ಜಿಲ್ಲೆಗಳು

ಘಟ್ಟದ ಕೆಳಗೂ ಆನೆಗಳ ಹಾವಳಿ…

ಎತ್ತಿನಹೊಳೆ ಕಾಮಗಾರಿ ಬಳಿಕ ಚದುರಿಹೋದ ಆನೆಗಳು

ಮೈಸೂರು: ಹಳೇ ಮೈಸೂರು ಮತ್ತು ಮಲೆನಾಡು ಭಾಗದಲ್ಲಿ ದಾಂಧಲೆ ಎಬ್ಬಿಸುತ್ತಿದ್ದ ಆನೆಗಳು ಇದೀಗ ಘಟ್ಟದ ಕೆಳಗಿನ ಗ್ರಾಮಗಳಲ್ಲೂ ಹಾವಳಿ ಎಬ್ಬಿಸುತ್ತಿದ್ದು ತೋಟಗಳಿಗೆ ನುಗ್ಗಿ ಫಸಲು ನಾಶ ಮಾಡುತ್ತಿವೆ.

ಎತ್ತಿನ ಹೊಳೆ ಯೋಜನೆ ಕಾಮಗಾರಿ ಆರಂಭವಾದ ಬಳಿಕ ಸಕಲೇಶಪುರ ಭಾಗದ ವನ್ಯಮೃಗಗಳ ದಂಡು ಚದುರಿ ಹೋಗಿವೆ. ಒಂದಷ್ಟು ಆನೆಗಳು ಶನಿವಾರ ಸಂತೆ, ಆಲೂರು, ಮೂಡಿಗೆರೆ ಭಾಗಕ್ಕೆ, ಇನ್ನೊಂದಷ್ಟು ದಕ್ಷಿಣ ಕನ್ನಡ ಜಿಲ್ಲೆಯತ್ತ ವಲಸೆ ಹೋಗಿವೆ. ಎತ್ತಿನ ಹೊಳೆ ಯೋಜನೆಗೆ ಮುನ್ನ ದಕ್ಷಿಣಕನ್ನಡದ ಭಾಗದಲ್ಲಿ ಆನೆ ಹಾವಳಿ ಅಪರೂಪವಾಗಿತ್ತು.
ಈಗ ಕಡಬ, ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲ್ಲೂಕುಗಳಲ್ಲೂ ಕಾಡಾನೆಗಳು ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿವೆ.
ಶಿರಾಡಿ ಘಾಟ್ ರಸ್ತೆಯಲ್ಲಿ ಅಪರೂಪಕ್ಕೊಮ್ಮೆ ಕಾಣಿಸಿಕೊಳ್ಳುತ್ತಿದ್ದ ಆನೆಗಳು ಆಗಾಗ ರಸ್ತೆಗೆ ಬಂದು ವಾಹನ ಸಂಚಾರಕ್ಕೆ ಅಡ್ಡಿಪಡಿಸುತ್ತಿವೆ.

ಕೆಲವೇ ದಿನಗಳ ಹಿಂದೆ ಕುಕ್ಕೆ ಸುಬ್ರ ಹ್ಮ ಣ್ಯ ಪರಿಸರದಲ್ಲಿ ಎರಡು ಆನೆಗಳು ಕಾಣಿಸಿಕೊಂಡಿದ್ದವು. ಗುರುವಾರ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಬಳಿ ಒಂಟಿ ಸಲಗವೊಂದು ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕ ಮೂಡಿಸಿದೆ.
ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಇಲ್ಲಿನ ಅಡ್ಡಹೊಳೆಯ ಪೆಟ್ರೋಲ್ ಪಂಪಿನ ಬಳಿ ಕಾಡಿನಿಂದ ಹೆದ್ದಾರಿಗೆ ಬಂದ ಗಂಡಾನೆ ಹೆದ್ದಾರಿಯನ್ನು ದಾಟಲೆತ್ನಿಸಿದೆ. ಆದರೆ ಹೆದ್ದಾರಿ ಅಗಲೀಕರಣಕ್ಕಾಗಿ ಅಗೆಯಲಾದ ಮಣ್ಣಿ ನಲ್ಲಿ ಹೂತು ಸಂಕಷ್ಟಕ್ಕೀಡಾಗಿದೆ. ಬಳಿಕ ಕಷ್ಟಪಟ್ಟು ಮೇಲೆದ್ದು ಸಾಗಿದ ಈ ಆನೆಯು ಅಯ್ಯಪ್ಪ ದೇವಾಲಯದ ಬಳಿಯಿಂದ ಪೇರಮಜಲು ರಸ್ತೆಯಲ್ಲಿ ಜನವಸತಿ ಪ್ರದೇಶದ ಮೂಲಕ ಹಾದು ಕಾಡು ಸೇರಿಕೊಂಡಿದೆ.

ರಸ್ತೆಯಲ್ಲಿಯೇ ಸಾಗಿದ ಆನೆಯು ಎಲ್ಲೂ ಆಕ್ರಮಣಕ್ಕೆ ಮುಂದಾಗದೇ ಕಾಡು ಸೇರಿದೆ. ಗ್ರಾಮಸ್ಥರು ಜೋರಾಗಿ ಬೊಬ್ಬೆ ಹೊಡೆದು ಸುತ್ತಮುತ್ತಲ ಎಚ್ಚರಿಸಿದ್ದರಿಂದ ಸಂಭಾವ್ಯ ಅಪಾಯ ತಪ್ಪಿದೆ.
ರಾತ್ರಿ ವೇಳೆ ಈ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದ್ದ ಆನೆಗಳು ಈಗ ಹಾಡಹಗಲೇ ಕಾಣಿಸಿಕೊಳ್ಳುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.

andolanait

Recent Posts

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

1 hour ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

2 hours ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

2 hours ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

3 hours ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

3 hours ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

4 hours ago