ಜಿಲ್ಲೆಗಳು

ಹೆಚ್‌ಡಿ ಕೋಟೆ: ಮರಗಳ ಹನನ ನಡೆದ ಸ್ಥಳಕ್ಕೆ ಪರಿಸರವಾದಿ ಭಾನುಮೋಹನ್ ಭೇಟಿ, ಪರಿಶೀಲನೆ

ಹೆಚ್.ಡಿ.ಕೋಟೆ: ಸಮೀಪದ ಮುಳ್ಳೂರು ಗ್ರಾಮದಲ್ಲಿರುವ ಸುಮಾರು 800 ವರ್ಷಗಳ ಇತಿಹಾಸವಿರುವ ಲಕ್ಷ್ಮೀ ಕಾಂತಸ್ವಾಮಿ ದೇವಾಲಯದ ಆವರಣದಲ್ಲಿದ್ದ ಅನೇಕ ಮರಗಳನ್ನು ಹನನ ಮಾಡಿರುವ ಸ್ಥಳಕ್ಕೆ ಖ್ಯಾತ ಪರಿಸರವಾದಿ ಭಾನುಮೋಹನ್ ಭೇಟಿ ನೀಡಿ ಪರಿಶೀಲಿಸಿದರು.

ದೇವಾಲಯದಲ್ಲಿ ಗಾರ್ಡನ್ ಕೆಲಸಕ್ಕೆ‌ ಪುರಾತತ್ವ ಇಲಾಖೆಯಿಂದ ನೇಮಕಗೊಂಡಿರುವ ಗೋಪಾಲಸ್ವಾಮಿ ಅರಣ್ಯ, ಪುರಾತ್ವ ಇಲಾಖೆ, ಸ್ಥಳೀಯ ಗ್ರಾಮಪಂಚಾಯ್ತಿಗೂ ಮಾಹಿತಿ ನೀಡದೇ ಕಳೆದವಾರ ಅಕ್ರಮವಾಗಿ
ಮರಗಳನ್ನು ಕಡಿದು ಸಾಗಿಸುವ ವೇಳೆ ಗ್ರಾಮಸ್ಥರಿಗೆ ಸಿಕ್ಕಿಬಿದ್ದಿದ್ದ.

ಗ್ರಾಮಸ್ಥರೆಲ್ಲರೂ ಒಗ್ಗೂಡಿ ಅರಣ್ಯ ಇಲಾಖೆಗೆ ದೂರು ನೀಡಿದ ನಂತರ ಪ್ರಕರಣ ದಾಖಲಾಗಿರುವುದಷ್ಟೇ ಬಿಟ್ಟರೇ ಮುಂದಿನ ಕ್ರಮ ಕೈಗೊಂಡಿಲ್ಲ, ಈ ಬಗ್ಗೆ ಅರಣ್ಯ ಇಲಾಖೆಯಾಗಲಿ, ಬೆಂಗಳೂರಿನ‌ ಪುರಾತತ್ವ ಇಲಾಖೆಯ ಅಧಿಕಾರಿಗಳಿಗೆ ಗ್ರಾಮಸ್ಥರು ಖುದ್ದು ಭೇಟಿ ನೀಡಿ, ದೂರು ನೀಡಿದರೂ ಸಹ ತಪ್ಪಿತಸ್ಥನ ವಿರುದ್ಧ ಇಲಾಖೆಗಳು ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ. ಇದೇ ತಪ್ಪನ್ನು ಸಾರ್ವಜನಿಕರು ಮಾಡಿದ್ದರೆ ಅಧಿಕಾರಿಗಳು ಕ್ಷಣಾರ್ಧದಲ್ಲಿ ಬಂಧಿಸುತ್ತಿದ್ದರು. ಈ ಎಲ್ಲ ಅಂಶಗಳನ್ನು ಗಮನಿಸಿದರೆ ಈ 2 ಇಲಾಖೆಗಳೇ ಆತನನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅನುಮಾನ ಮೂಡುತ್ತಿದೆ ಎಂದು ಅವಲತ್ತುಕೊಂಡರು.

ಕೇಂದ್ರ ಸರ್ಕಾರಿ ನೌಕರರು ಪ್ರತಿ 5 ವರ್ಷಗಳಿಗೊಮ್ಮೆ ವರ್ಗಾವಣೆಯಾಗಬೇಕೆಂಬ ನಿಯಮವಿದ್ದರೂ ಸಹ ಗೋಪಾಲಸ್ವಾಮಿ ಕಳೆದ 15 ವರ್ಷಗಳಿಂದಲೂ ನಮ್ಮೂರಿನಲ್ಲೇ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ದೇವಾಲಯದಲ್ಲಿರುವ ನಿಧಿ, ನಿಕ್ಷೇಪಗಳ ಜತೆಗೆ, ಈ‌ ಹಿಂದೆ ಶ್ರೀಗಂಧ, ಸಾಗುವಾನೆ ಮರಗಳನ್ನು ಕಡಿದು, ಕಳ್ಳತನ ಮಾಡಿರಬಹುದು ಆದ್ದರಿಂದ ಈತನನ್ನು ಈ ಕೂಡಲೆ ಬಂಧಿಸಿ, ವಿಚಾರಣೆಗೊಳಪಡಿಸಿದರೆ ಇನ್ನಷ್ಟು ಸತ್ಯ ಹೊರಬರುತ್ತದೆ ಎಂದು ತಿಳಿಸಿದರು.

ಪರಿಸರವಾದಿ ಭಾನುಮೋಹನ್ ಮಾತನಾಡಿ, ಉಸಿರಾಡಲು ಪ್ರತಿಯೊಬ್ಬರಿಗೂ ಮರಗಳ ಅವಶ್ಯಕತೆಯಿದೆ, ಮರಗಳನ್ನೇ ಬೆಳೆಸದಿರುವ ಪ್ರಸ್ತುತ ದಿನಗಳಲ್ಲಿ ಪರಿಸರ ಉಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿರುವುದರ ಜತಗೆ ಮುಂದಿನ ಪೀಳಿಗೆಗೆ ಅವಶ್ಯವಿರುವುದರಿಂದ ಪರಿಸರವನನ್ನು ಸಂರಕ್ಷಿಸುವ ಹೊಣೆ ನಮ್ಮೆಲ್ಲರ ಮೇಲಿದೆ. ಈ ಕೃತ್ಯ ಎಸಗಿರುವವರು ಯಾರೇ ಆಗಿದ್ದರೂ ಅವರ ವಿರುದ್ಧ ಇಲಾಖೆ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲದಿದ್ದರೆ ಸಂಬಂಧಿಸಿದ ಇಲಾಖೆಗಳ ವಿರುದ್ಧ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಗ್ರಾಮದ ಮುಖಂಡರಾದ ಸಿದ್ದನಾಯಕ, ಮಹೇಶ್, ಚಿನ್ನಸ್ವಾಮಿ, ಗೋವಿಂದನಾಯಕ ಸೇರಿದಂತೆ ಅನೇಕರಿದ್ದರು

andolana

Recent Posts

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

2 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

2 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

3 hours ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

4 hours ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

5 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

5 hours ago