ಜಿಲ್ಲೆಗಳು

ಚುನಾವಣೆ ದಿನಾಂಕ ಪ್ರಕಟಕ್ಕೂ ಮುನ್ನವೇ ಬರಲಿದೆ ಬ್ಯಾಲೆಟ್ ಯೂನಿಟ್

ಹೈದ್ರಾಬಾದ್‌ನಿಂದ ಪೊಲೀಸ್ ಭದ್ರತೆಯಲ್ಲಿ ಸರಬರಾಜು; ನೂತನ ಜಿಲ್ಲಾಧಿಕಾರಿ ಕಚೇರಿ ಸಮೀಪದ ವೇರ್‌ಹೌಸ್‌ನಲ್ಲಿ ಸಂಗ್ರಹ

ಮೈಸೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿರುವಂತೆ, ಮತ್ತೊಂದೆಡೆ ಕೇಂದ್ರ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸುವ ಮುನ್ನವೇ ಮೈಸೂರಿಗೆ ಹೊಸ ಎಂ ೩ ಮಾದರಿಯ ಮತ ಯಂತ್ರಗಳು ಸರಬರಾಜಾಗಲಿದೆ.
ಮೈಸೂರು ಜಿಲ್ಲೆಗೆ ೫,೬೩೫ ಬ್ಯಾಲೆಟ್ ಯೂನಿಟ್, ೩,೯೫೮ ಕಂಟ್ರೋಲ್ ಯೂನಿಟ್‌ಗಳು ಇನ್ನೆರಡು ದಿನಗಳಲ್ಲಿ ಬರಲಿವೆ. ಕೇಂದ್ರ ಚುನಾವಣಾ ಆಯೋಗವು ಯಾವುದೇ ರಾಜ್ಯಕ್ಕೆ ಚುನಾವಣೆಗಳು ನಡೆದಾಗ ದೇಶದ ಯಾವುದೇ ರಾಜ್ಯಗಳಿಂದ ಮತ ಯಂತ್ರಗಳನ್ನು ಕಳುಹಿಸಿ ಕೊಡಲಾಗುತ್ತಿತ್ತು. ಆದರೆ, ಈಗ ಆಯಾ ಜಿಲ್ಲೆಗೆ ನೇರವಾಗಿ ಕಳುಹಿಸುವ ಕೆಲಸ ಮಾಡುತ್ತಿದೆ. ಹೈದರಾಬಾದ್‌ನಲ್ಲಿರುವ ಎಲೆಕ್ಟ್ರಾನಿಕ್ ಕಾರ್ಪೊರೇಷನ್ ಆಫ್ ಇಂಡಿಯಾ(ಇಸಿಐ)ನಿಂದ ಮತ ಯಂತ್ರಗಳನ್ನು ತಯಾರು ಮಾಡಲಾಗುತ್ತಿದೆ. ಅಲ್ಲಿಂದ ನೇರವಾಗಿ ಮೈಸೂರಿಗೆ ತರಲಾಗುತ್ತಿರುವುದು ವಿಶೇಷ.
ಮುಡಾ ಆಯುಕ್ತರ ತಂಡ ನೇತೃತ್ವ: ಹೈದ್ರಾಬಾದ್‌ನಿಂದ ಕಂಟೇನರ್‌ನಲ್ಲಿ ಮತಯಂತ್ರಗಳನ್ನು ತರಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ತಂಡ ಪಯಣ ಬೆಳೆಸಿದೆ. ಕಂಟೇನರ್ ಜತೆಗೆ ಆಯುಕ್ತರ ತಂಡ, ಜಿಪಿಎಸ್ ಹೊಂದಿರುವ ಎಸ್ಕಾರ್ಟ್‌ನೊಂದಿಗೆ ಹತ್ತು ಮಂದಿ ಪೊಲೀಸರು ಭದ್ರತೆಯ ಹೊಣೆ ಹೊತ್ತಿದ್ದಾರೆ. ಜಿಲ್ಲಾಡಳಿತದ ಮೂಲಗಳ ಪ್ರಕಾರ ಭಾನುವಾರದ ಹೊತ್ತಿಗೆ ಕಂಟೇನರ್ ಬರುತ್ತಿದ್ದಂತೆ ಪರಿಶೀಲಿಸಿ ಇವಿಎಂ ವೇರ್‌ಹೌಸ್‌ನಲ್ಲಿ ಇಡಲಾಗುತ್ತದೆ ಎಂದು ಹೇಳಲಾಗಿದೆ.
ಹೊಸ ಮಷಿನ್: ಈ ಬಾರಿ ಹೊಸ ಎಂ ೩ ಹೆಸರಿನ ಮಾದರಿ ಮತ ಯಂತ್ರಗಳು ಚುನಾವಣೆಯಲ್ಲಿ ಬಳಕೆಯಾಗಲಿದೆ. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಹೈದ್ರಾಬಾದ್‌ನಲ್ಲಿರುವ ಇಸಿಐ ಕಂಪೆನಿಯವರು ತಯಾರು ಮಾಡಿದ್ದಾರೆ. ಈ ಯಂತ್ರದ ವಿಶೇಷತೆ, ಬ್ಯಾಲೆಟ್, ವಿವಿ ಬ್ಯಾಲೆಟ್ ಕುರಿತು ನಿಖರತೆ ಇರುತ್ತದೆ. ಚುನಾವಣೆ ಹೊತ್ತಿಗೆ ರಾಜಕೀಯ ಪಕ್ಷಗಳ ಸಭೆ ಕರೆದು ಇದರ ಬಗ್ಗೆ ಡೆಮೋ ನೀಡಲಾಗುತ್ತದೆ. ಅಲ್ಲಿಯವರೆಗೂ ಮಾಹಿತಿ ಸೋರಿಕೆಯಾಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

andolanait

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

2 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

3 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

4 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

5 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

5 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

6 hours ago