ಜಿಲ್ಲೆಗಳು

ಹೆಚ್‌ಡಿ ಕೋಟೆ: ಮರಗಳ ಹನನ ನಡೆದ ಸ್ಥಳಕ್ಕೆ ಪರಿಸರವಾದಿ ಭಾನುಮೋಹನ್ ಭೇಟಿ, ಪರಿಶೀಲನೆ

ಹೆಚ್.ಡಿ.ಕೋಟೆ: ಸಮೀಪದ ಮುಳ್ಳೂರು ಗ್ರಾಮದಲ್ಲಿರುವ ಸುಮಾರು 800 ವರ್ಷಗಳ ಇತಿಹಾಸವಿರುವ ಲಕ್ಷ್ಮೀ ಕಾಂತಸ್ವಾಮಿ ದೇವಾಲಯದ ಆವರಣದಲ್ಲಿದ್ದ ಅನೇಕ ಮರಗಳನ್ನು ಹನನ ಮಾಡಿರುವ ಸ್ಥಳಕ್ಕೆ ಖ್ಯಾತ ಪರಿಸರವಾದಿ ಭಾನುಮೋಹನ್ ಭೇಟಿ ನೀಡಿ ಪರಿಶೀಲಿಸಿದರು.

ದೇವಾಲಯದಲ್ಲಿ ಗಾರ್ಡನ್ ಕೆಲಸಕ್ಕೆ‌ ಪುರಾತತ್ವ ಇಲಾಖೆಯಿಂದ ನೇಮಕಗೊಂಡಿರುವ ಗೋಪಾಲಸ್ವಾಮಿ ಅರಣ್ಯ, ಪುರಾತ್ವ ಇಲಾಖೆ, ಸ್ಥಳೀಯ ಗ್ರಾಮಪಂಚಾಯ್ತಿಗೂ ಮಾಹಿತಿ ನೀಡದೇ ಕಳೆದವಾರ ಅಕ್ರಮವಾಗಿ
ಮರಗಳನ್ನು ಕಡಿದು ಸಾಗಿಸುವ ವೇಳೆ ಗ್ರಾಮಸ್ಥರಿಗೆ ಸಿಕ್ಕಿಬಿದ್ದಿದ್ದ.

ಗ್ರಾಮಸ್ಥರೆಲ್ಲರೂ ಒಗ್ಗೂಡಿ ಅರಣ್ಯ ಇಲಾಖೆಗೆ ದೂರು ನೀಡಿದ ನಂತರ ಪ್ರಕರಣ ದಾಖಲಾಗಿರುವುದಷ್ಟೇ ಬಿಟ್ಟರೇ ಮುಂದಿನ ಕ್ರಮ ಕೈಗೊಂಡಿಲ್ಲ, ಈ ಬಗ್ಗೆ ಅರಣ್ಯ ಇಲಾಖೆಯಾಗಲಿ, ಬೆಂಗಳೂರಿನ‌ ಪುರಾತತ್ವ ಇಲಾಖೆಯ ಅಧಿಕಾರಿಗಳಿಗೆ ಗ್ರಾಮಸ್ಥರು ಖುದ್ದು ಭೇಟಿ ನೀಡಿ, ದೂರು ನೀಡಿದರೂ ಸಹ ತಪ್ಪಿತಸ್ಥನ ವಿರುದ್ಧ ಇಲಾಖೆಗಳು ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ. ಇದೇ ತಪ್ಪನ್ನು ಸಾರ್ವಜನಿಕರು ಮಾಡಿದ್ದರೆ ಅಧಿಕಾರಿಗಳು ಕ್ಷಣಾರ್ಧದಲ್ಲಿ ಬಂಧಿಸುತ್ತಿದ್ದರು. ಈ ಎಲ್ಲ ಅಂಶಗಳನ್ನು ಗಮನಿಸಿದರೆ ಈ 2 ಇಲಾಖೆಗಳೇ ಆತನನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅನುಮಾನ ಮೂಡುತ್ತಿದೆ ಎಂದು ಅವಲತ್ತುಕೊಂಡರು.

ಕೇಂದ್ರ ಸರ್ಕಾರಿ ನೌಕರರು ಪ್ರತಿ 5 ವರ್ಷಗಳಿಗೊಮ್ಮೆ ವರ್ಗಾವಣೆಯಾಗಬೇಕೆಂಬ ನಿಯಮವಿದ್ದರೂ ಸಹ ಗೋಪಾಲಸ್ವಾಮಿ ಕಳೆದ 15 ವರ್ಷಗಳಿಂದಲೂ ನಮ್ಮೂರಿನಲ್ಲೇ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ದೇವಾಲಯದಲ್ಲಿರುವ ನಿಧಿ, ನಿಕ್ಷೇಪಗಳ ಜತೆಗೆ, ಈ‌ ಹಿಂದೆ ಶ್ರೀಗಂಧ, ಸಾಗುವಾನೆ ಮರಗಳನ್ನು ಕಡಿದು, ಕಳ್ಳತನ ಮಾಡಿರಬಹುದು ಆದ್ದರಿಂದ ಈತನನ್ನು ಈ ಕೂಡಲೆ ಬಂಧಿಸಿ, ವಿಚಾರಣೆಗೊಳಪಡಿಸಿದರೆ ಇನ್ನಷ್ಟು ಸತ್ಯ ಹೊರಬರುತ್ತದೆ ಎಂದು ತಿಳಿಸಿದರು.

ಪರಿಸರವಾದಿ ಭಾನುಮೋಹನ್ ಮಾತನಾಡಿ, ಉಸಿರಾಡಲು ಪ್ರತಿಯೊಬ್ಬರಿಗೂ ಮರಗಳ ಅವಶ್ಯಕತೆಯಿದೆ, ಮರಗಳನ್ನೇ ಬೆಳೆಸದಿರುವ ಪ್ರಸ್ತುತ ದಿನಗಳಲ್ಲಿ ಪರಿಸರ ಉಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿರುವುದರ ಜತಗೆ ಮುಂದಿನ ಪೀಳಿಗೆಗೆ ಅವಶ್ಯವಿರುವುದರಿಂದ ಪರಿಸರವನನ್ನು ಸಂರಕ್ಷಿಸುವ ಹೊಣೆ ನಮ್ಮೆಲ್ಲರ ಮೇಲಿದೆ. ಈ ಕೃತ್ಯ ಎಸಗಿರುವವರು ಯಾರೇ ಆಗಿದ್ದರೂ ಅವರ ವಿರುದ್ಧ ಇಲಾಖೆ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲದಿದ್ದರೆ ಸಂಬಂಧಿಸಿದ ಇಲಾಖೆಗಳ ವಿರುದ್ಧ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಗ್ರಾಮದ ಮುಖಂಡರಾದ ಸಿದ್ದನಾಯಕ, ಮಹೇಶ್, ಚಿನ್ನಸ್ವಾಮಿ, ಗೋವಿಂದನಾಯಕ ಸೇರಿದಂತೆ ಅನೇಕರಿದ್ದರು

andolana

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

52 mins ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

54 mins ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

56 mins ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

58 mins ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

1 hour ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

1 hour ago