ಜಿಲ್ಲೆಗಳು

ಶಿಕ್ಷಣ ಸುಸಂಸ್ಕೃತ ವ್ಯಕ್ತಿಯಾಗಿ ರೂಪಿಸಬೇಕು : ಶಾಸಕ ಅರ್.ನರೇಂದ್ರ

ಹನೂರು : ಮಕ್ಕಳಿಗೆ ಶಿಕ್ಷಣ ನೀಡಿದರೆ ಮಾತ್ರ ಸಾಲದು. ಸರ್ವತೋಮುಖ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಸುಸಂಸ್ಕೃತ ವ್ಯಕ್ತಿಯಾಗಿ ರೂಪಿಸಬೆಕು ಎಂದು ಶಾಸಕ ಅರ್.ನರೇಂದ್ರ ತಿಳಿಸಿದರು.

ಪಟ್ಟಣದ ಕ್ರಿಸ್ತರಾಜ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೆಚ್ಚಿನ ಅಂಕ ಗಳಿಸಬೇಕು ಎನ್ನುವ ಮನೋಭಾವನೆಯನ್ನು ಪಾಲಕರು ಹೊಂದಿದ್ದಾರೆ. ಆದರೆ ಅಂಕ ಗಳಿಸಿದರೆ ಮಾತ್ರ ಶಿಕ್ಷಣ ಪರಿಪೂರ್ಣವಾಗದು. ಅದ್ದರಿಂದ ಪಾಲಕರು ಮಕ್ಕಳ ಗುಣ, ನಡತೆ ಹಾಗೂ ಹಾವಭಾವವನ್ನು ಪ್ರತಿನಿತ್ಯ ಗಮನಿಸಬೇಕು. ಈ ಮೂಲಕ ನೈತಿಕ ನಿಯಮಗಳನ್ನು ಅನುಸರಿಸುವಂತೆ ಮಾಡುವುದರ ಮೂಲಕ ಸನ್ನಡತೆಯುಳ್ಳ ವ್ಯಕ್ತಿಯಾಗಿ ರೂಪಿಸಬೇಕು. ಜತೆಗೆ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಹೊರತೆಗೆದು ಸಾಧನೆ ಮಾಡಲು ಪ್ರೇರಿಸಬೇಕು. ಅಲ್ಲದೇ ಇತ್ತೀಚಗೆ ವಿದ್ಯಾರ್ಥಿಗಳು ಮೊಬೈಲ್‌ನಿಂದ ಪ್ರೇರಿತರಾಗಿದ್ದು, ಹೆಚ್ಚು ಸಮಯ ಅದರ ಬಳಕೆಯಲ್ಲಿ ತೊಡಗಿದ್ದಾರೆ. ಮೊಬೈಲ್ ಬಳಕೆಯಿಂದ ಅನುಕೂಲವೂ ಉಂಟು. ಅಷ್ಟೇ ಅನಾನುಕೂಲವು ಇದೆ. ಇದರಿಂದ ಶಿಕ್ಷಣ ಮೇಲೆ ವ್ಯತೀರಿಕ್ತ ಪರಿಣಾಮ ಬೀರಲಿದೆ. ಅದ್ದರಿಂದ ಮೊಬೈಲ್ ಬಳಕೆಯಿಂದ ಮಕ್ಕಳು ಆದಷ್ಟು ದೂರವಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಹನೂರು ಭಾಗವು ಆರ್ಥಿಕವಾಗಿ ಸ್ವಲ್ಪ ಹಿಂದುಳಿದಿರಬಹುದು. ಆದರೆ ಶೈಕ್ಷಣಿಕವಾಗಿ ಅಭಿವೃದ್ದಿ ಹೊಂದಿದ್ದು, ಗಮನಾರ್ಹ ಸಾಧನೆ ಮಾಡಿದೆ. ಕಳೆದ ೨೦ ವರ್ಷಗಳಿಂದ ಶೈಕ್ಷಣಿಕ ವಲಯವು ಶೈಕ್ಷಣಿಕವಾಗಿ ಪ್ರಗತಿ ಹೊಂದಿದ್ದು, ಕಳೆದ ೫ ವರ್ಷದಿಂದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನವನ್ನು ಪಡೆಯುತ್ತಾ ಬಂದಿದೆ. ಅಲ್ಲದೇ ಪಿಯುಸಿಯಲ್ಲೂ ಸಹ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು, ಜಿಲ್ಲೆ ಹಾಗೂ ಶೈಕ್ಷಣಿಕ ವಲಯಕ್ಕೆ ಕೀರ್ತಿ ತಂದಿದ್ದಾರೆ ಎಂದು ಶಾಸಕರು ಪ್ರಶಂಸೆ ವ್ಯಕ್ತಪಡಿಸಿದರು.

ಕ್ರೈಸ್ತ ಪ್ರಾಂತೀಯ ಧರ್ಮಗುರು ಅಂತೋಣಿ ವಿಲಿಯಂ ಮಾತನಾಡಿ, ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳು ಬರೀ ಕ್ರೈಸ್ತ ಸಮುದಾಯಕ್ಕೆ ಮಾತ್ರ ಸೀಮಿತವಲ್ಲ. ಎಲ್ಲಾ ವರ್ಗದ ಮಕ್ಕಳಿಗೂ ಶಿಕ್ಷಣವನ್ನು ನೀಡಲಾಗುತ್ತಿದೆ. ಇತ್ತೀಚಗೆ ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ಹಿನ್ನಡೆಯಾಗುತ್ತಿದೆ. ಆದ್ದರಿಂದ ಮಕ್ಕಳಲ್ಲಿ ವಿನಯತೆ, ಸರಳತೆ, ಸನ್ನಡತೆಯನ್ನು ಕಲಿಸುವುದರ ಮೂಲಕ ಸುಸಂಸ್ಕೃತ ವ್ಯಕ್ತಿಯನ್ನಾಗಿ ರೂಪಿಸಬೇಕಿದೆ ಎಂದು ತಿಳಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಎಂಡಿಇಎಸ್ ಸಂಸ್ಥೆಯ ಕಾರ್ಯದರ್ಶಿ ವಿಜಯ್‌ಕುಮಾರ್, ಕ್ರಿಸ್ತರಾಜ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ಫಾದರ್ ರೋಷನ್‌ಬಾಬು, ಧರ್ಮಗುರುಗಳಾದ ಬೆರ್ನಾಡ್ ಪ್ರಕಾಶ್, ಟೆನ್ನಿಕುರಿಯನ್, ಮದಲೈಮುತ್ತು, ಪಪಂ ಅಧ್ಯಕ್ಷೆ ಚಂದ್ರಮ್ಮ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

andolanait

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

1 hour ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

2 hours ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

2 hours ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

2 hours ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago