ಮೈಸೂರು : ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಮೈಸೂರು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ ಕುಮಾರ ಅವರು ತಿಳಿಸಿದರು.
ಅವರು ಕೆ.ಆರ್.ನಗರ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ರ ಸಂಬoಧ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲ ಮತಗಟ್ಟೆಗಳಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ನ್ಯೂನತೆಗಳಿದ್ದಲ್ಲಿ ಸರಿಪಡಿಸುವಂತೆ ಎಲ್ಲಾ ಸೆಕ್ಟರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಂತರ ಜಿಲ್ಲಾ ಗಡಿಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ತಕ್ಷಣ ಅದರ ನಿಯಮಗಳಂತೆ ಚೆಕ್ ಪೋಸ್ಟ್ ನಿರ್ಮಿಸಿ ಅಲ್ಲಿನ ಸಿಬ್ಬಂದಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿಕೊಟ್ಟು ನಿಯಮಿತವಾಗಿ ವಾಹನ ತಪಾಸಣೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ವಿವಿಧ ಇಲಾಖೆಗಳ ಸಮನ್ವಯತೆ ಸೆಕ್ಟರ್ ಆಫೀಸರ್ಗಳ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ಅತಿ ಮುಖ್ಯವಾಗಿ ಹರಿಯಬೇಕು. ಎಲ್ಲಾ ಅಧಿಕಾರಿಗಳು ಸೆಕ್ಟರ್ ಅಧಿಕಾರಿಗಳ ಕೈಪಿಡಿ, ಇವಿಎಂ ಅಧಿಕಾರಿಗಳ ಕೈಪಿಡಿ ಹಾಗೂ ಚುನಾವಣಾ ಆಯೋಗದಿಂದ ಬರುವ ಎಲ್ಲಾ ಕೈಪಿಡಿ ಮತ್ತು ಸುತ್ತೋಲೆಗಳಂತೆ ಕರ್ತವ್ಯ ನಿರ್ವಹಿಸಬೇಕು ಎಂದರು.
ಪೋಸ್ಟರ್ ಮತ್ತು ಬ್ಯಾನರ್ಗಳನ್ನು ಸಾರ್ವಜನಿಕ ಪ್ರದೇಶಗಳಿಂದ ನಿಗದಿತ ಅವಧಿಯಲ್ಲಿ ತೆರವುಗೊಳಿಸುವಂತೆ ಹಾಗೂ ಕಾಮಗಾರಿಗಳು ಯಾವ ಹಂತದಲ್ಲಿವೆ ಎಂಬ ಪಟ್ಟಿಯನ್ನು ತಯಾರಿಸಿ ವರದಿ ಪರಿಶೀಲಿಸಲು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಎಆರ್ಒ ಸುಪ್ರಿಯಾ ಬಣಗಾರ್, ಕೆ.ಆರ್ ನಗರ ಮತ್ತು ಸಾಲಿಗ್ರಾಮದ ತಹಶಿಲ್ದಾರ್ ಹಾಗೂ ಕಾರ್ಯನಿರ್ವಾಹಣಾಧಿಕಾರಿ ಉಪಸ್ಥಿತರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…