ಜಿಲ್ಲೆಗಳು

ತಂತ್ರಜ್ಞಾನ ಅಪ್ಪಿಕೊಂಡು ಪರಿಸರ-ನಿಸರ್ಗವನ್ನು ಉಳಿಸಬೇಕಿದೆ: ಕಾರಂತ

ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ನಡೆದ ೧೪ನೇ ಪದವೀಧರರ ದಿನಾಚರಣೆಯಲ್ಲಿ ಭಾಗಿ

ಮೈಸೂರು: ಬದಲಾದ ಕಾಲಘಟ್ಟದಲ್ಲಿ ತಂತ್ರಜ್ಞಾನಕ್ಕೆ ಹೆದರದೆ,ಬೆದರದೆ ಅಪ್ಪಿಕೊಂಡು ಅಭಿವೃದ್ಧಿಯ ಜೊತೆಗೆ ಪರಿಸರ-ನಿಸರ್ಗವನ್ನು ಉಳಿಸಿಕೊಳ್ಳಬೇಕು. ಸಸ್ಟೇನಬಲ್ ಲ್ಯಾಂಡ್ ಸ್ಕೇಪ್, ಎಕೋ ಮಾಡೆಲ್‌ನಿಂದ ಅರಣ್ಯ,ವನ್ಯಜೀವಿಗಳನ್ನು ಸಂರಕ್ಷಣೆ ಮಾಡಬಹುದು ಎಂದು ಖ್ಯಾತ ವನ್ಯಜೀವಿ ತಜ್ಞ ಡಾ.ಕೆ.ಉಲ್ಲಾಸ ಕಾರಂತ ಹೇಳಿದರು.

ನಗರದ ಸರಸ್ವತಿಪುರಂ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ೧೪ನೇ ಪದವೀಧರರ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ನಿಸರ್ಗ,ವನ್ಯದ ರಕ್ಷಣೆ ಮಾಡಬೇಕು, ಪರಿಸರ ಸಂರಕ್ಷಿಸದಿದ್ದರೆ ಜಗತ್ತಿಗೆ ಅಪಾಯವಿದೆ ಎನ್ನುವ ಕಾಳಜಿಯ ಮಾತುಗಳನ್ನಾಡುತ್ತಾರೆ. ಆದರೆ, ನಿಸರ್ಗಕ್ಕೆ ಒಂದು ಭಾಗದ ಕಾಳಜಿಯನ್ನು ತೋರಿದರೆ ಸಾಲದು. ಇದರಿಂದ ಪ್ರಾಣಿಗಳು,ವನ್ಯಸಂಪತ್ತುಗಳು ಬದುಕಲಿಕ್ಕೆ ಸಾಧ್ಯವಿಲ್ಲ ಎನ್ನುವುದನ್ನು ಮನಗಾಣಬೇಕು ಎಂದರು.

ನಿಸರ್ಗದಿಂದ ನಾವು ಸವಲತ್ತು,ಸೌಲಭ್ಯಗಳನ್ನು ಪಡೆದಂತೆ ನಾವು ಅವುಗಳನ್ನು ರಕ್ಷಿಸುವ ಕೆಲಸ ಮಾಡಬೇಕು ಎಂದರು. ವನ್ಯಜೀವಿ, ಜೀವತಾಣದ ರಕ್ಷಣೆ ಬಗ್ಗೆ ಎಲ್ಲರೂ ಮಾತನಾಡುತ್ತಾರೆ. ನಮಗೆ ಬದುಕುವ ಹಕ್ಕು ಇರುವಂತೆ ಸಕಲ ಜೀವರಾಶಿಗಳಿಗೂ ಬದುಕುವ ಹಕ್ಕಿದೆ ಎಂಬ ಮನಸ್ಥಿತಿ ಬರಬೇಕು. ಹಿಂದೂ ಧರ್ಮದಲ್ಲಿ ನಮ್ಮಂತೆ ಇತರರೂ ಬದುಕಬೇಕು ಎನ್ನುವುದು ಇದೆ. ಹಿಂದೂಧರ್ಮದಲ್ಲಾಗಲೀ,ಬೌದ್ಧ ಧರ್ಮದಲ್ಲಾಗಲೀ ಇದೆ. ಆದರೆ ಕೆಲವು ದೇಶಗಳಲ್ಲಿ ನಾವು ಮಾತ್ರ ಬದುಕಿನ ಹಕ್ಕು ಹೊಂದಿದ್ದೇವೆಂದು ಹೇಳುತ್ತಾರೆ. ಧಾರ್ಮಿಕ ನಂಬಿಕೆಯಲ್ಲೂ ಅಳವಾಗಿ ಬೇರೂರಿರುವುದರಿಂದ ನಮ್ಮ ಬಳಕೆಗೆ ಜೊತೆಗೆ ವನ್ಯಜೀವಿಗಳಿಗೂ ಬದುಕುವ ಹಕ್ಕು ಇದೆ ಎಂದು ನುಡಿದರು. ಹಲವು ದಶಕಗಳ ಹಿಂದೆ ಕಳ್ಳಬೇಟೆಯಾಡುವುದು, ಪ್ರಾಣಿಗಳನ್ನು ಬೇಟೆಯಾಡಲಾಗುತ್ತಿತ್ತು. ಆದರೆ,ಕಾಲ ಕ್ರಮೇಣ ಅದು ನಿಂತಿದೆ.೧೯೭೦ರ ಅವಧಿಯಲ್ಲಿ ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಅವರು ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ತಂದರು.೧೯೮೦ರ ಅವಧಿಯಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆಯನ್ನುತರಲಾಯಿತು. ಈ ಕಾಯ್ದೆ ತರುವಾಗ ಸಾಕಷ್ಟು ವಿರೋಧ ಬಂದರೂ ತಮ್ಮ ಜನಪ್ರಿಯತೆಯ ಮುಂದೆ ಅದನ್ನು ದಕ್ಕಿಸಿಕೊಂಡರು. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜುಟ್ಟು ಹಿಡಿದು ಅನುಷ್ಠಾನಕ್ಕೆ ತಂದ ದೊಡ್ಡ ಗಟ್ಟಿಗಿತ್ತಿ.ಅದೇ ರೀತಿ ಅಧಿಕಾರಿಗಳು,ರೇಂಜರ್‌ಗಳು,ಗಾರ್ಡ್‌ಗಳು ಬದ್ಧತೆಯಿಂದ ಕೆಲಸ ಮಾಡುತ್ತಿದ್ದರಿಂದ ಕಟ್ಟುನಿಟ್ಟಾಗಿ ಅನುಷ್ಠಾನಗೊಂಡಿತು ಎಂದು ಅಭಿಪ್ರಾಯಪಟ್ಟರು. ಕೆಲವರು ನಾವು ಈಗ ಮಾಡಿದ್ದೇವೆಂದು ಬೀಗಿಕೊಳ್ಳುತ್ತಿದ್ದಾರೆ. ೧೯೭೦ರಿಂದ ೨೦೦೦ರವರೆಗೆ ನಡೆದಿರುವ ಅರಣ್ಯ ಸಂರಕ್ಷಣೆ ಕಾರ್ಯ ನಂತರದಲ್ಲಿ ನಡೆಯಲಿಲ್ಲ.ಇದರಲ್ಲಿ ಎಲ್ಲರ ಪಾಲು ಇದ್ದರೂ ಇಂದಿರಾಗಾಂಧಿ ಅವರು ಅರಣ್ಯ ಸಂರಕ್ಷಣಾ ಕಾಯ್ದೆಯನ್ನು ತಂದಿದ್ದನ್ನು ಸದಾ ನೆನಪಿಸಿಕೊಳ್ಳಬೇಕು ಎಂದರು.

andolana

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

40 mins ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

44 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

51 mins ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

57 mins ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

1 hour ago