ಮಡಿಕೇರಿ: ಜಿಲ್ಲೆಯಲ್ಲಿ ಈಗ ನೈಜ ಚಳಿಗಾಲ ಶುರುವಾದಂತೆ ವಾತಾವರಣ ಕಂಡು ಬರುತ್ತಿದೆ. ಬೆಳಗ್ಗಿನ ವೇಳೆಯಲ್ಲಿ ಸಹಿಸಲು ಸಾಧ್ಯವಾಗಷ್ಟು ಚಳಿ ಮೈ ನಡುಗಿಸುತ್ತಿದೆ. ಹೊತ್ತೇರುತ್ತಿದ್ದಂತೆಯೇ ಬಿಸಿಲಿನ ತಾಪ ಅಧಿಕವಾಗುತ್ತಿದ್ದು, ದೇಹವೆಲ್ಲಾ ಉರಿಯುವಂತೆ ಶಾಖದ ಅನುಭವ ಆಗುತ್ತಿದೆ.
ಎಲ್ನಿನೋ ಪರಿಣಾಮದಿಂದ ಇಂತಹ ಪರಿಸ್ಥಿತಿ ಉಂಟಾಗಿದ್ದು, ಇನ್ನೂ ೫-೭ ದಿನ ಇದೇ ರೀತಿಯ ಸನ್ನಿವೇಶ ಇರಲಿದೆ ಎನ್ನುತ್ತಾರೆ ಹವಾಮಾನ ತಜ್ಞರು. ಚಳಿಗಾಲದ ಅನುಭವ ಕೊಡುವ ಗಡ ಗಡ ನಡುಗಿಸುವ ಚಳಿ ಈಗ ಕಂಡು ಬರುತ್ತಿದೆ. ಕಳೆದ ಕೆಲ ದಿನಗಳಿಂದ ಶುಭ್ರ ಆಕಾಶವಿದ್ದು, ಬೆಳಗ್ಗಿನ ವಿಪರೀತ ಚಳಿ ಸಹಿಸಲಸಾಧ್ಯವಾದಷ್ಟು ಹೆಚ್ಚು ಇರುವ ಅನುಭವ ಆಗುತ್ತಿದೆ. ಸಾಮಾನ್ಯವಾಗಿ ನವೆಂಬರ್ ಮಧ್ಯ ಅಥವಾ ಕೊನೆಯಲ್ಲಿ ಆರಂಭವಾಗಬೇಕಿದ್ದ ಚಳಿಗಾಲ ಈ ಬಾರಿ ಜನವರಿ ಅಂತ್ಯಕ್ಕೆ ಕಾಣಿಸಿಕೊಂಡಂತಿದೆ.
ಎಲ್ನಿನೋ ಎಂದರೇನು?
ಫೆಸಿಫಿಕ್ ಸಾಗರದಲ್ಲಿ ಉಂಟಾಗುವ ಬಿಸಿ ನೀರಿನ ಪ್ರವಾಹಕ್ಕೆ ಎಲ್ನಿನೋ ಎನ್ನುತ್ತಾರೆ. ಇನ್ನು ಭಾರತದಲ್ಲಿ ಮಾನ್ಸೂನ್ ಮಳೆ ಪ್ರಮಾಣದಲ್ಲಿ ಕುಸಿತ ಉಂಟಾಗುವುದು ಹಾಗೂ ಬಿಸಿ ಗಾಳಿ ಬೀಸುವುದಕ್ಕೆ ಎಲ್ನಿನೋ ಎಂದು ಕರೆಯಲಾಗುತ್ತದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…