ಜಿಲ್ಲೆಗಳು

ಘಟ್ಟದ ಕೆಳಗೂ ಆನೆಗಳ ಹಾವಳಿ…

ಎತ್ತಿನಹೊಳೆ ಕಾಮಗಾರಿ ಬಳಿಕ ಚದುರಿಹೋದ ಆನೆಗಳು

ಮೈಸೂರು: ಹಳೇ ಮೈಸೂರು ಮತ್ತು ಮಲೆನಾಡು ಭಾಗದಲ್ಲಿ ದಾಂಧಲೆ ಎಬ್ಬಿಸುತ್ತಿದ್ದ ಆನೆಗಳು ಇದೀಗ ಘಟ್ಟದ ಕೆಳಗಿನ ಗ್ರಾಮಗಳಲ್ಲೂ ಹಾವಳಿ ಎಬ್ಬಿಸುತ್ತಿದ್ದು ತೋಟಗಳಿಗೆ ನುಗ್ಗಿ ಫಸಲು ನಾಶ ಮಾಡುತ್ತಿವೆ.

ಎತ್ತಿನ ಹೊಳೆ ಯೋಜನೆ ಕಾಮಗಾರಿ ಆರಂಭವಾದ ಬಳಿಕ ಸಕಲೇಶಪುರ ಭಾಗದ ವನ್ಯಮೃಗಗಳ ದಂಡು ಚದುರಿ ಹೋಗಿವೆ. ಒಂದಷ್ಟು ಆನೆಗಳು ಶನಿವಾರ ಸಂತೆ, ಆಲೂರು, ಮೂಡಿಗೆರೆ ಭಾಗಕ್ಕೆ, ಇನ್ನೊಂದಷ್ಟು ದಕ್ಷಿಣ ಕನ್ನಡ ಜಿಲ್ಲೆಯತ್ತ ವಲಸೆ ಹೋಗಿವೆ. ಎತ್ತಿನ ಹೊಳೆ ಯೋಜನೆಗೆ ಮುನ್ನ ದಕ್ಷಿಣಕನ್ನಡದ ಭಾಗದಲ್ಲಿ ಆನೆ ಹಾವಳಿ ಅಪರೂಪವಾಗಿತ್ತು.
ಈಗ ಕಡಬ, ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲ್ಲೂಕುಗಳಲ್ಲೂ ಕಾಡಾನೆಗಳು ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿವೆ.
ಶಿರಾಡಿ ಘಾಟ್ ರಸ್ತೆಯಲ್ಲಿ ಅಪರೂಪಕ್ಕೊಮ್ಮೆ ಕಾಣಿಸಿಕೊಳ್ಳುತ್ತಿದ್ದ ಆನೆಗಳು ಆಗಾಗ ರಸ್ತೆಗೆ ಬಂದು ವಾಹನ ಸಂಚಾರಕ್ಕೆ ಅಡ್ಡಿಪಡಿಸುತ್ತಿವೆ.

ಕೆಲವೇ ದಿನಗಳ ಹಿಂದೆ ಕುಕ್ಕೆ ಸುಬ್ರ ಹ್ಮ ಣ್ಯ ಪರಿಸರದಲ್ಲಿ ಎರಡು ಆನೆಗಳು ಕಾಣಿಸಿಕೊಂಡಿದ್ದವು. ಗುರುವಾರ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಬಳಿ ಒಂಟಿ ಸಲಗವೊಂದು ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕ ಮೂಡಿಸಿದೆ.
ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಇಲ್ಲಿನ ಅಡ್ಡಹೊಳೆಯ ಪೆಟ್ರೋಲ್ ಪಂಪಿನ ಬಳಿ ಕಾಡಿನಿಂದ ಹೆದ್ದಾರಿಗೆ ಬಂದ ಗಂಡಾನೆ ಹೆದ್ದಾರಿಯನ್ನು ದಾಟಲೆತ್ನಿಸಿದೆ. ಆದರೆ ಹೆದ್ದಾರಿ ಅಗಲೀಕರಣಕ್ಕಾಗಿ ಅಗೆಯಲಾದ ಮಣ್ಣಿ ನಲ್ಲಿ ಹೂತು ಸಂಕಷ್ಟಕ್ಕೀಡಾಗಿದೆ. ಬಳಿಕ ಕಷ್ಟಪಟ್ಟು ಮೇಲೆದ್ದು ಸಾಗಿದ ಈ ಆನೆಯು ಅಯ್ಯಪ್ಪ ದೇವಾಲಯದ ಬಳಿಯಿಂದ ಪೇರಮಜಲು ರಸ್ತೆಯಲ್ಲಿ ಜನವಸತಿ ಪ್ರದೇಶದ ಮೂಲಕ ಹಾದು ಕಾಡು ಸೇರಿಕೊಂಡಿದೆ.

ರಸ್ತೆಯಲ್ಲಿಯೇ ಸಾಗಿದ ಆನೆಯು ಎಲ್ಲೂ ಆಕ್ರಮಣಕ್ಕೆ ಮುಂದಾಗದೇ ಕಾಡು ಸೇರಿದೆ. ಗ್ರಾಮಸ್ಥರು ಜೋರಾಗಿ ಬೊಬ್ಬೆ ಹೊಡೆದು ಸುತ್ತಮುತ್ತಲ ಎಚ್ಚರಿಸಿದ್ದರಿಂದ ಸಂಭಾವ್ಯ ಅಪಾಯ ತಪ್ಪಿದೆ.
ರಾತ್ರಿ ವೇಳೆ ಈ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದ್ದ ಆನೆಗಳು ಈಗ ಹಾಡಹಗಲೇ ಕಾಣಿಸಿಕೊಳ್ಳುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.

andolanait

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

24 mins ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

32 mins ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

36 mins ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

39 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

50 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

1 hour ago