ಹನೂರು: ಪಟ್ಟಣದ ಮಲೆ ಮಹದೇಶ್ವರಬೆಟ್ಟಕ್ಕೆ ತೆರಳುವ ರಸ್ತೆ ಬದಿಯಲ್ಲಿನ ಜಮೀನಿನಲ್ಲಿ ಸೋಮವಾರ ಮಧ್ಯಾಹ್ನ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಕಬ್ಬಿನ ಫಸಲು ಆಹುತಿಯಾಗಿದೆ.
ಪಟ್ಟಣದ ಕೇಶವಮೂರ್ತಿ ಎಂಬವರು 2.5 ಎಕರೆಯಲ್ಲಿ ಕಬ್ಬಿನ ಫಸಲನ್ನು ಬೆಳೆದಿದ್ದು, ಕಟಾವಿನ ಹಂತಕ್ಕೆ ಬಂದಿತ್ತು. ಆದರೆ ಮಧ್ಯಾಹ್ನ 12ರ ವೇಳೆಯಲ್ಲಿ ಜಮೀನಿನ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿಯ ಸಾರ್ಟ್ ಸರ್ಕ್ಯೂಟ್ ನ ಬೆಂಕಿಯು ತೆಂಗಿನ ಮರದ ಗರಿಗೆ ತಗುಲಿ ಜಮೀನಿಗೆ ಬಿದ್ದಿದೆ. ಪರಿಣಾಮ ಕಬ್ಬಿನ ಫಸಲನ್ನು ಆವರಿಸಿದೆ. ಈ ಬಗ್ಗೆ ಕೇಶವಮೂರ್ತಿ ಕೂಡಲೇ ಅಗ್ನಿ ಶಾಮಕ ಠಾಣೆಗೆ ಮಾಹಿತಿ ತಿಳಿಸಲಾಗಿ ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ತೀವ್ರ ಕಾರ್ಯಾಚರಣೆಯಿಂದ ಬೆಂಕಿಯನ್ನು ನಂದಿಸುವುದರ ಮೂಲಕ ಮುಂದಾಗುವ ಅನಾಹುತವನ್ನು ತಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಪ್ರಶಾಂತ್ನಾಯಕ್, ಸಿಬ್ಬಂದಿಗಳಾದ ಕೆ.ರವಿ, ಕಾರ್ತಿಕ್, ಮುನಿಶಾಂತ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಭಾಗವಹಿಸಿದ್ದರು.
ಪರಿಹಾರಕ್ಕೆ ಒತ್ತಾಯ: ಸುಮಾರು 1 ಎಕರೆಯಲ್ಲಿನ ಕಬ್ಬಿನ ಫಸಲು ಬೆಂಕಿಗೆ ಆಹುತಿಯಾಗಿದ್ದು, 2 ಲಕ್ಷ ರೂ ನಷ್ಟ ಉಂಟಾಗಿದೆ. ಆದ್ದರಿಂದ ಸಂಬಂಧಪಟ್ಟವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿ ಕೊಡುವಂತೆ ರೈತ ಕೇಶವಮೂರ್ತಿ ಒತ್ತಾಯಿಸಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…