ಚಾಮರಾಜನಗರ ತಾಲ್ಲೂಕಿನ ಮಸಣಾಪುರದಲ್ಲಿ ದಾರುಣ ಘಟನೆ
ಚಾಮರಾಜನಗರ: ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶವಾಗಿ ಪತಿ, ಪತ್ನಿ ಇಬ್ಬರೂ ಮೃತಪಟ್ಟಿರುವ ದಾರುಣ ಘಟನೆ ತಾಲ್ಲೂಕಿನ ಮಸಣಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಗ್ರಾಮದ ನಂಜುಂಡನಾಯಕ (63), ಅವರ ಪತ್ನಿ ದೇವೀರಮ್ಮ(55) ಮೃತಪಟ್ಟವರು.
ಜಮೀನಿನಲ್ಲಿ ಕೃಷಿ ಕೆಲಸದಲ್ಲಿ ನಿರತರಾಗಿದ್ದ ಪತಿಗೆ ದೇವೀರಮ್ಮ
ಬೆಳಿಗ್ಗೆ ತಿಂಡಿ ತೆಗೆದುಕೊಂಡು ಹೋಗಿದ್ದರು. ತಿಂಡಿಗೆ ಮೊದಲು ಬಾಳೆ ಎಲೆ ತೊಳೆುಂಲು ಕೃಷಿ ಪಂಪ್ಸೆಟ್ ಬಳಿ ಹೋದಾಗ ವಿದ್ಯುತ್ ಸ್ಪರ್ಶವಾಗಿ ಒದ್ದಾಡುತ್ತಿದ್ದರು.
ಇದನ್ನು ಗಮನಿಸಿದ ನಂಜುಂಡನಾಯಕ ಅವರು, ಪತ್ನಿ ಮೂರ್ಛೆ ಬಿದ್ದಿರಬಹುದು ಎಂದು ಅವರನ್ನು ಎಚ್ಚರಿಸಲು ಹೋಗಿ ತಾವೂ ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಪಕ್ಕದಲ್ಲೇ ಇದ್ದ ಮೃತರ 12 ವರ್ಷದ ಮೊಮ್ಮಗ, ಗಾಬರಿಯಿಂದ ಓಡಿ ಬಂದು ಪಕ್ಕದ ಜಮೀನಿನವರಿಗೆ ತಿಳಿಸಲಾಗಿ, ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವುದು ಗೊತ್ತಾಗಿದೆ. ಮೃತರಿಗೆ ಮೂವರು ಪುತ್ರಿಯರು, ಓರ್ವ ಪುತ್ರ ಇದ್ದು ಎಲ್ಲರ ಆಕ್ರಂದನ ಮನ ಕಲಕುವಂತಿತ್ತು. ಘಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ .
ವಾಷಿಂಗ್ಟನ್ : ದೀರ್ಘಕಾಲದಿಂದ ಬಾಕಿ ಉಳಿದಿರುವ ರಕ್ಷಣಾ ಖರೀದಿ ಮಾತುಕತೆ ಹಾಗೂ ವಾಣಿಜ್ಯ ವ್ಯವಹಾರಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಭಾರತದ ಪ್ರಧಾನಿ…
ಕೊಡಗು : ಕರುನಾಡಿನ ಕೊಡಗಿನ ಸುಂದರಿ ಸಿನಿ ತಾರೆ ರಶ್ಮಿಕಾ ಮಂದಣ್ಣ ದೇಶ-ವಿದೇಶಗಳಲ್ಲೂ ಖ್ಯಾತಿ ಪಡೆದಿದ್ದಾರೆ. ಹೀಗಾಗಿ ಅವರು ಆಗಾಗ್ಗೆ…
ನಂಜನಗೂಡು : ಅಪ್ರಾಪ್ತೆಯ ಹಿಂದೆ ಬಿದ್ದು ಪ್ರೀತಿಗೆ ಒತ್ತಾಯಿಸಿ ಮದುವೆ ಆಗುವಂತೆ ಪೀಡಿಸಿ ಮಾನಸಿಕ ಕಿರುಕುಳ ನೀಡಿದ ಹಿನ್ನಲೆ ವಿಧ್ಯಾರ್ಥಿನಿ…
ಮೈಸೂರು : ನಾನು ಚಾಮರಾಜ ಕ್ಷೇತ್ರದ ಟಿಕೆಟ್ ಆಕಾಂಕ್ಷಿ. ರಾಷ್ಟ್ರ ಮಟ್ಟಕ್ಕೆ ಹೋಗಲಿಲ್ಲ ಅಂದ್ರೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಲು ಆಗುತ್ತಾ?…
ಮೈಸೂರು : ರಾಜ್ಯದಲ್ಲಿ ಸರಿಯಾದ ಯೋಜನೆಗಳನ್ನು ಜಾರಿಗೆ ತರುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳು ಹೇಗೆಲ್ಲಾ ಅನುಷ್ಠಾನ…
ಮೈಸೂರು : ರಂಗಾಯಣದ ಮಹತ್ವಾಕಾಂಕ್ಷೆಯ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ವೇದಿಕೆ ಸಜ್ಜಾಗುತ್ತಿದ್ದು, ‘ಬಾಬಾ ಸಾಹೇಬ್-ಸಮತೆಯೆಡೆಗೆ ನಡಿಗೆ’ ಆಶಯದಡಿ ಜ.11 ರಿಂದ…