ಮೈಸೂರು : ‘ಭಾಷೆ ಎಂಬುದು ಕೇವಲ ಸಂವಹನ ಮಾಧ್ಯಮವಲ್ಲ, ಅದು ಭಾವ ಮತ್ತು ಜ್ಞಾನ ಸಂಪನ್ಮೂಲ’ ಎಂದು ಸಾಹಿತಿ ಪ್ರೊ.ಎಂ.ಕೃಷ್ಣೇಗೌಡ ಹೇಳಿದರು.
ನಗರದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ವತಿಯಿಂದ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ೬೭ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
‘ಪ್ರಪಂಚದ ಎಲ್ಲಿಯೂ ಭಾಷೆಯ ಹಬ್ಬವನ್ನು ಇಷ್ಟು ಸಡಗರದಿಂದ, ದೊಡ್ಡ ಮಟ್ಟದಲ್ಲಿ ಕನ್ನಡಿಗರನ್ನು ಬಿಟ್ಟರೇ ಮತ್ಯಾರೂ ಆಚರಿಸುವುದಿಲ್ಲ. ನಾಡಿನ ಭಾಷೆ, ನೆಲ, ಜಲ, ಸಾಂಸ್ಕೃತಿ, ಆಚಾರ-ವಿಚಾರ ಎಲ್ಲವನ್ನು ಒಳಗೊಂಡಂತೆ ಕನ್ನಡ ನಾಡು ಸಮೃದ್ಧವಾಗಿ ಇರಬೇಕು ಎಂಬುದೇ ಕನ್ನಡ ರಾಜ್ಯೋತ್ಸವ ಆಚರಣೆಯ ಉದ್ದೇಶ’ ಎಂದರು.
‘ಜಗತ್ತಿನ ಎಲ್ಲ ಭಾಷೆಗಳನ್ನು ಪ್ರೀತಿಸುವುದನ್ನು ಕನ್ನಡಿಗರಿಂದ ನೋಡಿ ಕಲಿಯಬೇಕು. ಹಾಗೆಯೇ, ತಮ್ಮ ತಮ್ಮ ಭಾಷೆಯನ್ನು ಹೇಗೆ, ಎಷ್ಟು ಪ್ರೀತ್ರಿಸಬೇಕು ಎಂಬುದನ್ನು ಕನ್ನಡಿಗರು ಬೇರೆ ಬೇರೆ ಭಾಷೆಯವರನ್ನು ನೋಡಿ ಕಲಿಯಬೇಕು’ ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಂಕಣಕಾರ, ಲೇಖಕ ಶ್ರೀವತ್ಸ ಜೋಶಿ, ‘ಮಾತೃ ಭಾಷೆ ಎಂಬುದು ತಾಯಿಯಿದ್ದಂತೆ. ಮಗುವಿನ ಲಾಲನೆ-ಪಾಲನೆಯಲ್ಲಿ ತಾಯಿಯ ಪಾತ್ರಯಿರುವಂತೆ, ಪ್ರತಿಯೊಬ್ಬರ ವ್ಯಕ್ತಿತ್ವ ವಿಕಸನದಲ್ಲಿ ಭಾಷೆಯ ಪಾತ್ರ ಸಾಕಷ್ಟು ಇದೆ’ ಎಂದರು.
ಕನ್ನಡದಲ್ಲಿ ಕಲಿತವರಿಗೆ ಕನ್ನಡದ ಬಗ್ಗೆ ಕೀಳರಿಮೆ ಇದೆ. ಇದನ್ನು ಬಿಡಬೇಕು. ಕನ್ನಡ ಅಳಿವಿನಲ್ಲಿ ಇದೆ ಎಂಬ ಮಾತುಗಳಿಗೆ ಆಸ್ಪಾದ ನೀಡದಂತೆ ಕನ್ನಡವನ್ನು ಉಳಿಸುವ, ಬಳಸುವ ಮತ್ತು ಬದುಕುವ ಕಿಚ್ಚನ್ನು ಇಟ್ಟುಕೊಳ್ಳಬೇಕು ಎಂದರು.
‘ಹಚ್ಚೋಣ ಕನ್ನಡದ ದೀಪ ಎಂದು ಹಾಡುತ್ತೇವೆ. ಕೊಚ್ಚೋಣ ಕನ್ನಡದ ಶೇಫಾ ಎಂಬಂತೆ ಆಗಬಾರದು. ಕನ್ನಡ ನಮಗೆ ವಿಶೇಷ ಗೌರವ ನೀಡಿದೆ. ಆ ಭಾಷೆಯನ್ನು ಅಗೌರವ ತೋರುವ ರೀತಿ ಭಾಷೆಯನ್ನು ಬಳಸಬಾರದು’ಎಂದು ಕಿವಿಮಾತು ಹೇಳಿದರು.
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಬಹುಮಾನ ಗಣ್ಯರು ಬಹುಮಾನ ವಿತರಿಸಿದರು. ಭಾಷಾವಾರು ರಾಜ್ಯಗಳ ಹಿನ್ನೆಲೆ, ಉದ್ದೇಶ, ಇದಕ್ಕಾಗಿ ನಡೆದ ಹೋರಾಟಗಳ ಬಗ್ಗೆ ತಿಳಿಸಿಕೊಟ್ಟ ಪ್ರೊ.ಎಂ.ಕೃಷ್ಣೇಗೌಡರು ಕವಿ ಹುಯಿಲಗೋಳ ನಾರಾಯಣ ಅವರ ರಚನೆಯ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಗೀತೆಯನ್ನು ಹಾಡಿದರು. ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿ ಕಾರ್ಯಕ್ರಮಗಳು ನಡೆದವು.
ಸಂತ ಫಿಲೋಮಿನಾ ವಿದ್ಯಾಸಂಸ್ಥೆಗಳ ರೆಕ್ಟರ್ ರೆ.ಫಾ.ಡಾ.ಬರ್ನಾರ್ಡ್ ಪ್ರಕಾಶ್ ಬಾರ್ನಿಸ್, ಕಾಲೇಜಿನ ಪ್ರಾಂಶುಪಾಲ ಡಾ.ರವಿ ಜೆ.ಡಿ.ಸಲ್ಡಾನ್ಹಾ, ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಎ.ಟಿ.ಸದೆಬೋಸ್ ಇದ್ದರು.
ಪೋಟೋ : ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ವತಿಯಿಂದ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ೬೭ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಶ್ರೀವತ್ಸ ಜೋಶಿ ಉದ್ಘಾಟಿಸಿದರು. ಪ್ರೊ.ಎಂ.ಕೃಷ್ಣೇಗೌಡ ಇತರರು ಇದ್ದರು.
ಪೋಟೋ ಬರಲಿದೆ))
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…