ಜಿಲ್ಲೆಗಳು

ಚುನಾವಣಾ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ : ಡಿಸಿ ಕೆ.ವಿ.ರಾಜೇಂದ್ರ

ಮೈಸೂರು : ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಮೈಸೂರು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ ಕುಮಾರ ಅವರು ತಿಳಿಸಿದರು.

ಅವರು ಕೆ.ಆರ್.ನಗರ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ರ ಸಂಬoಧ ಪೂರ್ವ ಸಿದ್ಧತಾ ಸಭೆಯಲ್ಲಿ  ಮಾತನಾಡಿದ ಅವರು, ಎಲ್ಲ ಮತಗಟ್ಟೆಗಳಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ನ್ಯೂನತೆಗಳಿದ್ದಲ್ಲಿ ಸರಿಪಡಿಸುವಂತೆ ಎಲ್ಲಾ ಸೆಕ್ಟರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ಭೇಟಿ ನೀಡಿ ಅದಕ್ಕೆ ಸಂಬoಧಿಸಿದ ನಮೂನೆಗಳಾದ ವಿಎಂ1, ವಿಎಂ2, ವಿಎಂ3 ಭರ್ತಿ ಮಾಡುವ ಬಗ್ಗೆ ಆರಕ್ಷಕ ಇಲಾಖೆಯೊಂದಿಗೆ ಬಿಎಲ್‌ಒಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಭರ್ತಿ ಮಾಡಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಅಂತರ ಜಿಲ್ಲಾ ಗಡಿಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ತಕ್ಷಣ ಅದರ ನಿಯಮಗಳಂತೆ ಚೆಕ್ ಪೋಸ್ಟ್ ನಿರ್ಮಿಸಿ ಅಲ್ಲಿನ ಸಿಬ್ಬಂದಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿಕೊಟ್ಟು ನಿಯಮಿತವಾಗಿ ವಾಹನ ತಪಾಸಣೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ವಿವಿಧ ಇಲಾಖೆಗಳ ಸಮನ್ವಯತೆ ಸೆಕ್ಟರ್ ಆಫೀಸರ್‌ಗಳ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ಅತಿ ಮುಖ್ಯವಾಗಿ ಹರಿಯಬೇಕು. ಎಲ್ಲಾ ಅಧಿಕಾರಿಗಳು ಸೆಕ್ಟರ್ ಅಧಿಕಾರಿಗಳ ಕೈಪಿಡಿ, ಇವಿಎಂ ಅಧಿಕಾರಿಗಳ ಕೈಪಿಡಿ ಹಾಗೂ ಚುನಾವಣಾ ಆಯೋಗದಿಂದ ಬರುವ ಎಲ್ಲಾ ಕೈಪಿಡಿ ಮತ್ತು ಸುತ್ತೋಲೆಗಳಂತೆ ಕರ್ತವ್ಯ ನಿರ್ವಹಿಸಬೇಕು ಎಂದರು.

ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಸಾರ್ವಜನಿಕ ಪ್ರದೇಶಗಳಿಂದ ನಿಗದಿತ ಅವಧಿಯಲ್ಲಿ ತೆರವುಗೊಳಿಸುವಂತೆ ಹಾಗೂ ಕಾಮಗಾರಿಗಳು ಯಾವ ಹಂತದಲ್ಲಿವೆ ಎಂಬ ಪಟ್ಟಿಯನ್ನು ತಯಾರಿಸಿ ವರದಿ ಪರಿಶೀಲಿಸಲು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಎಆರ್‌ಒ ಸುಪ್ರಿಯಾ ಬಣಗಾರ್, ಕೆ.ಆರ್ ನಗರ ಮತ್ತು ಸಾಲಿಗ್ರಾಮದ ತಹಶಿಲ್ದಾರ್ ಹಾಗೂ ಕಾರ್ಯನಿರ್ವಾಹಣಾಧಿಕಾರಿ ಉಪಸ್ಥಿತರಿದ್ದರು.

andolana

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

1 hour ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

2 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

2 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

2 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

2 hours ago