ಜಿಲ್ಲೆಗಳು

‘ಭಾವ ಮತ್ತು ಜ್ಞಾನ ಸಂಪನ್ಮೂಲ ಭಾಷೆ’ :ಪ್ರೊ.ಎಂ.ಕೃಷ್ಣೇಗೌಡ

ಮೈಸೂರು : ‘ಭಾಷೆ ಎಂಬುದು ಕೇವಲ ಸಂವಹನ ಮಾಧ್ಯಮವಲ್ಲ, ಅದು ಭಾವ ಮತ್ತು ಜ್ಞಾನ ಸಂಪನ್ಮೂಲ’ ಎಂದು ಸಾಹಿತಿ ಪ್ರೊ.ಎಂ.ಕೃಷ್ಣೇಗೌಡ ಹೇಳಿದರು.

ನಗರದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ವತಿಯಿಂದ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ೬೭ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಪ್ರಪಂಚದ ಎಲ್ಲಿಯೂ ಭಾಷೆಯ ಹಬ್ಬವನ್ನು ಇಷ್ಟು ಸಡಗರದಿಂದ, ದೊಡ್ಡ ಮಟ್ಟದಲ್ಲಿ ಕನ್ನಡಿಗರನ್ನು ಬಿಟ್ಟರೇ ಮತ್ಯಾರೂ ಆಚರಿಸುವುದಿಲ್ಲ. ನಾಡಿನ ಭಾಷೆ, ನೆಲ, ಜಲ, ಸಾಂಸ್ಕೃತಿ, ಆಚಾರ-ವಿಚಾರ ಎಲ್ಲವನ್ನು ಒಳಗೊಂಡಂತೆ ಕನ್ನಡ ನಾಡು ಸಮೃದ್ಧವಾಗಿ ಇರಬೇಕು ಎಂಬುದೇ ಕನ್ನಡ ರಾಜ್ಯೋತ್ಸವ ಆಚರಣೆಯ ಉದ್ದೇಶ’ ಎಂದರು.

‘ಜಗತ್ತಿನ ಎಲ್ಲ ಭಾಷೆಗಳನ್ನು ಪ್ರೀತಿಸುವುದನ್ನು ಕನ್ನಡಿಗರಿಂದ ನೋಡಿ ಕಲಿಯಬೇಕು. ಹಾಗೆಯೇ, ತಮ್ಮ ತಮ್ಮ ಭಾಷೆಯನ್ನು ಹೇಗೆ, ಎಷ್ಟು ಪ್ರೀತ್ರಿಸಬೇಕು ಎಂಬುದನ್ನು ಕನ್ನಡಿಗರು ಬೇರೆ ಬೇರೆ ಭಾಷೆಯವರನ್ನು ನೋಡಿ ಕಲಿಯಬೇಕು’ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಂಕಣಕಾರ, ಲೇಖಕ ಶ್ರೀವತ್ಸ ಜೋಶಿ, ‘ಮಾತೃ ಭಾಷೆ ಎಂಬುದು ತಾಯಿಯಿದ್ದಂತೆ. ಮಗುವಿನ ಲಾಲನೆ-ಪಾಲನೆಯಲ್ಲಿ ತಾಯಿಯ ಪಾತ್ರಯಿರುವಂತೆ, ಪ್ರತಿಯೊಬ್ಬರ ವ್ಯಕ್ತಿತ್ವ ವಿಕಸನದಲ್ಲಿ ಭಾಷೆಯ ಪಾತ್ರ ಸಾಕಷ್ಟು ಇದೆ’ ಎಂದರು.

ಕನ್ನಡದಲ್ಲಿ ಕಲಿತವರಿಗೆ ಕನ್ನಡದ ಬಗ್ಗೆ ಕೀಳರಿಮೆ ಇದೆ. ಇದನ್ನು ಬಿಡಬೇಕು. ಕನ್ನಡ ಅಳಿವಿನಲ್ಲಿ ಇದೆ ಎಂಬ ಮಾತುಗಳಿಗೆ ಆಸ್ಪಾದ ನೀಡದಂತೆ ಕನ್ನಡವನ್ನು ಉಳಿಸುವ, ಬಳಸುವ ಮತ್ತು ಬದುಕುವ ಕಿಚ್ಚನ್ನು ಇಟ್ಟುಕೊಳ್ಳಬೇಕು ಎಂದರು.

‘ಹಚ್ಚೋಣ ಕನ್ನಡದ ದೀಪ ಎಂದು ಹಾಡುತ್ತೇವೆ. ಕೊಚ್ಚೋಣ ಕನ್ನಡದ ಶೇಫಾ ಎಂಬಂತೆ ಆಗಬಾರದು. ಕನ್ನಡ ನಮಗೆ ವಿಶೇಷ ಗೌರವ ನೀಡಿದೆ. ಆ ಭಾಷೆಯನ್ನು ಅಗೌರವ ತೋರುವ ರೀತಿ ಭಾಷೆಯನ್ನು ಬಳಸಬಾರದು’ಎಂದು ಕಿವಿಮಾತು ಹೇಳಿದರು.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಬಹುಮಾನ ಗಣ್ಯರು ಬಹುಮಾನ ವಿತರಿಸಿದರು. ಭಾಷಾವಾರು ರಾಜ್ಯಗಳ ಹಿನ್ನೆಲೆ, ಉದ್ದೇಶ, ಇದಕ್ಕಾಗಿ ನಡೆದ ಹೋರಾಟಗಳ ಬಗ್ಗೆ ತಿಳಿಸಿಕೊಟ್ಟ ಪ್ರೊ.ಎಂ.ಕೃಷ್ಣೇಗೌಡರು ಕವಿ ಹುಯಿಲಗೋಳ ನಾರಾಯಣ ಅವರ ರಚನೆಯ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಗೀತೆಯನ್ನು ಹಾಡಿದರು. ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿ ಕಾರ್ಯಕ್ರಮಗಳು ನಡೆದವು.

ಸಂತ ಫಿಲೋಮಿನಾ ವಿದ್ಯಾಸಂಸ್ಥೆಗಳ ರೆಕ್ಟರ್ ರೆ.ಫಾ.ಡಾ.ಬರ್ನಾರ್ಡ್ ಪ್ರಕಾಶ್ ಬಾರ್ನಿಸ್, ಕಾಲೇಜಿನ ಪ್ರಾಂಶುಪಾಲ ಡಾ.ರವಿ ಜೆ.ಡಿ.ಸಲ್ಡಾನ್ಹಾ, ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಎ.ಟಿ.ಸದೆಬೋಸ್ ಇದ್ದರು.

ಪೋಟೋ : ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ವತಿಯಿಂದ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ೬೭ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಶ್ರೀವತ್ಸ ಜೋಶಿ ಉದ್ಘಾಟಿಸಿದರು. ಪ್ರೊ.ಎಂ.ಕೃಷ್ಣೇಗೌಡ ಇತರರು ಇದ್ದರು.

ಪೋಟೋ ಬರಲಿದೆ))

 

 

 

 

 

andolana

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

20 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

20 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

20 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

20 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

20 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

20 hours ago