ಜಿಲ್ಲೆಗಳು

‘ಭಾವ ಮತ್ತು ಜ್ಞಾನ ಸಂಪನ್ಮೂಲ ಭಾಷೆ’ :ಪ್ರೊ.ಎಂ.ಕೃಷ್ಣೇಗೌಡ

ಮೈಸೂರು : ‘ಭಾಷೆ ಎಂಬುದು ಕೇವಲ ಸಂವಹನ ಮಾಧ್ಯಮವಲ್ಲ, ಅದು ಭಾವ ಮತ್ತು ಜ್ಞಾನ ಸಂಪನ್ಮೂಲ’ ಎಂದು ಸಾಹಿತಿ ಪ್ರೊ.ಎಂ.ಕೃಷ್ಣೇಗೌಡ ಹೇಳಿದರು.

ನಗರದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ವತಿಯಿಂದ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ೬೭ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಪ್ರಪಂಚದ ಎಲ್ಲಿಯೂ ಭಾಷೆಯ ಹಬ್ಬವನ್ನು ಇಷ್ಟು ಸಡಗರದಿಂದ, ದೊಡ್ಡ ಮಟ್ಟದಲ್ಲಿ ಕನ್ನಡಿಗರನ್ನು ಬಿಟ್ಟರೇ ಮತ್ಯಾರೂ ಆಚರಿಸುವುದಿಲ್ಲ. ನಾಡಿನ ಭಾಷೆ, ನೆಲ, ಜಲ, ಸಾಂಸ್ಕೃತಿ, ಆಚಾರ-ವಿಚಾರ ಎಲ್ಲವನ್ನು ಒಳಗೊಂಡಂತೆ ಕನ್ನಡ ನಾಡು ಸಮೃದ್ಧವಾಗಿ ಇರಬೇಕು ಎಂಬುದೇ ಕನ್ನಡ ರಾಜ್ಯೋತ್ಸವ ಆಚರಣೆಯ ಉದ್ದೇಶ’ ಎಂದರು.

‘ಜಗತ್ತಿನ ಎಲ್ಲ ಭಾಷೆಗಳನ್ನು ಪ್ರೀತಿಸುವುದನ್ನು ಕನ್ನಡಿಗರಿಂದ ನೋಡಿ ಕಲಿಯಬೇಕು. ಹಾಗೆಯೇ, ತಮ್ಮ ತಮ್ಮ ಭಾಷೆಯನ್ನು ಹೇಗೆ, ಎಷ್ಟು ಪ್ರೀತ್ರಿಸಬೇಕು ಎಂಬುದನ್ನು ಕನ್ನಡಿಗರು ಬೇರೆ ಬೇರೆ ಭಾಷೆಯವರನ್ನು ನೋಡಿ ಕಲಿಯಬೇಕು’ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಂಕಣಕಾರ, ಲೇಖಕ ಶ್ರೀವತ್ಸ ಜೋಶಿ, ‘ಮಾತೃ ಭಾಷೆ ಎಂಬುದು ತಾಯಿಯಿದ್ದಂತೆ. ಮಗುವಿನ ಲಾಲನೆ-ಪಾಲನೆಯಲ್ಲಿ ತಾಯಿಯ ಪಾತ್ರಯಿರುವಂತೆ, ಪ್ರತಿಯೊಬ್ಬರ ವ್ಯಕ್ತಿತ್ವ ವಿಕಸನದಲ್ಲಿ ಭಾಷೆಯ ಪಾತ್ರ ಸಾಕಷ್ಟು ಇದೆ’ ಎಂದರು.

ಕನ್ನಡದಲ್ಲಿ ಕಲಿತವರಿಗೆ ಕನ್ನಡದ ಬಗ್ಗೆ ಕೀಳರಿಮೆ ಇದೆ. ಇದನ್ನು ಬಿಡಬೇಕು. ಕನ್ನಡ ಅಳಿವಿನಲ್ಲಿ ಇದೆ ಎಂಬ ಮಾತುಗಳಿಗೆ ಆಸ್ಪಾದ ನೀಡದಂತೆ ಕನ್ನಡವನ್ನು ಉಳಿಸುವ, ಬಳಸುವ ಮತ್ತು ಬದುಕುವ ಕಿಚ್ಚನ್ನು ಇಟ್ಟುಕೊಳ್ಳಬೇಕು ಎಂದರು.

‘ಹಚ್ಚೋಣ ಕನ್ನಡದ ದೀಪ ಎಂದು ಹಾಡುತ್ತೇವೆ. ಕೊಚ್ಚೋಣ ಕನ್ನಡದ ಶೇಫಾ ಎಂಬಂತೆ ಆಗಬಾರದು. ಕನ್ನಡ ನಮಗೆ ವಿಶೇಷ ಗೌರವ ನೀಡಿದೆ. ಆ ಭಾಷೆಯನ್ನು ಅಗೌರವ ತೋರುವ ರೀತಿ ಭಾಷೆಯನ್ನು ಬಳಸಬಾರದು’ಎಂದು ಕಿವಿಮಾತು ಹೇಳಿದರು.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಬಹುಮಾನ ಗಣ್ಯರು ಬಹುಮಾನ ವಿತರಿಸಿದರು. ಭಾಷಾವಾರು ರಾಜ್ಯಗಳ ಹಿನ್ನೆಲೆ, ಉದ್ದೇಶ, ಇದಕ್ಕಾಗಿ ನಡೆದ ಹೋರಾಟಗಳ ಬಗ್ಗೆ ತಿಳಿಸಿಕೊಟ್ಟ ಪ್ರೊ.ಎಂ.ಕೃಷ್ಣೇಗೌಡರು ಕವಿ ಹುಯಿಲಗೋಳ ನಾರಾಯಣ ಅವರ ರಚನೆಯ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಗೀತೆಯನ್ನು ಹಾಡಿದರು. ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿ ಕಾರ್ಯಕ್ರಮಗಳು ನಡೆದವು.

ಸಂತ ಫಿಲೋಮಿನಾ ವಿದ್ಯಾಸಂಸ್ಥೆಗಳ ರೆಕ್ಟರ್ ರೆ.ಫಾ.ಡಾ.ಬರ್ನಾರ್ಡ್ ಪ್ರಕಾಶ್ ಬಾರ್ನಿಸ್, ಕಾಲೇಜಿನ ಪ್ರಾಂಶುಪಾಲ ಡಾ.ರವಿ ಜೆ.ಡಿ.ಸಲ್ಡಾನ್ಹಾ, ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಎ.ಟಿ.ಸದೆಬೋಸ್ ಇದ್ದರು.

ಪೋಟೋ : ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ವತಿಯಿಂದ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ೬೭ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಶ್ರೀವತ್ಸ ಜೋಶಿ ಉದ್ಘಾಟಿಸಿದರು. ಪ್ರೊ.ಎಂ.ಕೃಷ್ಣೇಗೌಡ ಇತರರು ಇದ್ದರು.

ಪೋಟೋ ಬರಲಿದೆ))

 

 

 

 

 

andolana

Recent Posts

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…

3 mins ago

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

9 mins ago

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

19 mins ago

ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ…

27 mins ago

ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ

ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…

1 hour ago

ಓದುಗರ ಪತ್ರ: ಅನಿಲ ಸಿಲಿಂಡರ್ ಬೆಲೆ ಏರಿಕೆ ತರವಲ್ಲ

ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦…

2 hours ago