ಚಾಮರಾಜನಗರ ತಾಲ್ಲೂಕಿನ ಮಸಣಾಪುರದಲ್ಲಿ ದಾರುಣ ಘಟನೆ
ಚಾಮರಾಜನಗರ: ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶವಾಗಿ ಪತಿ, ಪತ್ನಿ ಇಬ್ಬರೂ ಮೃತಪಟ್ಟಿರುವ ದಾರುಣ ಘಟನೆ ತಾಲ್ಲೂಕಿನ ಮಸಣಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಗ್ರಾಮದ ನಂಜುಂಡನಾಯಕ (63), ಅವರ ಪತ್ನಿ ದೇವೀರಮ್ಮ(55) ಮೃತಪಟ್ಟವರು.
ಜಮೀನಿನಲ್ಲಿ ಕೃಷಿ ಕೆಲಸದಲ್ಲಿ ನಿರತರಾಗಿದ್ದ ಪತಿಗೆ ದೇವೀರಮ್ಮ
ಬೆಳಿಗ್ಗೆ ತಿಂಡಿ ತೆಗೆದುಕೊಂಡು ಹೋಗಿದ್ದರು. ತಿಂಡಿಗೆ ಮೊದಲು ಬಾಳೆ ಎಲೆ ತೊಳೆುಂಲು ಕೃಷಿ ಪಂಪ್ಸೆಟ್ ಬಳಿ ಹೋದಾಗ ವಿದ್ಯುತ್ ಸ್ಪರ್ಶವಾಗಿ ಒದ್ದಾಡುತ್ತಿದ್ದರು.
ಇದನ್ನು ಗಮನಿಸಿದ ನಂಜುಂಡನಾಯಕ ಅವರು, ಪತ್ನಿ ಮೂರ್ಛೆ ಬಿದ್ದಿರಬಹುದು ಎಂದು ಅವರನ್ನು ಎಚ್ಚರಿಸಲು ಹೋಗಿ ತಾವೂ ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಪಕ್ಕದಲ್ಲೇ ಇದ್ದ ಮೃತರ 12 ವರ್ಷದ ಮೊಮ್ಮಗ, ಗಾಬರಿಯಿಂದ ಓಡಿ ಬಂದು ಪಕ್ಕದ ಜಮೀನಿನವರಿಗೆ ತಿಳಿಸಲಾಗಿ, ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವುದು ಗೊತ್ತಾಗಿದೆ. ಮೃತರಿಗೆ ಮೂವರು ಪುತ್ರಿಯರು, ಓರ್ವ ಪುತ್ರ ಇದ್ದು ಎಲ್ಲರ ಆಕ್ರಂದನ ಮನ ಕಲಕುವಂತಿತ್ತು. ಘಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ .
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…