ಜಿಲ್ಲೆಗಳು

ಕೊಡಗಿನಲ್ಲಿ ವಿಭಿನ್ನ ವಾತಾವರಣ ಸೃಷ್ಟಿಸಿದ ಎಲ್‌ನಿನೋ!

ಮಡಿಕೇರಿ: ಜಿಲ್ಲೆಯಲ್ಲಿ ಈಗ ನೈಜ ಚಳಿಗಾಲ ಶುರುವಾದಂತೆ ವಾತಾವರಣ ಕಂಡು ಬರುತ್ತಿದೆ. ಬೆಳಗ್ಗಿನ ವೇಳೆಯಲ್ಲಿ ಸಹಿಸಲು ಸಾಧ್ಯವಾಗಷ್ಟು ಚಳಿ ಮೈ ನಡುಗಿಸುತ್ತಿದೆ. ಹೊತ್ತೇರುತ್ತಿದ್ದಂತೆಯೇ ಬಿಸಿಲಿನ ತಾಪ ಅಧಿಕವಾಗುತ್ತಿದ್ದು, ದೇಹವೆಲ್ಲಾ ಉರಿಯುವಂತೆ ಶಾಖದ ಅನುಭವ ಆಗುತ್ತಿದೆ.

ಎಲ್‌ನಿನೋ ಪರಿಣಾಮದಿಂದ ಇಂತಹ ಪರಿಸ್ಥಿತಿ ಉಂಟಾಗಿದ್ದು, ಇನ್ನೂ ೫-೭ ದಿನ ಇದೇ ರೀತಿಯ ಸನ್ನಿವೇಶ ಇರಲಿದೆ ಎನ್ನುತ್ತಾರೆ ಹವಾಮಾನ ತಜ್ಞರು. ಚಳಿಗಾಲದ ಅನುಭವ ಕೊಡುವ ಗಡ ಗಡ ನಡುಗಿಸುವ ಚಳಿ ಈಗ ಕಂಡು ಬರುತ್ತಿದೆ. ಕಳೆದ ಕೆಲ ದಿನಗಳಿಂದ ಶುಭ್ರ ಆಕಾಶವಿದ್ದು, ಬೆಳಗ್ಗಿನ ವಿಪರೀತ ಚಳಿ ಸಹಿಸಲಸಾಧ್ಯವಾದಷ್ಟು ಹೆಚ್ಚು ಇರುವ ಅನುಭವ ಆಗುತ್ತಿದೆ. ಸಾಮಾನ್ಯವಾಗಿ ನವೆಂಬರ್ ಮಧ್ಯ ಅಥವಾ ಕೊನೆಯಲ್ಲಿ ಆರಂಭವಾಗಬೇಕಿದ್ದ ಚಳಿಗಾಲ ಈ ಬಾರಿ ಜನವರಿ ಅಂತ್ಯಕ್ಕೆ ಕಾಣಿಸಿಕೊಂಡಂತಿದೆ.

ಎಲ್‌ನಿನೋ ಎಂದರೇನು?

ಫೆಸಿಫಿಕ್‌ ಸಾಗರದಲ್ಲಿ ಉಂಟಾಗುವ ಬಿಸಿ ನೀರಿನ ಪ್ರವಾಹಕ್ಕೆ ಎಲ್‌ನಿನೋ ಎನ್ನುತ್ತಾರೆ. ಇನ್ನು ಭಾರತದಲ್ಲಿ ಮಾನ್ಸೂನ್‌ ಮಳೆ ಪ್ರಮಾಣದಲ್ಲಿ ಕುಸಿತ ಉಂಟಾಗುವುದು ಹಾಗೂ ಬಿಸಿ ಗಾಳಿ ಬೀಸುವುದಕ್ಕೆ ಎಲ್‌ನಿನೋ ಎಂದು ಕರೆಯಲಾಗುತ್ತದೆ.

andolana

Recent Posts

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

5 mins ago

ಮಡಿಕೇರಿ | ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ; ಸಾರ್ವಜನಿಕೆ ಕೆಲಸ ವಿಳಂಬ

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…

18 mins ago

ಎಚ್.ಡಿ.ಕೋಟೆ | ಉತ್ತಮ ಮಳೆ ; ಕೃಷಿ ಚಟುವಟಿಕೆ ಚುರುಕುಗೊಳಿಸಿದ ರೈತರು

ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…

23 mins ago

ಚಾ.ನಗರ ವಿ.ವಿ | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಎಚ್‌.ಡಿಗೆ ಅವಕಾಶ

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…

54 mins ago

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

3 hours ago