ಜಿಲ್ಲೆಗಳು

ತಂತ್ರಜ್ಞಾನ ಅಪ್ಪಿಕೊಂಡು ಪರಿಸರ-ನಿಸರ್ಗವನ್ನು ಉಳಿಸಬೇಕಿದೆ: ಕಾರಂತ

ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ನಡೆದ ೧೪ನೇ ಪದವೀಧರರ ದಿನಾಚರಣೆಯಲ್ಲಿ ಭಾಗಿ

ಮೈಸೂರು: ಬದಲಾದ ಕಾಲಘಟ್ಟದಲ್ಲಿ ತಂತ್ರಜ್ಞಾನಕ್ಕೆ ಹೆದರದೆ,ಬೆದರದೆ ಅಪ್ಪಿಕೊಂಡು ಅಭಿವೃದ್ಧಿಯ ಜೊತೆಗೆ ಪರಿಸರ-ನಿಸರ್ಗವನ್ನು ಉಳಿಸಿಕೊಳ್ಳಬೇಕು. ಸಸ್ಟೇನಬಲ್ ಲ್ಯಾಂಡ್ ಸ್ಕೇಪ್, ಎಕೋ ಮಾಡೆಲ್‌ನಿಂದ ಅರಣ್ಯ,ವನ್ಯಜೀವಿಗಳನ್ನು ಸಂರಕ್ಷಣೆ ಮಾಡಬಹುದು ಎಂದು ಖ್ಯಾತ ವನ್ಯಜೀವಿ ತಜ್ಞ ಡಾ.ಕೆ.ಉಲ್ಲಾಸ ಕಾರಂತ ಹೇಳಿದರು.

ನಗರದ ಸರಸ್ವತಿಪುರಂ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ೧೪ನೇ ಪದವೀಧರರ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ನಿಸರ್ಗ,ವನ್ಯದ ರಕ್ಷಣೆ ಮಾಡಬೇಕು, ಪರಿಸರ ಸಂರಕ್ಷಿಸದಿದ್ದರೆ ಜಗತ್ತಿಗೆ ಅಪಾಯವಿದೆ ಎನ್ನುವ ಕಾಳಜಿಯ ಮಾತುಗಳನ್ನಾಡುತ್ತಾರೆ. ಆದರೆ, ನಿಸರ್ಗಕ್ಕೆ ಒಂದು ಭಾಗದ ಕಾಳಜಿಯನ್ನು ತೋರಿದರೆ ಸಾಲದು. ಇದರಿಂದ ಪ್ರಾಣಿಗಳು,ವನ್ಯಸಂಪತ್ತುಗಳು ಬದುಕಲಿಕ್ಕೆ ಸಾಧ್ಯವಿಲ್ಲ ಎನ್ನುವುದನ್ನು ಮನಗಾಣಬೇಕು ಎಂದರು.

ನಿಸರ್ಗದಿಂದ ನಾವು ಸವಲತ್ತು,ಸೌಲಭ್ಯಗಳನ್ನು ಪಡೆದಂತೆ ನಾವು ಅವುಗಳನ್ನು ರಕ್ಷಿಸುವ ಕೆಲಸ ಮಾಡಬೇಕು ಎಂದರು. ವನ್ಯಜೀವಿ, ಜೀವತಾಣದ ರಕ್ಷಣೆ ಬಗ್ಗೆ ಎಲ್ಲರೂ ಮಾತನಾಡುತ್ತಾರೆ. ನಮಗೆ ಬದುಕುವ ಹಕ್ಕು ಇರುವಂತೆ ಸಕಲ ಜೀವರಾಶಿಗಳಿಗೂ ಬದುಕುವ ಹಕ್ಕಿದೆ ಎಂಬ ಮನಸ್ಥಿತಿ ಬರಬೇಕು. ಹಿಂದೂ ಧರ್ಮದಲ್ಲಿ ನಮ್ಮಂತೆ ಇತರರೂ ಬದುಕಬೇಕು ಎನ್ನುವುದು ಇದೆ. ಹಿಂದೂಧರ್ಮದಲ್ಲಾಗಲೀ,ಬೌದ್ಧ ಧರ್ಮದಲ್ಲಾಗಲೀ ಇದೆ. ಆದರೆ ಕೆಲವು ದೇಶಗಳಲ್ಲಿ ನಾವು ಮಾತ್ರ ಬದುಕಿನ ಹಕ್ಕು ಹೊಂದಿದ್ದೇವೆಂದು ಹೇಳುತ್ತಾರೆ. ಧಾರ್ಮಿಕ ನಂಬಿಕೆಯಲ್ಲೂ ಅಳವಾಗಿ ಬೇರೂರಿರುವುದರಿಂದ ನಮ್ಮ ಬಳಕೆಗೆ ಜೊತೆಗೆ ವನ್ಯಜೀವಿಗಳಿಗೂ ಬದುಕುವ ಹಕ್ಕು ಇದೆ ಎಂದು ನುಡಿದರು. ಹಲವು ದಶಕಗಳ ಹಿಂದೆ ಕಳ್ಳಬೇಟೆಯಾಡುವುದು, ಪ್ರಾಣಿಗಳನ್ನು ಬೇಟೆಯಾಡಲಾಗುತ್ತಿತ್ತು. ಆದರೆ,ಕಾಲ ಕ್ರಮೇಣ ಅದು ನಿಂತಿದೆ.೧೯೭೦ರ ಅವಧಿಯಲ್ಲಿ ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಅವರು ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ತಂದರು.೧೯೮೦ರ ಅವಧಿಯಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆಯನ್ನುತರಲಾಯಿತು. ಈ ಕಾಯ್ದೆ ತರುವಾಗ ಸಾಕಷ್ಟು ವಿರೋಧ ಬಂದರೂ ತಮ್ಮ ಜನಪ್ರಿಯತೆಯ ಮುಂದೆ ಅದನ್ನು ದಕ್ಕಿಸಿಕೊಂಡರು. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜುಟ್ಟು ಹಿಡಿದು ಅನುಷ್ಠಾನಕ್ಕೆ ತಂದ ದೊಡ್ಡ ಗಟ್ಟಿಗಿತ್ತಿ.ಅದೇ ರೀತಿ ಅಧಿಕಾರಿಗಳು,ರೇಂಜರ್‌ಗಳು,ಗಾರ್ಡ್‌ಗಳು ಬದ್ಧತೆಯಿಂದ ಕೆಲಸ ಮಾಡುತ್ತಿದ್ದರಿಂದ ಕಟ್ಟುನಿಟ್ಟಾಗಿ ಅನುಷ್ಠಾನಗೊಂಡಿತು ಎಂದು ಅಭಿಪ್ರಾಯಪಟ್ಟರು. ಕೆಲವರು ನಾವು ಈಗ ಮಾಡಿದ್ದೇವೆಂದು ಬೀಗಿಕೊಳ್ಳುತ್ತಿದ್ದಾರೆ. ೧೯೭೦ರಿಂದ ೨೦೦೦ರವರೆಗೆ ನಡೆದಿರುವ ಅರಣ್ಯ ಸಂರಕ್ಷಣೆ ಕಾರ್ಯ ನಂತರದಲ್ಲಿ ನಡೆಯಲಿಲ್ಲ.ಇದರಲ್ಲಿ ಎಲ್ಲರ ಪಾಲು ಇದ್ದರೂ ಇಂದಿರಾಗಾಂಧಿ ಅವರು ಅರಣ್ಯ ಸಂರಕ್ಷಣಾ ಕಾಯ್ದೆಯನ್ನು ತಂದಿದ್ದನ್ನು ಸದಾ ನೆನಪಿಸಿಕೊಳ್ಳಬೇಕು ಎಂದರು.

andolana

Recent Posts

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

9 hours ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

9 hours ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

10 hours ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

10 hours ago

ಇವಿ ಹಬ್ ಆಗಿ ಕರ್ನಾಟಕ ರೂಪಾಂತರ ; ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…

10 hours ago

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

11 hours ago