ಜಿಲ್ಲೆಗಳು

ಚುನಾವಣೆ ದಿನಾಂಕ ಪ್ರಕಟಕ್ಕೂ ಮುನ್ನವೇ ಬರಲಿದೆ ಬ್ಯಾಲೆಟ್ ಯೂನಿಟ್

ಹೈದ್ರಾಬಾದ್‌ನಿಂದ ಪೊಲೀಸ್ ಭದ್ರತೆಯಲ್ಲಿ ಸರಬರಾಜು; ನೂತನ ಜಿಲ್ಲಾಧಿಕಾರಿ ಕಚೇರಿ ಸಮೀಪದ ವೇರ್‌ಹೌಸ್‌ನಲ್ಲಿ ಸಂಗ್ರಹ

ಮೈಸೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿರುವಂತೆ, ಮತ್ತೊಂದೆಡೆ ಕೇಂದ್ರ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸುವ ಮುನ್ನವೇ ಮೈಸೂರಿಗೆ ಹೊಸ ಎಂ ೩ ಮಾದರಿಯ ಮತ ಯಂತ್ರಗಳು ಸರಬರಾಜಾಗಲಿದೆ.
ಮೈಸೂರು ಜಿಲ್ಲೆಗೆ ೫,೬೩೫ ಬ್ಯಾಲೆಟ್ ಯೂನಿಟ್, ೩,೯೫೮ ಕಂಟ್ರೋಲ್ ಯೂನಿಟ್‌ಗಳು ಇನ್ನೆರಡು ದಿನಗಳಲ್ಲಿ ಬರಲಿವೆ. ಕೇಂದ್ರ ಚುನಾವಣಾ ಆಯೋಗವು ಯಾವುದೇ ರಾಜ್ಯಕ್ಕೆ ಚುನಾವಣೆಗಳು ನಡೆದಾಗ ದೇಶದ ಯಾವುದೇ ರಾಜ್ಯಗಳಿಂದ ಮತ ಯಂತ್ರಗಳನ್ನು ಕಳುಹಿಸಿ ಕೊಡಲಾಗುತ್ತಿತ್ತು. ಆದರೆ, ಈಗ ಆಯಾ ಜಿಲ್ಲೆಗೆ ನೇರವಾಗಿ ಕಳುಹಿಸುವ ಕೆಲಸ ಮಾಡುತ್ತಿದೆ. ಹೈದರಾಬಾದ್‌ನಲ್ಲಿರುವ ಎಲೆಕ್ಟ್ರಾನಿಕ್ ಕಾರ್ಪೊರೇಷನ್ ಆಫ್ ಇಂಡಿಯಾ(ಇಸಿಐ)ನಿಂದ ಮತ ಯಂತ್ರಗಳನ್ನು ತಯಾರು ಮಾಡಲಾಗುತ್ತಿದೆ. ಅಲ್ಲಿಂದ ನೇರವಾಗಿ ಮೈಸೂರಿಗೆ ತರಲಾಗುತ್ತಿರುವುದು ವಿಶೇಷ.
ಮುಡಾ ಆಯುಕ್ತರ ತಂಡ ನೇತೃತ್ವ: ಹೈದ್ರಾಬಾದ್‌ನಿಂದ ಕಂಟೇನರ್‌ನಲ್ಲಿ ಮತಯಂತ್ರಗಳನ್ನು ತರಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ತಂಡ ಪಯಣ ಬೆಳೆಸಿದೆ. ಕಂಟೇನರ್ ಜತೆಗೆ ಆಯುಕ್ತರ ತಂಡ, ಜಿಪಿಎಸ್ ಹೊಂದಿರುವ ಎಸ್ಕಾರ್ಟ್‌ನೊಂದಿಗೆ ಹತ್ತು ಮಂದಿ ಪೊಲೀಸರು ಭದ್ರತೆಯ ಹೊಣೆ ಹೊತ್ತಿದ್ದಾರೆ. ಜಿಲ್ಲಾಡಳಿತದ ಮೂಲಗಳ ಪ್ರಕಾರ ಭಾನುವಾರದ ಹೊತ್ತಿಗೆ ಕಂಟೇನರ್ ಬರುತ್ತಿದ್ದಂತೆ ಪರಿಶೀಲಿಸಿ ಇವಿಎಂ ವೇರ್‌ಹೌಸ್‌ನಲ್ಲಿ ಇಡಲಾಗುತ್ತದೆ ಎಂದು ಹೇಳಲಾಗಿದೆ.
ಹೊಸ ಮಷಿನ್: ಈ ಬಾರಿ ಹೊಸ ಎಂ ೩ ಹೆಸರಿನ ಮಾದರಿ ಮತ ಯಂತ್ರಗಳು ಚುನಾವಣೆಯಲ್ಲಿ ಬಳಕೆಯಾಗಲಿದೆ. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಹೈದ್ರಾಬಾದ್‌ನಲ್ಲಿರುವ ಇಸಿಐ ಕಂಪೆನಿಯವರು ತಯಾರು ಮಾಡಿದ್ದಾರೆ. ಈ ಯಂತ್ರದ ವಿಶೇಷತೆ, ಬ್ಯಾಲೆಟ್, ವಿವಿ ಬ್ಯಾಲೆಟ್ ಕುರಿತು ನಿಖರತೆ ಇರುತ್ತದೆ. ಚುನಾವಣೆ ಹೊತ್ತಿಗೆ ರಾಜಕೀಯ ಪಕ್ಷಗಳ ಸಭೆ ಕರೆದು ಇದರ ಬಗ್ಗೆ ಡೆಮೋ ನೀಡಲಾಗುತ್ತದೆ. ಅಲ್ಲಿಯವರೆಗೂ ಮಾಹಿತಿ ಸೋರಿಕೆಯಾಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

andolanait

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

5 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

5 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

6 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

8 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

8 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

9 hours ago