ಜಿಲ್ಲೆಗಳು

ಆಂಗ್ಲಭಾಷೆ ಹುಚ್ಚು ವ್ಯಾಮೋಹದಿಂದ ಕನ್ನಡ ಭಾಷೆಗೆ ಪೆಟ್ಟು: ಸಿಪಿಕೆ

ಮೈಸೂರು: ಆಂಗ್ಲ ಭಾಷೆಯ ಹುಚ್ಚು ವ್ಯಾಮೋಹದಿಂದ ಇಂದು ಕನ್ನಡ ಭಾಷೆ ಅವಸಾನದ ಅಂಚಿನಲ್ಲಿದೆ. ಅದನ್ನು ಉಳಿಸಿ ಬೆಳೆಸಬೇಕಾದುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ತಿಳಿಸಿದರು.

ನಗರದ ಅಗ್ರಹಾರದಲ್ಲಿರುವ ನಟರಾಜ ಸಭಾ ಭವನದಲ್ಲಿ ಗುರುವಾರ ಶ್ರೀ ನಟರಾಜ ಪ್ರತಿಷ್ಠಾನ ಹಾಗೂ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ೬೭ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂಪರ್ಕ ಭಾಷೆಯಾಗಿ ನಮಗೆ ಇಂಗ್ಲಿಷ್ ಸೇರಿದಂತೆ ಪ್ರಪಂಚದ ಎಲ್ಲ ಭಾಷೆಗಳೂ ಬೇಕು. ಆದರೆ, ಅಗ್ರ ಸ್ಥಾನವನ್ನು ನಾವು ಕನ್ನಡಕ್ಕೆ ಮೀಸಲಿಡಬೇಕು. ಕನ್ನಡ ಉಳಿದು ಬೆಳೆಯಬೇಕಾದರೆ ನಾವೆಲ್ಲರೂ ಕನ್ನಡವನ್ನು ದಿನನಿತ್ಯ ಬಳಸಬೇಕು ಎಂದು ಕಿವಿಮಾತು ಹೇಳಿದರು.

ಇಂದು ಪೋಷಕರ ಒತ್ತಡದಿಂದ ಮಕ್ಕಳು ಸಂದಿಗ್ಧ ಸ್ಥಿತಿಯಲ್ಲಿದ್ದಾರೆ. ಆಂಗ್ಲಭಾಷೆಯನ್ನೂ ಸರಿಯಾಗಿ ಕಲಿಯುವುದಿಲ್ಲ. ಕನ್ನಡ ಭಾಷೆಯನ್ನೂ ಸಂಪೂರ್ಣ ಕಲಿಯದೆ ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ಕುವೆಂಪು ಅವರು ಹೇಳುವಂತೆ ಮನೆಯ ಎಲ್ಲ ಕಿಟಕಿ, ಬಾಗಿಲುಗಳನ್ನೂ ತೆರೆದಿಡಬೇಕು. ಆದರೆ, ಹೊರಗಿನಿಂದ ಬರುವ ಗಾಳಿ ನಮ್ಮನ್ನು ಹೊತ್ತುಕೊಂಡು ಹೋಗದ ಹಾಗೆ ಎಚ್ಚರ ವಹಿಸಬೇಕು. ಜತೆಗೆ ಶಿಕ್ಷಣ ಎಂಬುದು ಮಕ್ಕಳಿಗೆ ಸೃಜನಶೀಲತೆ ಹಾಗೂ ವೈಚಾರಿಕತೆಯನ್ನು ತಿಳಿಸಿಕೊಡಬೇಕು. ಇಂತಹ ಭಾವನೆಗಳು ಬೆಳೆಯಬೇಕಾದಲ್ಲಿ ಮಾತೃ ಭಾಷೆಯಿಂದ ಮಾತ್ರ ಸಾಧ್ಯ ಎಂದರು.

ಇದಕ್ಕೂ ಮುನ್ನ ನಟರಾಜ ಶಾಲೆಯ ವಿದ್ಯಾರ್ಥಿಗಳು ಕನ್ನಡ ಧ್ವಜವನ್ನು ಹಿಡಿದು ಆಕರ್ಷಕವಾಗಿ ಮೆರವಣಿಗೆ ನಡೆಸಿದರು. ಶಾಲೆಯ ಆವರಣದಿಂದ ಆರಂಭವಾದ ಮೆರವಣಿಗೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಉದ್ಘಾಟಿಸಿದರು. ಮೆರವಣಿಗೆಯ ಬಸವೇಶ್ವರ ಪುತ್ತಳಿ ಮೂಲಕ ಸಾಗಿ ಸಯ್ಯಾಜಿರಾವ್ ರಸ್ತೆ, ಎಂಜಿ ರಸ್ತೆಯಿಂದ ಶಾಲೆಯ ಆವರಣದಲ್ಲಿ ಅಂತ್ಯಗೊಂಡಿತು. ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ ಉಪಸ್ಥಿತಿ ವಹಿಸಿದ್ದರು. ನಟರಾಜ ಪ್ರತಿಷ್ಠಾನದ ವಿಶೇಷಾಧಿಕಾರಿ ಪ್ರೊ.ಎಸ್.ಶಿವರಾಜಪ್ಪ ಅಧ್ಯಕ್ಷತೆ ವಹಿಸಿದ್ದರು. ಶ್ರೀ ನಟರಾಜ ಪ್ರತಿಷ್ಠಾನದ ಎಲ್ಲ ಅಂಗ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

 ಹಿಂದಿ ಭಾಷೆಯ ಹೇರಿಕೆಯ ಹುನ್ನಾರ ಹಿಂದಿನಿಂದಲೂ ನಡೆದಿದೆ. ಹಿಂದಿ ರಾಷ್ಟ್ರ ಭಾಷೆಯಲ್ಲ. ದೇಶದ ಎಲ್ಲಾ ಭಾಷೆಗಳೂ ರಾಷ್ಟ್ರ ಭಾಷೆಗಳೇ. ಹಿಂದಿ ಸಂಪರ್ಕ ಭಾಷೆಯಾದರೆ ಅಡ್ಡಿಯಿಲ್ಲ. ಅದೇ ಸರ್ವಸ್ವವಾಗಬಾರದು. -ಡಾ.ಸಿ.ಪಿ.ಕೃಷ್ಣಕುಮಾರ್, ಸಾಹಿತಿ.

andolana

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

5 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

6 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

7 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

8 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

8 hours ago