ಕ್ಕೆ ಕರೆ ಮಾಡಿಯೂ ಮಾಹಿತಿ ನೀಡಬಹುದು. -ಡಾ.ಚಂದ್ರಗುಪ್ತ, ನಗರ ಪೊಲೀಸ್ ಆಯುಕ್ತ, ಮೈಸೂರು
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…