ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಮುಂದಿನ ತಿಂಗಳಿನಿಂದ ನಾನು ಕೂಡ ಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ ಎಂದು ಜಾ.ದಳದ ವರಿಷ್ಠ ಹಾಗೂ ಮಾಜಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ನಂಜನಗೂಡಿಗೆ ತೆರಳುವ ಮುನ್ನ ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ನಮ್ಮ ಪಕ್ಷದ ನಾಯಕರೆಲ್ಲರೂ ‘ಪಂಚರತ್ನ’ ಯಾತ್ರೆ ಮಾಡುತ್ತಿದ್ದಾರೆ. ಯಾತ್ರೆಗೆ ಜನರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.
‘ಪಂಚರತ್ನ’ ಯಾತ್ರೆ ಸಾಗುತ್ತಿರುವ ಪ್ರತಿ ಹಳ್ಳಿಗಳಲ್ಲೂ ನಮ್ಮ ಪಕ್ಷದ ಶಾಸಕರು, ಮುಖಂಡರು, ಮಾಜಿ ಶಾಸಕರು ಒಂದೊಂದು ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಮನೆ ಮನೆ ತೆರಳಿ ಪಕ್ಷದ ಪರವಾಗಿ ಕೆಲಸ ಮಾಡಲು ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇನೆ ಎಂದರು.
ಜಾ.ದಳ ಅಭ್ಯರ್ಥಿಗಳ ಮೊದಲ ಪಟ್ಟಿ ಶಾಶ್ವತ ಅಲ್ಲ. ಪ್ರತಿ ದಿನ ಪಟ್ಟಿ ಬದಲಾವಣೆ ಆಗುತ್ತದೆ. ಪ್ರತಿ ದಿನ ಸಮೀಕ್ಷೆಯೂ ನಡೆಯುತ್ತಿದೆ. ಅದನ್ನು ಆಧರಿಸಿ ನಿರ್ಧಾರ ಆಗುತ್ತದೆ. ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಶಿವಲಿಂಗೇಗೌಡರು ಕುಮಾರಸ್ವಾಮಿ ಜೊತೆ ಮಾತನಾಡಿದ್ದಾರೆ. ದ್ವಂದ್ವ ಇದೆ ಇನ್ನೂ ಸಮಸ್ಯೆ ಬಗೆಹರಿದಿಲ್ಲ ಎಂದು ಪ್ರತಿಕ್ರಿಯಿಸಿದರು.
ಹಾಸನ ಟಿಕೆಟ್ಗೆ ಪಕ್ಷದಲ್ಲಿ ಬಹಳ ಮಂದಿ ಆಕಾಂಕ್ಷಿಗಳಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಹಾಗೂ ಎಚ್.ಡಿ.ರೇವಣ್ಣ ಚರ್ಚಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತಾರೆ. ಮುಂದೆ ಯಾರು ಮುಖ್ಯಮಂತ್ರಿ ಆಗಬೇಕು ಎಂಬುದನ್ನು ಜನರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.
ಹಾಸನದಲ್ಲಿ ಶಾಸಕ ಪ್ರೀತಂ ಗೌಡನಿಗೆ ಬಿ.ಎಸ್.ಯಡಿಯೂರಪ್ಪ ಸರ್ಕಾರವಿದ್ದಾಗ ಸರ್ವ ಶಕ್ತಿ ಕೊಟ್ಟಿದೆ. ಯಾವ್ಯಾವ ಕೆಲಸ ಕೊಟ್ಟಿದ್ದಾರೆ? ಅದರಿಂದ ಎಷ್ಟು ಹಣ ಸಂಪಾದಿಸಿದ್ದಾರೆ? ಅವರ ಶಕ್ತಿಗೆ ಯಡಿಯೂರಪ್ಪ ಹಾಗೂ ಅವರ ಮಕ್ಕಳೇ ಕಾರಣ. ಯಾರ ಹೆದರಿಕೆಗೂ ನಾವು ಬಗ್ಗುವುದಿಲ್ಲ ಎಂದು ಗುಡುಗಿದರು.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…