ಜಿಲ್ಲೆಗಳು

ಕಾವೇರಿ ನಿಸರ್ಗಧಾಮಕ್ಕೆ ಪ್ರವೇಶ ನಿರ್ಬಂಧ

ಗುಜರಾತ್ ತೂಗು ಸೇತುವೆ ದುರಂತ ಬೆನ್ನಲ್ಲೇ ಮುನ್ನೆಚ್ಚರಿಕೆ; ಶಿಥಿಲಾವಸ್ಥೆಯಲ್ಲಿದ್ದ ಸೇತುವೆಗೆ ದುರಸ್ತಿ ಭಾಗ್ಯ

ವರದಿ: ಕೆ.ಬಿ.ಶಂಶುದ್ಧೀನ್

ಕುಶಾಲನಗರ: ಗುಜರಾತ್ ತೂಗು ಸೇತುವೆ ದುರಂತ ಬೆನ್ನಲ್ಲೇ ಕೊಡಗು ಜಿಲ್ಲೆಯಲ್ಲೂ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ಶಿಥಿಲಾವಸ್ಥೆಯಲ್ಲಿದ್ದ ಕಾವೇರಿ ನಿಸರ್ಗಧಾಮದ ತೂಗು ಸೇತುವೆ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ತಾತ್ಕಲಿಕವಾಗಿ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಕೊಡಗು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಕ್ಕೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ನಿಸರ್ಗಧಾಮದ ಒಳ ಪ್ರವೇಶಿಸಿಸಲು ತೂಗು ಸೇತುವೆ ಮೂಲಕವೇ ತೆರಳಬೇಕಾಗಿದೆ. ಆದರೆ, ಇತ್ತೀಚೆಗೆ ತೂಗು ಸೇತುವೆ ಶಿಥಿಲಾವಸ್ಥೆಯಲ್ಲಿತ್ತು.

ಇತ್ತೀಚಿಗೆ ನಡೆದ ಗುಜರಾತ್‌ನ ಮೊರ್ಬಿ ಸೇತುವೆ ಅವಘಡ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ರಾಜ್ಯದಲ್ಲಿ ದುರಸ್ತಿಯಲ್ಲಿರುವ ತೂಗು ಸೇತುವೆಗಳನ್ನು ಪರಿಶೀಲನೆ ನಡೆಸಲು ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಕುಶಾಲನಗರದ ಕಾವೇರಿ ನಿಸರ್ಗಧಾಮದ ತೂಗು ಸೇತುವೆಯ ಬಳಕೆಗೆ ಯೋಗ್ಯವಿಲ್ಲ ಎಂದು ತಂತ್ರಜ್ಞರು ವರದಿ ನೀಡಿದ ಕಾರಣವಾಗಿ ಕಾವೇರಿ ನಿಸರ್ಗಧಾಮವನ್ನು ಮುಚ್ಚಲಾಗಿದೆ.

೨೭ ವರ್ಷಗಳ ಹಳೆಯ ಸೇತುವೆ: ಕಾವೇರಿ ನಿಸರ್ಗಧಾಮದ ಸೇತುವೆ ೧೯೯೫ ರಲ್ಲಿ ನಿರ್ಮಾಣವಾಗಿದ್ದು, ೨೭ ವರ್ಷಗಳ ಹಳೆಯ ಸೇತುವೆಯಾಗಿದೆ. ಪ್ರವಾಹದಿಂದ ತೂಗು ಸೇತುವೆ ಶಿಥಿಲವಾಗಿದೆ ಎಂದು ತಂತ್ರಜ್ಞರು ಮಾಹಿತಿ ನೀಡಿದ್ದು, ಸೇತುವೆಯು ರೋಬ್ ಹಾಗೂ ಕಬ್ಬಿಣದ ಸಲಕರಣೆಗಳನ್ನು ಬದಲಾಯಿಸುವಂತೆ ತಿಳಿಸಿದ್ದಾರೆ. ತೂಗು ಸೇತುವೆಯ ದುರಸ್ತಿಗೆ ೩೫ ರಿಂದ ೪೦ ಲಕ್ಷ ರೂ.ಗಳ ಅವಶ್ಯಕತೆಯಿದೆ ಎಂದು ಅಂದಾಜಿಸಲಾಗಿದ್ದು, ದುರಸ್ತಿ ಕೆಲಸವನ್ನು ಕರ್ನಾಟಕದ ಆುಂಶಿಲ್ಪಾ ಎಂಬ ಕಂಪೆನಿ ನಡೆಸಲಿದ್ದಾರೆ. ತೂಗು ಸೇತುವೆಯು ರೋಬನ್ನು ಕೊರಿಯಾದಿಂದ ಆಮದು ಮಾಡಿಕೊಳ್ಳಬೇಕಾಗಿದ್ದು, ದುರಸ್ತಿ ಕಾರ್ಯಕ್ಕೆ ಎರಡು ತಿಂಗಳು ಕಾಲಾವಕಾಶ ಬೇಕಾಗಿದೆ ಎಂದು ಹೇಳಲಾಗಿದೆ.

ಪ್ರವಾಸೋದ್ಯಮ ಅವಲಂಬಿತರಲ್ಲಿ ಆತಂಕ: ಕಾವೇರಿ ನಿಸರ್ಗಧಾಮವನ್ನು ದಿಢೀರನೆ ಮುಚ್ಚಿದ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಅವಲಂಬಿತರಲ್ಲಿ ಆತಂಕ ಹೆಚ್ಚಾಗಿದೆ. ಕೊರೊನಾ ಲಾಕ್‌ಡೌನ್, ಪ್ರವಾಹದಿಂದ ನಿಧಾನಗತಿಯಲ್ಲಿ ಪ್ರವಾಸೋದ್ಯಮ ಚೇತರಿಕೆ ಕಾಣುತ್ತಿದೆ. ಇದೀಗ ದಿಢೀರನೆ ಪ್ರಸಿದ್ಧ ಪ್ರವಾಸಿ ತಾಣ ಕಾವೇರಿ ನಿಸರ್ಗಧಾಮವನ್ನು ಮುಚ್ಚಿರುವುದು ಪ್ರವಾಸೋದ್ಯಮ ಅವಲಂಬಿತರಲ್ಲಿ ಹೊಟ್ಟೆಗೆ ಹೊಡೆದಂತಾಗಿದೆ. ಆದ್ದರಿಂದ ತೂಗು ಸೇತುವೆ ದುರಸ್ತಿ ಕಾಮಗಾರಿಯನ್ನು ಬೇಗನೇ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿರುವ ಪ್ರವಾಸೋದ್ಯಮ ಅವಲಂಬಿತರು, ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳದೆ, ಪ್ರವಾಸಿಗರ ಹಿತದೃಷ್ಟಿ ಎಂದು ಸಬೂಬು ಹೇಳಿ ಕಾವೇರಿ ನಿಸರ್ಗಧಾಮವನ್ನು ಮುಚ್ಚಿರುವುದು ಸರಿಯಲ್ಲ ಎಂದು ಅಸವಾಧಾನ ವ್ಯಕ್ತ ಪಡಿಸಿದ್ದಾರೆ.

ದಿನಕ್ಕೆ ಒಂದು ಲಕ್ಷಕ್ಕೂ ಅಧಿಕ ಆದಾಯ: ಕಾವೇರಿ ನಿಸರ್ಗಧಾಮದ ಆದಾಯ, ಪ್ರತಿದಿನ ಸರಾಸರಿ ಒಂದು ಲಕ್ಷಕ್ಕೂ ಅಧಿಕವಿದೆ. ಇಷ್ಟೊಂದು ಆದಾಯ ಗಳಿಸುವ ಕಾವೇರಿ ನಿಸರ್ಗಧಾಮದಲ್ಲಿ ಪರ್ಯಾಯ ಸೇತುವೆ ವ್ಯವಸ್ಥೆ ಇಲ್ಲದಿರುವುದು ವಿಪರ್ಯಾಸ. ಅರಣ್ಯ ಇಲಾಖೆಯ ಅಧಿಕಾರಿಗಳು ಯಾವುದೇ ಮುಂದಾಲೋಚನೆ ಹಾಗೂ ದೂರದೃಷ್ಟಿಯಿಲ್ಲದೆ ಕಾರ್ಯನಿರ್ವಹಿಸುತ್ತಿರುವುದರಿಂದ ಇಂದು ಕಾವೇರಿ ನಿಸರ್ಗಧಾಮವನ್ನು ಮುಚ್ಚುವ ಪರಿಸ್ಥಿತಿ ಒದಗಿಬಂದಿದೆ. ಹಳೆಯ ಸೇತುವೆಯನ್ನು ದುರಸ್ತಿ ಮಾಡುವುದರ ಜೊತೆಗೆ ಪರ್ಯಾ ಸೇತುವೆಯೊಂದನ್ನು ನಿರ್ಮಿಸಬೇಕು ಎಂದು ಕುಶಾಲನಗರದ ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.

ಕಾವೇರಿ ನಿಸರ್ಗಧಾಮವನ್ನು ಅವಲಂಬಿಸಿ ಸುವಾರು ೩೦೦ಕ್ಕೂ ಹೆಚ್ಚು ಕುಟುಂಬಗಳು ಜೀವಿಸುತ್ತಿದ್ದಾರೆ. ಆಟೋ ಚಾಲಕರು, ಕಾರು ಚಾಲಕರು ಪ್ರವಾಸಿಗರನ್ನು ಅವಲಂಭಿಸಿದ್ದಾರೆ. ಈಗ ದಿಢೀರನೆ ಕಾವೇರಿ ನಿಸರ್ಗಧಾಮವನ್ನು ಮುಚ್ಚಿರುವುದು ಅವರ ಹೊಟ್ಟೆ ಮೇಲೆ ಹೊಡೆದಂತಾಗಿದೆ. ೨೭ ವರ್ಷ ಹಳೆದ ಸೇತುವೆ ಬಳಕೆಗೆ ಯೋಗ್ಯವಿಲ್ಲ ಎಂದು ತಂತ್ರಜ್ಞರು ಪರಿಶೀಲನೆ ನಡೆಸಿ ಹೇಳುವ ಅವಶ್ಯಕತೆ ಇಲ್ಲ. – ಜಕ್ರಿಯಾ, ಎಸ್‌ಡಿಪಿಐ ಅಧ್ಯಕ್ಷರು, ಕುಶಾಲನಗರ.

ಕಾವೇರಿ ನಿಸರ್ಗಧಾಮವನ್ನು ಮುಚ್ಚಿರುವುದರಿಂದ ಆಟೋ ಹಾಗೂ ಕಾರು ಚಾಲಕರ ಹೊಟ್ಟೆಗೆ ಹೊಡೆದಂತಾಗಿದೆ. ಆದಷ್ಟು ಬೇಗನೇ ದುರಸ್ತಿ ಕಾರ್ಯ ಮುಗಿಸುವುದರ ಜೊತೆಗೆ ಪರ್ಯಾಯ ವ್ಯವಸ್ಥೆಯನ್ನು ಒದಗಿಸಿಕೊಡಬೇಕು. ೨೭ ವರ್ಷಗಳ ಹಳೆಯದಾದ ಸೇತುವೆಯಾಗಿದೆ. ಈವರೆಗೆ ಪರ್ಯಾಯ ಸೇತುವೆ ನಿರ್ಮಿಸದಿರುವುದು ವಿಪರ್ಯಾಸ. – ನರಸಿಂಹ, ಆಟೋ ಚಾಲಕ, ಕುಶಾಲನಗರ.

 

 

andolana

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

2 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

15 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

15 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

17 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

17 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

21 hours ago