ಜಿಲ್ಲೆಗಳು

ಕೊಡಗಿನಲ್ಲಿ ವಿಭಿನ್ನ ವಾತಾವರಣ ಸೃಷ್ಟಿಸಿದ ಎಲ್‌ನಿನೋ!

ಮಡಿಕೇರಿ: ಜಿಲ್ಲೆಯಲ್ಲಿ ಈಗ ನೈಜ ಚಳಿಗಾಲ ಶುರುವಾದಂತೆ ವಾತಾವರಣ ಕಂಡು ಬರುತ್ತಿದೆ. ಬೆಳಗ್ಗಿನ ವೇಳೆಯಲ್ಲಿ ಸಹಿಸಲು ಸಾಧ್ಯವಾಗಷ್ಟು ಚಳಿ ಮೈ ನಡುಗಿಸುತ್ತಿದೆ. ಹೊತ್ತೇರುತ್ತಿದ್ದಂತೆಯೇ ಬಿಸಿಲಿನ ತಾಪ ಅಧಿಕವಾಗುತ್ತಿದ್ದು, ದೇಹವೆಲ್ಲಾ ಉರಿಯುವಂತೆ ಶಾಖದ ಅನುಭವ ಆಗುತ್ತಿದೆ.

ಎಲ್‌ನಿನೋ ಪರಿಣಾಮದಿಂದ ಇಂತಹ ಪರಿಸ್ಥಿತಿ ಉಂಟಾಗಿದ್ದು, ಇನ್ನೂ ೫-೭ ದಿನ ಇದೇ ರೀತಿಯ ಸನ್ನಿವೇಶ ಇರಲಿದೆ ಎನ್ನುತ್ತಾರೆ ಹವಾಮಾನ ತಜ್ಞರು. ಚಳಿಗಾಲದ ಅನುಭವ ಕೊಡುವ ಗಡ ಗಡ ನಡುಗಿಸುವ ಚಳಿ ಈಗ ಕಂಡು ಬರುತ್ತಿದೆ. ಕಳೆದ ಕೆಲ ದಿನಗಳಿಂದ ಶುಭ್ರ ಆಕಾಶವಿದ್ದು, ಬೆಳಗ್ಗಿನ ವಿಪರೀತ ಚಳಿ ಸಹಿಸಲಸಾಧ್ಯವಾದಷ್ಟು ಹೆಚ್ಚು ಇರುವ ಅನುಭವ ಆಗುತ್ತಿದೆ. ಸಾಮಾನ್ಯವಾಗಿ ನವೆಂಬರ್ ಮಧ್ಯ ಅಥವಾ ಕೊನೆಯಲ್ಲಿ ಆರಂಭವಾಗಬೇಕಿದ್ದ ಚಳಿಗಾಲ ಈ ಬಾರಿ ಜನವರಿ ಅಂತ್ಯಕ್ಕೆ ಕಾಣಿಸಿಕೊಂಡಂತಿದೆ.

ಎಲ್‌ನಿನೋ ಎಂದರೇನು?

ಫೆಸಿಫಿಕ್‌ ಸಾಗರದಲ್ಲಿ ಉಂಟಾಗುವ ಬಿಸಿ ನೀರಿನ ಪ್ರವಾಹಕ್ಕೆ ಎಲ್‌ನಿನೋ ಎನ್ನುತ್ತಾರೆ. ಇನ್ನು ಭಾರತದಲ್ಲಿ ಮಾನ್ಸೂನ್‌ ಮಳೆ ಪ್ರಮಾಣದಲ್ಲಿ ಕುಸಿತ ಉಂಟಾಗುವುದು ಹಾಗೂ ಬಿಸಿ ಗಾಳಿ ಬೀಸುವುದಕ್ಕೆ ಎಲ್‌ನಿನೋ ಎಂದು ಕರೆಯಲಾಗುತ್ತದೆ.

andolana

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

14 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago