ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಗಳಲ್ಲಿ ಜನ-ಜಾನುವಾರಿಗೆ ಕುಡಿಯುವ ನೀರು ಸರಬರಾಜಿನಲ್ಲಿ ಕೊರತೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಶಾಸಕ ಜಿ.ಟಿ. ದೇವೇಗೌಡ ಸೂಚಿಸಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಬೇಸಿಗೆ ಬರಲಿದ್ದು, ನೀರು ಪೂರೈಕೆಗೆ ಸಂಬಂಧಿಸಿದಂತೆ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಬಾರದು’ ಎಂದು ನಿರ್ದೇಶನ ನೀಡಿದರು.
ಕ್ಷೇತ್ರದ ಗ್ರಾಮ ಪಂಚಾಯಿತಿವಾರು ಪ್ರಗತಿ ಪರಿಶೀಲನೆ ನಡೆಸಿದ ಶಾಸಕರು, ಕುಡಿಯುವ ನೀರಿನ ಪರಿಸ್ಥಿತಿ, ನರೇಗಾ ಸೇರಿದಂತೆ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಪಿಡಿಒಗಳಿಂದ ಮಾಹಿತಿ ಪಡೆದರು.
‘ಎಲ್ಲೆಲ್ಲಿಗೆ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳು ಅಗತ್ಯವಿದೆ, ಎಲ್ಲೆಲ್ಲಿ ಕಟ್ಟಡ ನಿರ್ಮಿಸಬೇಕು ಮತ್ತು ಹೆಚ್ಚುವರಿ ಕೊಠಡಿಗಳೆಷ್ಟು ಬೇಕಾಗಿದೆ ಎಂಬ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಬೇಕು.
ಅದರ ಪ್ರತಿಯನ್ನು ನನಗೂ ಕೊಡಬೇಕು. ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಿ ನಾನು ಆದ್ಯತೆ ಮೇಲೆ ಮಂಜೂರು ಮಾಡಿಸಿಕೊಡುತ್ತೇನೆ. ಪ್ರಸ್ತಾವ ಕಳುಹಿಸಿ ಸುಮ್ಮನೆ ಕುಳಿತುಕೊಂಡರೆ ಪ್ರಯೋಜನ ಆಗುವುದಿಲ್ಲ. ನನ್ನ ಮೂಲಕ ಫಾಲೋಅಪ್ ಮಾಡಿಸಬೇಕು. ಕೂಡಲೇ ಪಟ್ಟಿ ಕೊಡಬೇಕು’ ಎಂದು ನಿರ್ದೇಶನ ನೀಡಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…