ಜಿಲ್ಲೆಗಳು

‘ಭಾವ ಮತ್ತು ಜ್ಞಾನ ಸಂಪನ್ಮೂಲ ಭಾಷೆ’ :ಪ್ರೊ.ಎಂ.ಕೃಷ್ಣೇಗೌಡ

ಮೈಸೂರು : ‘ಭಾಷೆ ಎಂಬುದು ಕೇವಲ ಸಂವಹನ ಮಾಧ್ಯಮವಲ್ಲ, ಅದು ಭಾವ ಮತ್ತು ಜ್ಞಾನ ಸಂಪನ್ಮೂಲ’ ಎಂದು ಸಾಹಿತಿ ಪ್ರೊ.ಎಂ.ಕೃಷ್ಣೇಗೌಡ ಹೇಳಿದರು.

ನಗರದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ವತಿಯಿಂದ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ೬೭ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಪ್ರಪಂಚದ ಎಲ್ಲಿಯೂ ಭಾಷೆಯ ಹಬ್ಬವನ್ನು ಇಷ್ಟು ಸಡಗರದಿಂದ, ದೊಡ್ಡ ಮಟ್ಟದಲ್ಲಿ ಕನ್ನಡಿಗರನ್ನು ಬಿಟ್ಟರೇ ಮತ್ಯಾರೂ ಆಚರಿಸುವುದಿಲ್ಲ. ನಾಡಿನ ಭಾಷೆ, ನೆಲ, ಜಲ, ಸಾಂಸ್ಕೃತಿ, ಆಚಾರ-ವಿಚಾರ ಎಲ್ಲವನ್ನು ಒಳಗೊಂಡಂತೆ ಕನ್ನಡ ನಾಡು ಸಮೃದ್ಧವಾಗಿ ಇರಬೇಕು ಎಂಬುದೇ ಕನ್ನಡ ರಾಜ್ಯೋತ್ಸವ ಆಚರಣೆಯ ಉದ್ದೇಶ’ ಎಂದರು.

‘ಜಗತ್ತಿನ ಎಲ್ಲ ಭಾಷೆಗಳನ್ನು ಪ್ರೀತಿಸುವುದನ್ನು ಕನ್ನಡಿಗರಿಂದ ನೋಡಿ ಕಲಿಯಬೇಕು. ಹಾಗೆಯೇ, ತಮ್ಮ ತಮ್ಮ ಭಾಷೆಯನ್ನು ಹೇಗೆ, ಎಷ್ಟು ಪ್ರೀತ್ರಿಸಬೇಕು ಎಂಬುದನ್ನು ಕನ್ನಡಿಗರು ಬೇರೆ ಬೇರೆ ಭಾಷೆಯವರನ್ನು ನೋಡಿ ಕಲಿಯಬೇಕು’ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಂಕಣಕಾರ, ಲೇಖಕ ಶ್ರೀವತ್ಸ ಜೋಶಿ, ‘ಮಾತೃ ಭಾಷೆ ಎಂಬುದು ತಾಯಿಯಿದ್ದಂತೆ. ಮಗುವಿನ ಲಾಲನೆ-ಪಾಲನೆಯಲ್ಲಿ ತಾಯಿಯ ಪಾತ್ರಯಿರುವಂತೆ, ಪ್ರತಿಯೊಬ್ಬರ ವ್ಯಕ್ತಿತ್ವ ವಿಕಸನದಲ್ಲಿ ಭಾಷೆಯ ಪಾತ್ರ ಸಾಕಷ್ಟು ಇದೆ’ ಎಂದರು.

ಕನ್ನಡದಲ್ಲಿ ಕಲಿತವರಿಗೆ ಕನ್ನಡದ ಬಗ್ಗೆ ಕೀಳರಿಮೆ ಇದೆ. ಇದನ್ನು ಬಿಡಬೇಕು. ಕನ್ನಡ ಅಳಿವಿನಲ್ಲಿ ಇದೆ ಎಂಬ ಮಾತುಗಳಿಗೆ ಆಸ್ಪಾದ ನೀಡದಂತೆ ಕನ್ನಡವನ್ನು ಉಳಿಸುವ, ಬಳಸುವ ಮತ್ತು ಬದುಕುವ ಕಿಚ್ಚನ್ನು ಇಟ್ಟುಕೊಳ್ಳಬೇಕು ಎಂದರು.

‘ಹಚ್ಚೋಣ ಕನ್ನಡದ ದೀಪ ಎಂದು ಹಾಡುತ್ತೇವೆ. ಕೊಚ್ಚೋಣ ಕನ್ನಡದ ಶೇಫಾ ಎಂಬಂತೆ ಆಗಬಾರದು. ಕನ್ನಡ ನಮಗೆ ವಿಶೇಷ ಗೌರವ ನೀಡಿದೆ. ಆ ಭಾಷೆಯನ್ನು ಅಗೌರವ ತೋರುವ ರೀತಿ ಭಾಷೆಯನ್ನು ಬಳಸಬಾರದು’ಎಂದು ಕಿವಿಮಾತು ಹೇಳಿದರು.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಬಹುಮಾನ ಗಣ್ಯರು ಬಹುಮಾನ ವಿತರಿಸಿದರು. ಭಾಷಾವಾರು ರಾಜ್ಯಗಳ ಹಿನ್ನೆಲೆ, ಉದ್ದೇಶ, ಇದಕ್ಕಾಗಿ ನಡೆದ ಹೋರಾಟಗಳ ಬಗ್ಗೆ ತಿಳಿಸಿಕೊಟ್ಟ ಪ್ರೊ.ಎಂ.ಕೃಷ್ಣೇಗೌಡರು ಕವಿ ಹುಯಿಲಗೋಳ ನಾರಾಯಣ ಅವರ ರಚನೆಯ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಗೀತೆಯನ್ನು ಹಾಡಿದರು. ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿ ಕಾರ್ಯಕ್ರಮಗಳು ನಡೆದವು.

ಸಂತ ಫಿಲೋಮಿನಾ ವಿದ್ಯಾಸಂಸ್ಥೆಗಳ ರೆಕ್ಟರ್ ರೆ.ಫಾ.ಡಾ.ಬರ್ನಾರ್ಡ್ ಪ್ರಕಾಶ್ ಬಾರ್ನಿಸ್, ಕಾಲೇಜಿನ ಪ್ರಾಂಶುಪಾಲ ಡಾ.ರವಿ ಜೆ.ಡಿ.ಸಲ್ಡಾನ್ಹಾ, ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಎ.ಟಿ.ಸದೆಬೋಸ್ ಇದ್ದರು.

ಪೋಟೋ : ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ವತಿಯಿಂದ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ೬೭ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಶ್ರೀವತ್ಸ ಜೋಶಿ ಉದ್ಘಾಟಿಸಿದರು. ಪ್ರೊ.ಎಂ.ಕೃಷ್ಣೇಗೌಡ ಇತರರು ಇದ್ದರು.

ಪೋಟೋ ಬರಲಿದೆ))

 

 

 

 

 

andolana

Recent Posts

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

20 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 29 ಬುಧವಾರ

32 mins ago

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

14 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

15 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

16 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

16 hours ago