ಜಿಲ್ಲೆಗಳು

ಚುನಾವಣೆ ದಿನಾಂಕ ಪ್ರಕಟಕ್ಕೂ ಮುನ್ನವೇ ಬರಲಿದೆ ಬ್ಯಾಲೆಟ್ ಯೂನಿಟ್

ಹೈದ್ರಾಬಾದ್‌ನಿಂದ ಪೊಲೀಸ್ ಭದ್ರತೆಯಲ್ಲಿ ಸರಬರಾಜು; ನೂತನ ಜಿಲ್ಲಾಧಿಕಾರಿ ಕಚೇರಿ ಸಮೀಪದ ವೇರ್‌ಹೌಸ್‌ನಲ್ಲಿ ಸಂಗ್ರಹ

ಮೈಸೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿರುವಂತೆ, ಮತ್ತೊಂದೆಡೆ ಕೇಂದ್ರ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸುವ ಮುನ್ನವೇ ಮೈಸೂರಿಗೆ ಹೊಸ ಎಂ ೩ ಮಾದರಿಯ ಮತ ಯಂತ್ರಗಳು ಸರಬರಾಜಾಗಲಿದೆ.
ಮೈಸೂರು ಜಿಲ್ಲೆಗೆ ೫,೬೩೫ ಬ್ಯಾಲೆಟ್ ಯೂನಿಟ್, ೩,೯೫೮ ಕಂಟ್ರೋಲ್ ಯೂನಿಟ್‌ಗಳು ಇನ್ನೆರಡು ದಿನಗಳಲ್ಲಿ ಬರಲಿವೆ. ಕೇಂದ್ರ ಚುನಾವಣಾ ಆಯೋಗವು ಯಾವುದೇ ರಾಜ್ಯಕ್ಕೆ ಚುನಾವಣೆಗಳು ನಡೆದಾಗ ದೇಶದ ಯಾವುದೇ ರಾಜ್ಯಗಳಿಂದ ಮತ ಯಂತ್ರಗಳನ್ನು ಕಳುಹಿಸಿ ಕೊಡಲಾಗುತ್ತಿತ್ತು. ಆದರೆ, ಈಗ ಆಯಾ ಜಿಲ್ಲೆಗೆ ನೇರವಾಗಿ ಕಳುಹಿಸುವ ಕೆಲಸ ಮಾಡುತ್ತಿದೆ. ಹೈದರಾಬಾದ್‌ನಲ್ಲಿರುವ ಎಲೆಕ್ಟ್ರಾನಿಕ್ ಕಾರ್ಪೊರೇಷನ್ ಆಫ್ ಇಂಡಿಯಾ(ಇಸಿಐ)ನಿಂದ ಮತ ಯಂತ್ರಗಳನ್ನು ತಯಾರು ಮಾಡಲಾಗುತ್ತಿದೆ. ಅಲ್ಲಿಂದ ನೇರವಾಗಿ ಮೈಸೂರಿಗೆ ತರಲಾಗುತ್ತಿರುವುದು ವಿಶೇಷ.
ಮುಡಾ ಆಯುಕ್ತರ ತಂಡ ನೇತೃತ್ವ: ಹೈದ್ರಾಬಾದ್‌ನಿಂದ ಕಂಟೇನರ್‌ನಲ್ಲಿ ಮತಯಂತ್ರಗಳನ್ನು ತರಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ತಂಡ ಪಯಣ ಬೆಳೆಸಿದೆ. ಕಂಟೇನರ್ ಜತೆಗೆ ಆಯುಕ್ತರ ತಂಡ, ಜಿಪಿಎಸ್ ಹೊಂದಿರುವ ಎಸ್ಕಾರ್ಟ್‌ನೊಂದಿಗೆ ಹತ್ತು ಮಂದಿ ಪೊಲೀಸರು ಭದ್ರತೆಯ ಹೊಣೆ ಹೊತ್ತಿದ್ದಾರೆ. ಜಿಲ್ಲಾಡಳಿತದ ಮೂಲಗಳ ಪ್ರಕಾರ ಭಾನುವಾರದ ಹೊತ್ತಿಗೆ ಕಂಟೇನರ್ ಬರುತ್ತಿದ್ದಂತೆ ಪರಿಶೀಲಿಸಿ ಇವಿಎಂ ವೇರ್‌ಹೌಸ್‌ನಲ್ಲಿ ಇಡಲಾಗುತ್ತದೆ ಎಂದು ಹೇಳಲಾಗಿದೆ.
ಹೊಸ ಮಷಿನ್: ಈ ಬಾರಿ ಹೊಸ ಎಂ ೩ ಹೆಸರಿನ ಮಾದರಿ ಮತ ಯಂತ್ರಗಳು ಚುನಾವಣೆಯಲ್ಲಿ ಬಳಕೆಯಾಗಲಿದೆ. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಹೈದ್ರಾಬಾದ್‌ನಲ್ಲಿರುವ ಇಸಿಐ ಕಂಪೆನಿಯವರು ತಯಾರು ಮಾಡಿದ್ದಾರೆ. ಈ ಯಂತ್ರದ ವಿಶೇಷತೆ, ಬ್ಯಾಲೆಟ್, ವಿವಿ ಬ್ಯಾಲೆಟ್ ಕುರಿತು ನಿಖರತೆ ಇರುತ್ತದೆ. ಚುನಾವಣೆ ಹೊತ್ತಿಗೆ ರಾಜಕೀಯ ಪಕ್ಷಗಳ ಸಭೆ ಕರೆದು ಇದರ ಬಗ್ಗೆ ಡೆಮೋ ನೀಡಲಾಗುತ್ತದೆ. ಅಲ್ಲಿಯವರೆಗೂ ಮಾಹಿತಿ ಸೋರಿಕೆಯಾಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

andolanait

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

9 hours ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

10 hours ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

11 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

11 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

12 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

13 hours ago