ಜಿಲ್ಲೆಗಳು

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಬ್ಬಿನ ಫಸಲು ನಾಶ

ಹನೂರು: ಪಟ್ಟಣದ ಮಲೆ ಮಹದೇಶ್ವರಬೆಟ್ಟಕ್ಕೆ ತೆರಳುವ ರಸ್ತೆ ಬದಿಯಲ್ಲಿನ ಜಮೀನಿನಲ್ಲಿ ಸೋಮವಾರ ಮಧ್ಯಾಹ್ನ ವಿದ್ಯುತ್  ಶಾರ್ಟ್ ಸರ್ಕ್ಯೂಟ್  ನಿಂದ ಬೆಂಕಿ ತಗುಲಿ ಕಬ್ಬಿನ ಫಸಲು ಆಹುತಿಯಾಗಿದೆ.

ಪಟ್ಟಣದ ಕೇಶವಮೂರ್ತಿ ಎಂಬವರು 2.5 ಎಕರೆಯಲ್ಲಿ ಕಬ್ಬಿನ ಫಸಲನ್ನು ಬೆಳೆದಿದ್ದು,  ಕಟಾವಿನ ಹಂತಕ್ಕೆ ಬಂದಿತ್ತು. ಆದರೆ ಮಧ್ಯಾಹ್ನ 12ರ ವೇಳೆಯಲ್ಲಿ ಜಮೀನಿನ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿಯ ಸಾರ್ಟ್ ಸರ್ಕ್ಯೂಟ್ ನ  ಬೆಂಕಿಯು ತೆಂಗಿನ ಮರದ ಗರಿಗೆ ತಗುಲಿ ಜಮೀನಿಗೆ ಬಿದ್ದಿದೆ. ಪರಿಣಾಮ ಕಬ್ಬಿನ ಫಸಲನ್ನು ಆವರಿಸಿದೆ. ಈ ಬಗ್ಗೆ ಕೇಶವಮೂರ್ತಿ ಕೂಡಲೇ ಅಗ್ನಿ ಶಾಮಕ ಠಾಣೆಗೆ ಮಾಹಿತಿ ತಿಳಿಸಲಾಗಿ ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ತೀವ್ರ ಕಾರ್ಯಾಚರಣೆಯಿಂದ ಬೆಂಕಿಯನ್ನು ನಂದಿಸುವುದರ ಮೂಲಕ ಮುಂದಾಗುವ ಅನಾಹುತವನ್ನು ತಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಪ್ರಶಾಂತ್‍ನಾಯಕ್, ಸಿಬ್ಬಂದಿಗಳಾದ ಕೆ.ರವಿ, ಕಾರ್ತಿಕ್, ಮುನಿಶಾಂತ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಭಾಗವಹಿಸಿದ್ದರು.

ಪರಿಹಾರಕ್ಕೆ ಒತ್ತಾಯ: ಸುಮಾರು 1 ಎಕರೆಯಲ್ಲಿನ ಕಬ್ಬಿನ ಫಸಲು ಬೆಂಕಿಗೆ ಆಹುತಿಯಾಗಿದ್ದು, 2 ಲಕ್ಷ ರೂ ನಷ್ಟ ಉಂಟಾಗಿದೆ. ಆದ್ದರಿಂದ ಸಂಬಂಧಪಟ್ಟವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿ ಕೊಡುವಂತೆ ರೈತ ಕೇಶವಮೂರ್ತಿ ಒತ್ತಾಯಿಸಿದ್ದಾರೆ.

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

49 mins ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

3 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

4 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

4 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

7 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

7 hours ago