ಜಿಲ್ಲೆಗಳು

ಸರ್ಕಾರಿ ಗೌರವಗಳೊಂದಿಗೆ ಅರ್ಜುನನ ಅಂತ್ಯಕ್ರಿಯೆ; ಸಾಂಸ್ಕೃತಿಕ ರಾಯಭಾರಿ ಇನ್ನು ನೆನಪು ಮಾತ್ರ

ಕಾಡಾನೆಯೊಂದನ್ನು ಕಾಡಿಗಟ್ಟುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅರ್ಜುನ ಬಲಿಯಾಗಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾನೆ. ರಾಜ್ಯದ ಜನತೆ ಅರ್ಜುನನಿಗೆ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಒಟ್ಟು ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿರುವ ಕೀರ್ತಿ ಸಂಪಾದಿಸಿದ್ದ ಅರ್ಜುನ ಆನೆ ಸಾವಿನ ಬಗ್ಗೆ ವಿವಾದಗಳೂ ಸಹ ಹುಟ್ಟಿಕೊಳ್ಳುತ್ತಿವೆ. ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ದುರ್ಘಟನೆ ಸಂಭವಿಸಿದೆ ಎಂದು ಜನಸಾಮಾನ್ಯರು ಹಾಗೂ ಮಾವುತರು ಕಿಡಿಕಾರಿದ್ದಾರೆ.

ತೀವ್ರವಾಗಿ ಗಾಯಗೊಂಡು ಅಸುನೀಗಿದ ಅರ್ಜುನನಿಗೆ ಹಾಸನ ಜಿಲ್ಲೆಯ ಸಕಲೇಶಪುರದ ಬಳಿಯ ದಬ್ಬಳ್ಳಿಕಟ್ಟೆಯಲ್ಲಿರುವ ಕೆಎಫ್‌ಟಿಸಿ ನೆಡುತೋಪಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗಿದೆ. ಈ ವೇಳೆ ಅರ್ಜುನನ ಮಾವುತ ವಿನು ಇನ್ನೆಂದೂ ಬಾರದ ಅರ್ಜುನನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತು ಅರ್ಜುನನ ಜತೆ ತನ್ನನ್ನೂ ಸಹ ಮಣ್ಣು ಮಾಡಿ ಎಂದು ಗೋಳಿಡುತ್ತಿದ್ದರು.

andolana

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

2 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

5 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

6 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

6 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

6 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

6 hours ago