ಜಿಲ್ಲೆಗಳು

‘ಭಾವ ಮತ್ತು ಜ್ಞಾನ ಸಂಪನ್ಮೂಲ ಭಾಷೆ’ :ಪ್ರೊ.ಎಂ.ಕೃಷ್ಣೇಗೌಡ

ಮೈಸೂರು : ‘ಭಾಷೆ ಎಂಬುದು ಕೇವಲ ಸಂವಹನ ಮಾಧ್ಯಮವಲ್ಲ, ಅದು ಭಾವ ಮತ್ತು ಜ್ಞಾನ ಸಂಪನ್ಮೂಲ’ ಎಂದು ಸಾಹಿತಿ ಪ್ರೊ.ಎಂ.ಕೃಷ್ಣೇಗೌಡ ಹೇಳಿದರು.

ನಗರದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ವತಿಯಿಂದ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ೬೭ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಪ್ರಪಂಚದ ಎಲ್ಲಿಯೂ ಭಾಷೆಯ ಹಬ್ಬವನ್ನು ಇಷ್ಟು ಸಡಗರದಿಂದ, ದೊಡ್ಡ ಮಟ್ಟದಲ್ಲಿ ಕನ್ನಡಿಗರನ್ನು ಬಿಟ್ಟರೇ ಮತ್ಯಾರೂ ಆಚರಿಸುವುದಿಲ್ಲ. ನಾಡಿನ ಭಾಷೆ, ನೆಲ, ಜಲ, ಸಾಂಸ್ಕೃತಿ, ಆಚಾರ-ವಿಚಾರ ಎಲ್ಲವನ್ನು ಒಳಗೊಂಡಂತೆ ಕನ್ನಡ ನಾಡು ಸಮೃದ್ಧವಾಗಿ ಇರಬೇಕು ಎಂಬುದೇ ಕನ್ನಡ ರಾಜ್ಯೋತ್ಸವ ಆಚರಣೆಯ ಉದ್ದೇಶ’ ಎಂದರು.

‘ಜಗತ್ತಿನ ಎಲ್ಲ ಭಾಷೆಗಳನ್ನು ಪ್ರೀತಿಸುವುದನ್ನು ಕನ್ನಡಿಗರಿಂದ ನೋಡಿ ಕಲಿಯಬೇಕು. ಹಾಗೆಯೇ, ತಮ್ಮ ತಮ್ಮ ಭಾಷೆಯನ್ನು ಹೇಗೆ, ಎಷ್ಟು ಪ್ರೀತ್ರಿಸಬೇಕು ಎಂಬುದನ್ನು ಕನ್ನಡಿಗರು ಬೇರೆ ಬೇರೆ ಭಾಷೆಯವರನ್ನು ನೋಡಿ ಕಲಿಯಬೇಕು’ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಂಕಣಕಾರ, ಲೇಖಕ ಶ್ರೀವತ್ಸ ಜೋಶಿ, ‘ಮಾತೃ ಭಾಷೆ ಎಂಬುದು ತಾಯಿಯಿದ್ದಂತೆ. ಮಗುವಿನ ಲಾಲನೆ-ಪಾಲನೆಯಲ್ಲಿ ತಾಯಿಯ ಪಾತ್ರಯಿರುವಂತೆ, ಪ್ರತಿಯೊಬ್ಬರ ವ್ಯಕ್ತಿತ್ವ ವಿಕಸನದಲ್ಲಿ ಭಾಷೆಯ ಪಾತ್ರ ಸಾಕಷ್ಟು ಇದೆ’ ಎಂದರು.

ಕನ್ನಡದಲ್ಲಿ ಕಲಿತವರಿಗೆ ಕನ್ನಡದ ಬಗ್ಗೆ ಕೀಳರಿಮೆ ಇದೆ. ಇದನ್ನು ಬಿಡಬೇಕು. ಕನ್ನಡ ಅಳಿವಿನಲ್ಲಿ ಇದೆ ಎಂಬ ಮಾತುಗಳಿಗೆ ಆಸ್ಪಾದ ನೀಡದಂತೆ ಕನ್ನಡವನ್ನು ಉಳಿಸುವ, ಬಳಸುವ ಮತ್ತು ಬದುಕುವ ಕಿಚ್ಚನ್ನು ಇಟ್ಟುಕೊಳ್ಳಬೇಕು ಎಂದರು.

‘ಹಚ್ಚೋಣ ಕನ್ನಡದ ದೀಪ ಎಂದು ಹಾಡುತ್ತೇವೆ. ಕೊಚ್ಚೋಣ ಕನ್ನಡದ ಶೇಫಾ ಎಂಬಂತೆ ಆಗಬಾರದು. ಕನ್ನಡ ನಮಗೆ ವಿಶೇಷ ಗೌರವ ನೀಡಿದೆ. ಆ ಭಾಷೆಯನ್ನು ಅಗೌರವ ತೋರುವ ರೀತಿ ಭಾಷೆಯನ್ನು ಬಳಸಬಾರದು’ಎಂದು ಕಿವಿಮಾತು ಹೇಳಿದರು.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಬಹುಮಾನ ಗಣ್ಯರು ಬಹುಮಾನ ವಿತರಿಸಿದರು. ಭಾಷಾವಾರು ರಾಜ್ಯಗಳ ಹಿನ್ನೆಲೆ, ಉದ್ದೇಶ, ಇದಕ್ಕಾಗಿ ನಡೆದ ಹೋರಾಟಗಳ ಬಗ್ಗೆ ತಿಳಿಸಿಕೊಟ್ಟ ಪ್ರೊ.ಎಂ.ಕೃಷ್ಣೇಗೌಡರು ಕವಿ ಹುಯಿಲಗೋಳ ನಾರಾಯಣ ಅವರ ರಚನೆಯ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಗೀತೆಯನ್ನು ಹಾಡಿದರು. ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿ ಕಾರ್ಯಕ್ರಮಗಳು ನಡೆದವು.

ಸಂತ ಫಿಲೋಮಿನಾ ವಿದ್ಯಾಸಂಸ್ಥೆಗಳ ರೆಕ್ಟರ್ ರೆ.ಫಾ.ಡಾ.ಬರ್ನಾರ್ಡ್ ಪ್ರಕಾಶ್ ಬಾರ್ನಿಸ್, ಕಾಲೇಜಿನ ಪ್ರಾಂಶುಪಾಲ ಡಾ.ರವಿ ಜೆ.ಡಿ.ಸಲ್ಡಾನ್ಹಾ, ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಎ.ಟಿ.ಸದೆಬೋಸ್ ಇದ್ದರು.

ಪೋಟೋ : ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ವತಿಯಿಂದ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ೬೭ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಶ್ರೀವತ್ಸ ಜೋಶಿ ಉದ್ಘಾಟಿಸಿದರು. ಪ್ರೊ.ಎಂ.ಕೃಷ್ಣೇಗೌಡ ಇತರರು ಇದ್ದರು.

ಪೋಟೋ ಬರಲಿದೆ))

 

 

 

 

 

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago