ಮಡಿಕೇರಿ: ಜಿಲ್ಲೆಯಲ್ಲಿ ಈಗ ನೈಜ ಚಳಿಗಾಲ ಶುರುವಾದಂತೆ ವಾತಾವರಣ ಕಂಡು ಬರುತ್ತಿದೆ. ಬೆಳಗ್ಗಿನ ವೇಳೆಯಲ್ಲಿ ಸಹಿಸಲು ಸಾಧ್ಯವಾಗಷ್ಟು ಚಳಿ ಮೈ ನಡುಗಿಸುತ್ತಿದೆ. ಹೊತ್ತೇರುತ್ತಿದ್ದಂತೆಯೇ ಬಿಸಿಲಿನ ತಾಪ ಅಧಿಕವಾಗುತ್ತಿದ್ದು, ದೇಹವೆಲ್ಲಾ ಉರಿಯುವಂತೆ ಶಾಖದ ಅನುಭವ ಆಗುತ್ತಿದೆ.
ಎಲ್ನಿನೋ ಪರಿಣಾಮದಿಂದ ಇಂತಹ ಪರಿಸ್ಥಿತಿ ಉಂಟಾಗಿದ್ದು, ಇನ್ನೂ ೫-೭ ದಿನ ಇದೇ ರೀತಿಯ ಸನ್ನಿವೇಶ ಇರಲಿದೆ ಎನ್ನುತ್ತಾರೆ ಹವಾಮಾನ ತಜ್ಞರು. ಚಳಿಗಾಲದ ಅನುಭವ ಕೊಡುವ ಗಡ ಗಡ ನಡುಗಿಸುವ ಚಳಿ ಈಗ ಕಂಡು ಬರುತ್ತಿದೆ. ಕಳೆದ ಕೆಲ ದಿನಗಳಿಂದ ಶುಭ್ರ ಆಕಾಶವಿದ್ದು, ಬೆಳಗ್ಗಿನ ವಿಪರೀತ ಚಳಿ ಸಹಿಸಲಸಾಧ್ಯವಾದಷ್ಟು ಹೆಚ್ಚು ಇರುವ ಅನುಭವ ಆಗುತ್ತಿದೆ. ಸಾಮಾನ್ಯವಾಗಿ ನವೆಂಬರ್ ಮಧ್ಯ ಅಥವಾ ಕೊನೆಯಲ್ಲಿ ಆರಂಭವಾಗಬೇಕಿದ್ದ ಚಳಿಗಾಲ ಈ ಬಾರಿ ಜನವರಿ ಅಂತ್ಯಕ್ಕೆ ಕಾಣಿಸಿಕೊಂಡಂತಿದೆ.
ಎಲ್ನಿನೋ ಎಂದರೇನು?
ಫೆಸಿಫಿಕ್ ಸಾಗರದಲ್ಲಿ ಉಂಟಾಗುವ ಬಿಸಿ ನೀರಿನ ಪ್ರವಾಹಕ್ಕೆ ಎಲ್ನಿನೋ ಎನ್ನುತ್ತಾರೆ. ಇನ್ನು ಭಾರತದಲ್ಲಿ ಮಾನ್ಸೂನ್ ಮಳೆ ಪ್ರಮಾಣದಲ್ಲಿ ಕುಸಿತ ಉಂಟಾಗುವುದು ಹಾಗೂ ಬಿಸಿ ಗಾಳಿ ಬೀಸುವುದಕ್ಕೆ ಎಲ್ನಿನೋ ಎಂದು ಕರೆಯಲಾಗುತ್ತದೆ.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…