ಜಿಲ್ಲೆಗಳು

ಡಿಸಿ ನೇತೃತ್ವದಲ್ಲಿ ನಡೆದ ಚುನಾವಣಾ ದರಪಟ್ಟಿ ಸಭೆ: ಲೋಕಸಭಾ ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ

ಮೈಸೂರು: ಮುಂಬರುವ ಲೋಕಸಭಾ ಚುನಾವಣಾ ಸಾಮಗ್ರಿಗಳ ದರಪಟ್ಟಿ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳಿದ್ದರೆ ಲಿಖಿತವಾಗಿ ಸಲ್ಲಿಸಿ ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಚುನಾವಣಾ ದರಪಟ್ಟಿ ಸಂಬಂಧ ಹಮ್ಮಿಕೊಳ್ಳಲಾಗಿದ್ದ ವಿವಿಧ ರಾಜಕೀಯ ಪಕ್ಷಗಳ ಪ್ರತನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ಮಾಡಬೇಕಾದ ಖರ್ಚು ವೆಚ್ಚಗಳ ಕುರಿತ ದರಪಟ್ಟಿ ಯನ್ನು ರಾಜಕೀಯ ಪಕ್ಷಗಳಿಗೆ ನೀಡಲಾಗಿದೆ. ಅವುಗಳಲ್ಲಿ ಯಾವುದೇ ಸಾಮಗ್ರಿಗಳ ದರ ವ್ಯತ್ಯಾಸ ಕಂಡುಬಂದರೆ ತಿಳಿಸಬಹುದು ಎಂದು ತಿಳಿಸಿದರು.

ಫ್ಲೆಕ್ಸ್‌ ಬ್ಯಾನರ್‌ಗಳು ಬ್ಯಾನ್‌:
ಸಾರ್ವಜನಿಕ ಸ್ಥಳಗಳಲ್ಲಿ ಸಂಬಂಧಿಸಿದ ಪ್ರಾಧಿಕಾರಗಳ ಅನುಮತಿ ಇಲ್ಲದೇ ಪ್ಲೆಕ್ಸ್ ಬ್ಯಾನರ್ ಗಳನ್ನು ಅಳವಡಿಸುವಂತೆ ಇಲ್ಲ. ಗೋಡೆಗಳ ಮೇಲೆ ಸ್ಟಿಕ್ಕರ್‌ಗಳನ್ನು ಅಂಟಿಸುವಂತಿಲ್ಲ. ಅನುಮತಿ ಇಲ್ಲದೆ ಪ್ಲೆಕ್ಸ್ ಬ್ಯಾನರ್ ಗಳನ್ನು ಮುದ್ರಣ ಮಾಡುವಂತಿಲ್ಲ. ನಿಯಮ ಉಲ್ಲಂಘನೆಗೆ ಮಾಡಿದರೆ ಕಾನೂನು ಪ್ರಕಾರ ಪ್ರಕರಣ ದಾಖಲಿಸಿ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಹೆಸರು ಸೇರಿಸಲು ವಿಶೇಷ ಅಭಿಯಾನ:
ಮತದಾರರ ಪಟ್ಟಿಗೆ ಹೆಸರನ್ನು ಸೇರಿಸಲು ವಿಶೇಷ ಅಭಿಯಾನ ನಡೆಸಲಾಗುತ್ತಿದೆ. ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಮರಣ ಹೊಂದಿರುವವರ ಹೆಸರನ್ನು ತೆಗೆದು ಹಾಕಲು ಅವಕಾಶ ಇರುತ್ತದೆ. ವೋಟರ್ ಹೆಲ್ಪ್ ಲೈನ್ ಆಪ್, ಹಾಗೂ ಭೂತ್ ಲೆವೆಲ್ ಅಧಿಕಾರಿಗಳ ಬಳಿ ಸೇರ್ಪಡೆ ಮಾಡಿಸಬಹುದಾಗಿದೆ. ಶಿಕ್ಷಕರು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಅವಕಾಶ ಇದ್ದು, ಸೇರ್ಪಡೆ ಮಾಡಲು ಜಾಗೃತಿ ಮೂಡಿಸಿ ಎಂದು ತಿಳಿಸಿದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

8 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

12 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago