Mysore
23
broken clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಕುಡಿಯುವ ನೀರಿನ ಕೊರತೆ ಆಗದಂತೆ ನೋಡಿಕೊಳ್ಳಿ : ಅಧಿಕಾರಿಗಳಿಗೆ ಜಿಟಿಡಿ ಸೂಚನೆ !

ಮೈಸೂರು:  ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಗಳಲ್ಲಿ ಜನ-ಜಾನುವಾರಿಗೆ ಕುಡಿಯುವ ನೀರು ಸರಬರಾಜಿನಲ್ಲಿ ಕೊರತೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಶಾಸಕ ಜಿ.ಟಿ. ದೇವೇಗೌಡ ಸೂಚಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಬೇಸಿಗೆ ಬರಲಿದ್ದು, ನೀರು ಪೂರೈಕೆಗೆ ಸಂಬಂಧಿಸಿದಂತೆ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಬಾರದು’ ಎಂದು ನಿರ್ದೇಶನ ನೀಡಿದರು.

ಕ್ಷೇತ್ರದ ಗ್ರಾಮ ಪಂಚಾಯಿತಿವಾರು ಪ್ರಗತಿ ಪರಿಶೀಲನೆ ನಡೆಸಿದ ಶಾಸಕರು, ಕುಡಿಯುವ ನೀರಿನ ಪರಿಸ್ಥಿತಿ, ನರೇಗಾ ಸೇರಿದಂತೆ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಪಿಡಿಒಗಳಿಂದ ಮಾಹಿತಿ ಪಡೆದರು.

‘ಎಲ್ಲೆಲ್ಲಿಗೆ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳು ಅಗತ್ಯವಿದೆ, ಎಲ್ಲೆಲ್ಲಿ ಕಟ್ಟಡ ನಿರ್ಮಿಸಬೇಕು ಮತ್ತು ಹೆಚ್ಚುವರಿ ಕೊಠಡಿಗಳೆಷ್ಟು ಬೇಕಾಗಿದೆ ಎಂಬ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಬೇಕು.

ಅದರ ಪ್ರತಿಯನ್ನು ನನಗೂ ಕೊಡಬೇಕು. ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಿ ನಾನು ಆದ್ಯತೆ ಮೇಲೆ ಮಂಜೂರು ಮಾಡಿಸಿಕೊಡುತ್ತೇನೆ. ಪ್ರಸ್ತಾವ ಕಳುಹಿಸಿ ಸುಮ್ಮನೆ ಕುಳಿತುಕೊಂಡರೆ ಪ್ರಯೋಜನ ಆಗುವುದಿಲ್ಲ. ನನ್ನ ಮೂಲಕ ಫಾಲೋಅಪ್‌ ಮಾಡಿಸಬೇಕು. ಕೂಡಲೇ ಪಟ್ಟಿ ಕೊಡಬೇಕು’ ಎಂದು ನಿರ್ದೇಶನ ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!