ಹುಣಸೂರು: ವಿದ್ಯುತ್ ಸ್ಪರ್ಶದಿಂದ ಜಾನುವಾರು ಮೃತಪಟ್ಟಿರುವ ಘಟನೆ ಹುಣಸೂರು ತಾಲ್ಲೂಕಿನ ಹಿರೀಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರವಿ ಎಂಬವರಿಗೆ ಸೇರಿದ ಸುಮಾರು ೮೦ ಸಾವಿರ ರೂ. ಬೆಲೆ ಬಾಳುವ ಎಚ್.ಎಫ್.ತಳಿಯ ಇಲಾತಿ ಹಸು ಅಸುನೀಗಿದೆ.
ರೈತ ತಮ್ಮ ಮನೆಯ ಹಿಂಭಾಗ ಪಾಳು ಬಿದ್ದ ಜಾಗದಲ್ಲಿ ಹದುವನ್ನು ಮೇವು ಮೇಯಲು ಕಟ್ಟು ಹಾಕಿದ್ದರು. ಮನೆ ಹಿಂಭಾಗ ಅಳವಡಿಸಿರುವ ಟ್ರಾನ್ಸ್ಫಾರ್ಮರ್ ಪಕ್ಕದಲ್ಲಿ ಕಟ್ಟುವ ಸಮಯದಲ್ಲಿ ವಿದ್ಯುತ್ ಇಲ್ಲದಿದ್ದರಿಂದ ರೈತ ಪಾರಾಗಿದ್ದಾರೆ. ಸ್ವಲ್ಪ ಹೊತ್ತಿನ ನಂತರ ರೈತ ಹಸುವನ್ನು ನೋಡಲು ಹೋದಾಗ ಹಸು ವಿದ್ಯುತ್ ಸ್ಪರ್ಶಕ್ಕೀಡಾಗಿ ಮೃತಪಟ್ಟಿದ್ದು ತಿಳಿದುಬಂದಿದೆ.
ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಗೆ ರೈತ ದೂರು ನೀಡಿದ್ದಾರೆ. ಸ್ಥಳಕ್ಕೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…