ಜಿಲ್ಲೆಗಳು

ಜನವರಿಯಿಂದ ಚುನಾವಣಾ ಪ್ರಚಾರ: ಎಚ್‌ಡಿಡಿ

ಜಾ.ದಳ ಅಭ್ಯರ್ಥಿಗಳ ಮೊದಲ ಪಟ್ಟಿ ಶಾಶ್ವತ ಅಲ್ಲ; ಬದಲಾವಣೆ ಆಗಲಿದೆ

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಮುಂದಿನ ತಿಂಗಳಿನಿಂದ ನಾನು ಕೂಡ ಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ ಎಂದು ಜಾ.ದಳದ ವರಿಷ್ಠ ಹಾಗೂ ಮಾಜಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ನಂಜನಗೂಡಿಗೆ ತೆರಳುವ ಮುನ್ನ ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ನಮ್ಮ ಪಕ್ಷದ ನಾಯಕರೆಲ್ಲರೂ ‘ಪಂಚರತ್ನ’ ಯಾತ್ರೆ ಮಾಡುತ್ತಿದ್ದಾರೆ. ಯಾತ್ರೆಗೆ ಜನರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

‘ಪಂಚರತ್ನ’ ಯಾತ್ರೆ ಸಾಗುತ್ತಿರುವ ಪ್ರತಿ ಹಳ್ಳಿಗಳಲ್ಲೂ ನಮ್ಮ ಪಕ್ಷದ ಶಾಸಕರು, ಮುಖಂಡರು, ಮಾಜಿ ಶಾಸಕರು ಒಂದೊಂದು ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಮನೆ ಮನೆ ತೆರಳಿ ಪಕ್ಷದ ಪರವಾಗಿ ಕೆಲಸ ಮಾಡಲು ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇನೆ ಎಂದರು.

ಜಾ.ದಳ ಅಭ್ಯರ್ಥಿಗಳ ಮೊದಲ ಪಟ್ಟಿ ಶಾಶ್ವತ ಅಲ್ಲ. ಪ್ರತಿ ದಿನ ಪಟ್ಟಿ ಬದಲಾವಣೆ ಆಗುತ್ತದೆ. ಪ್ರತಿ ದಿನ ಸಮೀಕ್ಷೆಯೂ ನಡೆಯುತ್ತಿದೆ. ಅದನ್ನು ಆಧರಿಸಿ ನಿರ್ಧಾರ ಆಗುತ್ತದೆ. ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಶಿವಲಿಂಗೇಗೌಡರು ಕುಮಾರಸ್ವಾಮಿ ಜೊತೆ ಮಾತನಾಡಿದ್ದಾರೆ. ದ್ವಂದ್ವ ಇದೆ ಇನ್ನೂ ಸಮಸ್ಯೆ ಬಗೆಹರಿದಿಲ್ಲ ಎಂದು ಪ್ರತಿಕ್ರಿಯಿಸಿದರು.

ಹಾಸನ ಟಿಕೆಟ್‌ಗೆ ಪಕ್ಷದಲ್ಲಿ ಬಹಳ ಮಂದಿ ಆಕಾಂಕ್ಷಿಗಳಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಹಾಗೂ ಎಚ್.ಡಿ.ರೇವಣ್ಣ ಚರ್ಚಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತಾರೆ. ಮುಂದೆ ಯಾರು ಮುಖ್ಯಮಂತ್ರಿ ಆಗಬೇಕು ಎಂಬುದನ್ನು ಜನರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.

ಹಾಸನದಲ್ಲಿ ಶಾಸಕ ಪ್ರೀತಂ ಗೌಡನಿಗೆ ಬಿ.ಎಸ್.ಯಡಿಯೂರಪ್ಪ ಸರ್ಕಾರವಿದ್ದಾಗ ಸರ್ವ ಶಕ್ತಿ ಕೊಟ್ಟಿದೆ. ಯಾವ್ಯಾವ ಕೆಲಸ ಕೊಟ್ಟಿದ್ದಾರೆ? ಅದರಿಂದ ಎಷ್ಟು ಹಣ ಸಂಪಾದಿಸಿದ್ದಾರೆ? ಅವರ ಶಕ್ತಿಗೆ ಯಡಿಯೂರಪ್ಪ ಹಾಗೂ ಅವರ ಮಕ್ಕಳೇ ಕಾರಣ. ಯಾರ ಹೆದರಿಕೆಗೂ ನಾವು ಬಗ್ಗುವುದಿಲ್ಲ ಎಂದು ಗುಡುಗಿದರು.

andolana

Recent Posts

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

7 hours ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

7 hours ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

7 hours ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

8 hours ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

10 hours ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…

10 hours ago