ಜಿಲ್ಲೆಗಳು

ಜನವರಿಯಿಂದ ಚುನಾವಣಾ ಪ್ರಚಾರ: ಎಚ್‌ಡಿಡಿ

ಜಾ.ದಳ ಅಭ್ಯರ್ಥಿಗಳ ಮೊದಲ ಪಟ್ಟಿ ಶಾಶ್ವತ ಅಲ್ಲ; ಬದಲಾವಣೆ ಆಗಲಿದೆ

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಮುಂದಿನ ತಿಂಗಳಿನಿಂದ ನಾನು ಕೂಡ ಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ ಎಂದು ಜಾ.ದಳದ ವರಿಷ್ಠ ಹಾಗೂ ಮಾಜಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ನಂಜನಗೂಡಿಗೆ ತೆರಳುವ ಮುನ್ನ ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ನಮ್ಮ ಪಕ್ಷದ ನಾಯಕರೆಲ್ಲರೂ ‘ಪಂಚರತ್ನ’ ಯಾತ್ರೆ ಮಾಡುತ್ತಿದ್ದಾರೆ. ಯಾತ್ರೆಗೆ ಜನರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

‘ಪಂಚರತ್ನ’ ಯಾತ್ರೆ ಸಾಗುತ್ತಿರುವ ಪ್ರತಿ ಹಳ್ಳಿಗಳಲ್ಲೂ ನಮ್ಮ ಪಕ್ಷದ ಶಾಸಕರು, ಮುಖಂಡರು, ಮಾಜಿ ಶಾಸಕರು ಒಂದೊಂದು ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಮನೆ ಮನೆ ತೆರಳಿ ಪಕ್ಷದ ಪರವಾಗಿ ಕೆಲಸ ಮಾಡಲು ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇನೆ ಎಂದರು.

ಜಾ.ದಳ ಅಭ್ಯರ್ಥಿಗಳ ಮೊದಲ ಪಟ್ಟಿ ಶಾಶ್ವತ ಅಲ್ಲ. ಪ್ರತಿ ದಿನ ಪಟ್ಟಿ ಬದಲಾವಣೆ ಆಗುತ್ತದೆ. ಪ್ರತಿ ದಿನ ಸಮೀಕ್ಷೆಯೂ ನಡೆಯುತ್ತಿದೆ. ಅದನ್ನು ಆಧರಿಸಿ ನಿರ್ಧಾರ ಆಗುತ್ತದೆ. ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಶಿವಲಿಂಗೇಗೌಡರು ಕುಮಾರಸ್ವಾಮಿ ಜೊತೆ ಮಾತನಾಡಿದ್ದಾರೆ. ದ್ವಂದ್ವ ಇದೆ ಇನ್ನೂ ಸಮಸ್ಯೆ ಬಗೆಹರಿದಿಲ್ಲ ಎಂದು ಪ್ರತಿಕ್ರಿಯಿಸಿದರು.

ಹಾಸನ ಟಿಕೆಟ್‌ಗೆ ಪಕ್ಷದಲ್ಲಿ ಬಹಳ ಮಂದಿ ಆಕಾಂಕ್ಷಿಗಳಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಹಾಗೂ ಎಚ್.ಡಿ.ರೇವಣ್ಣ ಚರ್ಚಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತಾರೆ. ಮುಂದೆ ಯಾರು ಮುಖ್ಯಮಂತ್ರಿ ಆಗಬೇಕು ಎಂಬುದನ್ನು ಜನರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.

ಹಾಸನದಲ್ಲಿ ಶಾಸಕ ಪ್ರೀತಂ ಗೌಡನಿಗೆ ಬಿ.ಎಸ್.ಯಡಿಯೂರಪ್ಪ ಸರ್ಕಾರವಿದ್ದಾಗ ಸರ್ವ ಶಕ್ತಿ ಕೊಟ್ಟಿದೆ. ಯಾವ್ಯಾವ ಕೆಲಸ ಕೊಟ್ಟಿದ್ದಾರೆ? ಅದರಿಂದ ಎಷ್ಟು ಹಣ ಸಂಪಾದಿಸಿದ್ದಾರೆ? ಅವರ ಶಕ್ತಿಗೆ ಯಡಿಯೂರಪ್ಪ ಹಾಗೂ ಅವರ ಮಕ್ಕಳೇ ಕಾರಣ. ಯಾರ ಹೆದರಿಕೆಗೂ ನಾವು ಬಗ್ಗುವುದಿಲ್ಲ ಎಂದು ಗುಡುಗಿದರು.

andolana

Recent Posts

ಕಾಡುಕೋಣ ಡಿಕ್ಕಿ : ಪಲ್ಟಿಯಾದ ಗೂಡ್ಸ್‌ ವಾಹನ

ಸಿದ್ದಾಪುರ : ಕಾಡುಕೋಣ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾದ ಘಟನೆ ಸಮೀಪದ ಕರಡಿಗೋಡು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.…

8 mins ago

ದೇವಾಲಯಗಳಲ್ಲಿ ರೀಲ್ಸ್‌ಗೆ ಶುಲ್ಕ

ಬೆಂಗಳೂರು : ಇಂದಿನ ಯುವ ಜನಾಂಗದಲ್ಲಿ ಹೆಚ್ಚುತ್ತಿರುವ ರೀಲ್ಸ್ ಹುಚ್ಚನ್ನು ಎನ್‍ಕ್ಯಾಶ್ ಮಾಡಿಕೊಳ್ಳುವ ಹೊಸ ಐಡಿಯಾವನ್ನು ಮುಜರಾಯಿ ಇಲಾಖೆ ಕಂಡುಕೊಂಡಿದೆ.…

45 mins ago

ಸ್ನೇಹಮಯಿ ಕೃಷ್ಣ ಸಿಸಿಬಿ ಪೊಲೀಸ್ ವಶಕ್ಕೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ಪ್ರಮುಖ ದೂರುದಾರ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು…

1 hour ago

ಏಪ್ರಿಲ್‌ನಿಂದ ವಿದ್ಯುತ್‌ ದರ ಹೆಚ್ಚಳ

ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್‍ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ…

2 hours ago

ಮೈಸೂರು | ಅನಧಿಕೃತ ಪ್ಲೇಕ್ಸ್, ಬ್ಯಾನರ್ ತೆರವುಗೊಳಿಸಿ ; ಜಿಲ್ಲಾಧಿಕಾರಿ ಆದೇಶ

ಮೈಸೂರು : ಸಂಘ ಸಂಸ್ಥೆ, ಸಂಘಟನೆಗಳು, ಸಾರ್ವಜನಿಕರು ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಪ್ಲೇಕ್ಸ್ ಮತ್ತು ಬ್ಯಾನರ್ ಗಳನ್ನು ಅಳವಡಿಸಬೇಕಾದ್ದಲ್ಲಿ…

2 hours ago

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : ಸಿಎಂ ಖಂಡನೆ, ಶಾಂತಿ-ಸೌಹಾರ್ದತೆಗೆ ಮನವಿ

ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…

4 hours ago