ಮೈಸೂರು: ಮುಂಬರುವ ಲೋಕಸಭಾ ಚುನಾವಣಾ ಸಾಮಗ್ರಿಗಳ ದರಪಟ್ಟಿ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳಿದ್ದರೆ ಲಿಖಿತವಾಗಿ ಸಲ್ಲಿಸಿ ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಚುನಾವಣಾ ದರಪಟ್ಟಿ ಸಂಬಂಧ ಹಮ್ಮಿಕೊಳ್ಳಲಾಗಿದ್ದ ವಿವಿಧ ರಾಜಕೀಯ ಪಕ್ಷಗಳ ಪ್ರತನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ಮಾಡಬೇಕಾದ ಖರ್ಚು ವೆಚ್ಚಗಳ ಕುರಿತ ದರಪಟ್ಟಿ ಯನ್ನು ರಾಜಕೀಯ ಪಕ್ಷಗಳಿಗೆ ನೀಡಲಾಗಿದೆ. ಅವುಗಳಲ್ಲಿ ಯಾವುದೇ ಸಾಮಗ್ರಿಗಳ ದರ ವ್ಯತ್ಯಾಸ ಕಂಡುಬಂದರೆ ತಿಳಿಸಬಹುದು ಎಂದು ತಿಳಿಸಿದರು.
ಫ್ಲೆಕ್ಸ್ ಬ್ಯಾನರ್ಗಳು ಬ್ಯಾನ್:
ಸಾರ್ವಜನಿಕ ಸ್ಥಳಗಳಲ್ಲಿ ಸಂಬಂಧಿಸಿದ ಪ್ರಾಧಿಕಾರಗಳ ಅನುಮತಿ ಇಲ್ಲದೇ ಪ್ಲೆಕ್ಸ್ ಬ್ಯಾನರ್ ಗಳನ್ನು ಅಳವಡಿಸುವಂತೆ ಇಲ್ಲ. ಗೋಡೆಗಳ ಮೇಲೆ ಸ್ಟಿಕ್ಕರ್ಗಳನ್ನು ಅಂಟಿಸುವಂತಿಲ್ಲ. ಅನುಮತಿ ಇಲ್ಲದೆ ಪ್ಲೆಕ್ಸ್ ಬ್ಯಾನರ್ ಗಳನ್ನು ಮುದ್ರಣ ಮಾಡುವಂತಿಲ್ಲ. ನಿಯಮ ಉಲ್ಲಂಘನೆಗೆ ಮಾಡಿದರೆ ಕಾನೂನು ಪ್ರಕಾರ ಪ್ರಕರಣ ದಾಖಲಿಸಿ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಹೆಸರು ಸೇರಿಸಲು ವಿಶೇಷ ಅಭಿಯಾನ:
ಮತದಾರರ ಪಟ್ಟಿಗೆ ಹೆಸರನ್ನು ಸೇರಿಸಲು ವಿಶೇಷ ಅಭಿಯಾನ ನಡೆಸಲಾಗುತ್ತಿದೆ. ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಮರಣ ಹೊಂದಿರುವವರ ಹೆಸರನ್ನು ತೆಗೆದು ಹಾಕಲು ಅವಕಾಶ ಇರುತ್ತದೆ. ವೋಟರ್ ಹೆಲ್ಪ್ ಲೈನ್ ಆಪ್, ಹಾಗೂ ಭೂತ್ ಲೆವೆಲ್ ಅಧಿಕಾರಿಗಳ ಬಳಿ ಸೇರ್ಪಡೆ ಮಾಡಿಸಬಹುದಾಗಿದೆ. ಶಿಕ್ಷಕರು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಅವಕಾಶ ಇದ್ದು, ಸೇರ್ಪಡೆ ಮಾಡಲು ಜಾಗೃತಿ ಮೂಡಿಸಿ ಎಂದು ತಿಳಿಸಿದರು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…