ಜಿಲ್ಲೆಗಳು

ಹೆಚ್‌ಡಿ ಕೋಟೆ: ಮರಗಳ ಹನನ ನಡೆದ ಸ್ಥಳಕ್ಕೆ ಪರಿಸರವಾದಿ ಭಾನುಮೋಹನ್ ಭೇಟಿ, ಪರಿಶೀಲನೆ

ಹೆಚ್.ಡಿ.ಕೋಟೆ: ಸಮೀಪದ ಮುಳ್ಳೂರು ಗ್ರಾಮದಲ್ಲಿರುವ ಸುಮಾರು 800 ವರ್ಷಗಳ ಇತಿಹಾಸವಿರುವ ಲಕ್ಷ್ಮೀ ಕಾಂತಸ್ವಾಮಿ ದೇವಾಲಯದ ಆವರಣದಲ್ಲಿದ್ದ ಅನೇಕ ಮರಗಳನ್ನು ಹನನ ಮಾಡಿರುವ ಸ್ಥಳಕ್ಕೆ ಖ್ಯಾತ ಪರಿಸರವಾದಿ ಭಾನುಮೋಹನ್ ಭೇಟಿ ನೀಡಿ ಪರಿಶೀಲಿಸಿದರು.

ದೇವಾಲಯದಲ್ಲಿ ಗಾರ್ಡನ್ ಕೆಲಸಕ್ಕೆ‌ ಪುರಾತತ್ವ ಇಲಾಖೆಯಿಂದ ನೇಮಕಗೊಂಡಿರುವ ಗೋಪಾಲಸ್ವಾಮಿ ಅರಣ್ಯ, ಪುರಾತ್ವ ಇಲಾಖೆ, ಸ್ಥಳೀಯ ಗ್ರಾಮಪಂಚಾಯ್ತಿಗೂ ಮಾಹಿತಿ ನೀಡದೇ ಕಳೆದವಾರ ಅಕ್ರಮವಾಗಿ
ಮರಗಳನ್ನು ಕಡಿದು ಸಾಗಿಸುವ ವೇಳೆ ಗ್ರಾಮಸ್ಥರಿಗೆ ಸಿಕ್ಕಿಬಿದ್ದಿದ್ದ.

ಗ್ರಾಮಸ್ಥರೆಲ್ಲರೂ ಒಗ್ಗೂಡಿ ಅರಣ್ಯ ಇಲಾಖೆಗೆ ದೂರು ನೀಡಿದ ನಂತರ ಪ್ರಕರಣ ದಾಖಲಾಗಿರುವುದಷ್ಟೇ ಬಿಟ್ಟರೇ ಮುಂದಿನ ಕ್ರಮ ಕೈಗೊಂಡಿಲ್ಲ, ಈ ಬಗ್ಗೆ ಅರಣ್ಯ ಇಲಾಖೆಯಾಗಲಿ, ಬೆಂಗಳೂರಿನ‌ ಪುರಾತತ್ವ ಇಲಾಖೆಯ ಅಧಿಕಾರಿಗಳಿಗೆ ಗ್ರಾಮಸ್ಥರು ಖುದ್ದು ಭೇಟಿ ನೀಡಿ, ದೂರು ನೀಡಿದರೂ ಸಹ ತಪ್ಪಿತಸ್ಥನ ವಿರುದ್ಧ ಇಲಾಖೆಗಳು ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ. ಇದೇ ತಪ್ಪನ್ನು ಸಾರ್ವಜನಿಕರು ಮಾಡಿದ್ದರೆ ಅಧಿಕಾರಿಗಳು ಕ್ಷಣಾರ್ಧದಲ್ಲಿ ಬಂಧಿಸುತ್ತಿದ್ದರು. ಈ ಎಲ್ಲ ಅಂಶಗಳನ್ನು ಗಮನಿಸಿದರೆ ಈ 2 ಇಲಾಖೆಗಳೇ ಆತನನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅನುಮಾನ ಮೂಡುತ್ತಿದೆ ಎಂದು ಅವಲತ್ತುಕೊಂಡರು.

ಕೇಂದ್ರ ಸರ್ಕಾರಿ ನೌಕರರು ಪ್ರತಿ 5 ವರ್ಷಗಳಿಗೊಮ್ಮೆ ವರ್ಗಾವಣೆಯಾಗಬೇಕೆಂಬ ನಿಯಮವಿದ್ದರೂ ಸಹ ಗೋಪಾಲಸ್ವಾಮಿ ಕಳೆದ 15 ವರ್ಷಗಳಿಂದಲೂ ನಮ್ಮೂರಿನಲ್ಲೇ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ದೇವಾಲಯದಲ್ಲಿರುವ ನಿಧಿ, ನಿಕ್ಷೇಪಗಳ ಜತೆಗೆ, ಈ‌ ಹಿಂದೆ ಶ್ರೀಗಂಧ, ಸಾಗುವಾನೆ ಮರಗಳನ್ನು ಕಡಿದು, ಕಳ್ಳತನ ಮಾಡಿರಬಹುದು ಆದ್ದರಿಂದ ಈತನನ್ನು ಈ ಕೂಡಲೆ ಬಂಧಿಸಿ, ವಿಚಾರಣೆಗೊಳಪಡಿಸಿದರೆ ಇನ್ನಷ್ಟು ಸತ್ಯ ಹೊರಬರುತ್ತದೆ ಎಂದು ತಿಳಿಸಿದರು.

ಪರಿಸರವಾದಿ ಭಾನುಮೋಹನ್ ಮಾತನಾಡಿ, ಉಸಿರಾಡಲು ಪ್ರತಿಯೊಬ್ಬರಿಗೂ ಮರಗಳ ಅವಶ್ಯಕತೆಯಿದೆ, ಮರಗಳನ್ನೇ ಬೆಳೆಸದಿರುವ ಪ್ರಸ್ತುತ ದಿನಗಳಲ್ಲಿ ಪರಿಸರ ಉಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿರುವುದರ ಜತಗೆ ಮುಂದಿನ ಪೀಳಿಗೆಗೆ ಅವಶ್ಯವಿರುವುದರಿಂದ ಪರಿಸರವನನ್ನು ಸಂರಕ್ಷಿಸುವ ಹೊಣೆ ನಮ್ಮೆಲ್ಲರ ಮೇಲಿದೆ. ಈ ಕೃತ್ಯ ಎಸಗಿರುವವರು ಯಾರೇ ಆಗಿದ್ದರೂ ಅವರ ವಿರುದ್ಧ ಇಲಾಖೆ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲದಿದ್ದರೆ ಸಂಬಂಧಿಸಿದ ಇಲಾಖೆಗಳ ವಿರುದ್ಧ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಗ್ರಾಮದ ಮುಖಂಡರಾದ ಸಿದ್ದನಾಯಕ, ಮಹೇಶ್, ಚಿನ್ನಸ್ವಾಮಿ, ಗೋವಿಂದನಾಯಕ ಸೇರಿದಂತೆ ಅನೇಕರಿದ್ದರು

andolana

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

1 hour ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

10 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

10 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

10 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

12 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago