ಜಿಲ್ಲೆಗಳು

ಶಿಕ್ಷಣದಿಂದ ಮಾತ್ರ ಬಡತನ ಮೆಟ್ಟಿ ನಿಲ್ಲಲು ಸಾಧ್ಯ : ಪ್ರತಿಬಿಂಬ ಟ್ರಸ್ಟ್ ಮುಖ್ಯಸ್ಥ ಮುರುಳಿ

ಹನೂರು : ಗ್ರಾಮೀಣ ಭಾಗದ ಮಕ್ಕಳು ಸಹ ಈಗಿನಿಂದಲೇ  ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಆ ನಿಟ್ಟಿನಲ್ಲಿ ಕಂಪ್ಯೂಟರ್ ಸದುಪಯೋಗ ಮಾಡಿಕೊಳ್ಳಿ  ಅಲ್ಲದೆ ಶಿಕ್ಷಣದಿಂದ ಮಾತ್ರ ಬಡತನ ಮೆಟ್ಟಿ ನಿಲ್ಲಲು ಸಾಧ್ಯ  ಎಂದು ಪ್ರತಿಬಿಂಬ ಟ್ರಸ್ಟ್ ನ ಮುಖ್ಯಸ್ಥರಾದ ಮುರುಳಿ ಹೇಳಿದರು..

ತಾಲ್ಲೂಕಿನ ಕುರಟ್ಟಿ ಹೊಸೂರು ಕಾಲೋನಿ ಶಾಲೆಗೆ ಉಚಿತವಾಗಿ ಕಂಪ್ಯೂಟರ್, ಹಾಗೂ ಬ್ಯಾಗ್, ಲೇಖನ ಸಾಮಾಗ್ರಿಗಳು,ಶಾಲಾ ಕಟ್ಟಡಗಳಿಗೆ ಬಣ್ಣದ ಸಾಮಗ್ರಿಗಳು  ವಿತರಣೆ ಮಾಡಿ ಮಾತನಾಡಿದರು..
ಸ್ಪರ್ಧಾತ್ಮಕ ಯುಗದಲ್ಲಿ ಬದುಕುತ್ತಿರುವ ನಮಗೆ ಕಂಪ್ಯೂಟರ್ ಜ್ಞಾನ ತುಂಬಾ ಅಗತ್ಯವಾಗಿದೆ.ಆ ನಿಟ್ಟಿನಲ್ಲಿ ಮಕ್ಕಳು ಈಗಿಂದಲೇ ಅಭ್ಯಾಸ ಮಾಡುವಂತವರಾಗಬೇಕು ಅಲ್ಲದೆ ಓದಿಗೆ ಕೊರತೆಯಾಗಬಾರದು ಎಂಬ ಉದ್ದೇಶದಿಂದ ಲೇಖನ ಸಾಮಗ್ರಿಗಳು, ಬ್ಯಾಗ್ ನೀಡುತ್ತಿದ್ದು ಎಲ್ಲರೂ ಸಹ ಸದುಪಯೋಗ ಮಾಡಿಕೊಳ್ಳಿ ಎಂದು ಕರೆ ನೀಡಿದರು.ಅಲ್ಲದೆ ಮಕ್ಕಳು ಕಲಿಕೆಯಲ್ಲಿ ಮುಂದೆ ಬರಲು ಶಾಲಾ ವಾತಾವರಣ ಸಹ ತುಂಬಾ ಮುಖ್ಯ ಪಾತ್ರವಹಿಸಲಿದೆ ಆ ನಿಟ್ಟಿನಲ್ಲಿ ಶಾಲೆಗೆ ತುಂಬಾ ಅಗತ್ಯವಾದ ಬಣ್ಣ ಬಳಿಯುವ ಕೆಲಸ ಸಹ ಆಗಬೇಕಿದೆ. ಅದನ್ನು ಸಹ ನಾವು ಕೊಡುತ್ತೇವೆ ಒಟ್ಟಿನಲ್ಲಿ ಶಾಲಾ ಮಕ್ಕಳಿಗೆ ಅನುಕೂಲ ಆಗಬೇಕು ಓದಿನಲ್ಲಿ ಮುಂದೆ ಬಂದು ತಮ್ಮ ಜೀವನ ಸುಗಮವಾಗಿ ಕಟ್ಟಿಕೊಳ್ಳಲು ಅನುಕೂಲ ಆಗಬೇಕು ಎಂದರು..
ಕುರಟ್ಟಿ ಹೊಸೂರು ಕಾಲೋನಿ ಶಾಲೆಯ ಶಿಕ್ಷಕ ಭರತ್ ಮಾತನಾಡಿ ನಮ್ಮ  ಕಾಡಂಚಿನ  ಶಾಲೆ ಗುರುತಿಸಿ ಶಾಲೆಯಲ್ಲಿನ   ಮಕ್ಕಳು  ಓದಿನಲ್ಲಿ ಮುಂದೆ ಬರಲಿ ಎಂಬ ಉದ್ದೇಶದಿಂದ ಪ್ರತಿಬಿಂಬ ಟ್ರಸ್ಟ್ ಇಂದು ಸಾಕಷ್ಟು ವಸ್ತುಗಳನ್ನು ದಾನ ನೀಡಿದೆ  ನಮ್ಮ ಕಾಡಂಚಿನ ಶಾಲೆ ಗುರುತಿಸಿದ್ದಕ್ಕಾಗಿ ಹಾಗೂ ದಾನಿಗಳಾಗಿ ಸಾಕಷ್ಟು ವಸ್ತು ನೀಡಿದ್ದಕ್ಕಾಗಿ  ಟ್ರಸ್ಟ್ ನ ಎಲ್ಲ ಪದಾಧಿಕಾರಿಗಳು ಹಾಗೂ ಎಲ್ಲರಿಗೂ ಶಾಲೆಯ ಪರವಾಗಿ ಅಭಿನಂದನೆಗಳು ಎಂದರು.

ಇದೆ ಸಂದರ್ಭದಲ್ಲಿ ಶಿಕ್ಷಕ ರಾಮಕೃಷ್ಣ, ರಾಜೇಂದ್ರ ಬಾಬು, ಅತಿಥಿ ಶಿಕ್ಷಕರಾದ ಮಹೇಶ್, ವಸಂತ,  ಹಾಗೂ ಪ್ರತಿಬಿಂಬ ಟ್ರಸ್ಟ್ ನ ಪದಾಧಿಕಾರಿಗಳು, ಮಕ್ಕಳು, ಪೋಷಕರು  ಉಪಸ್ಥಿತರಿದ್ದರು..

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago