ಹನೂರು: ಸಾಮಾಜಿಕ ಭದ್ರತೆ ಯೋಜನೆಯ ವಿವಿಧ ಪಿಂಚಣಿ ಸೌಲಭ್ಯಗಳು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಪಿಂಚಣಿ ಆದಾಲತ್ ಕಾರ್ಯಕ್ರಮವನ್ನು ಗ್ರಾಮಗಳಲ್ಲಿಯೇ ಆಯೋಜಿಸಲಾಗುತ್ತಿದೆ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಗ್ರೇಡ್ 2 ತಹಸಿಲ್ದಾರ್ ಧನಂಜಯ್ ಅವರು ತಿಳಿಸಿದರು.
ತಾಲೂಕಿನ ನಾಗನತ್ತ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಪಿಂಚಣಿ ಆದಾಲತ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂಧ್ಯಾ ಸುರಕ್ಷಾ, ವಿಧವಾ ವೇತನ, ವಿಶೇಷ ಚೇತನರ ಪಿಂಚಣಿ ಸೇರಿದಂತೆ ಸಾಮಾಜಿಕ ಭದ್ರತೆ ಯೋಜನೆಯಲ್ಲಿ ಬರುವ ಪಿಂಚಣಿ ಅನುಕೂಲಗಳನ್ನು ಒದಗಿಸಲು ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ತಮ್ಮ ಗ್ರಾಮದಲ್ಲೇ ಬಂದು ಅರ್ಜಿ ಮತ್ತು ಕುಂದು ಕೊರತೆಗಳನ್ನು ಆಲಿಸಲಿದ್ದಾರೆ ಎಂದರು.
ಸೇತುವೆ ನಿರ್ಮಾಣಕ್ಕೆ ಒತ್ತಾಯ: ಪಿಂಚಣಿ ಆದಾಲತ್ ಕಾರ್ಯಕ್ರಮದಲ್ಲಿ ಮಣಗಳ್ಳಿಯಿಂದ ನಾಗನತ್ತ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬರುವ ದೊಡ್ಡಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡುವಂತೆ ಅಧಿಕಾರಿಗಳಲ್ಲಿ ಸಾರ್ವಜನಿಕರು ಮನವಿ ಮಾಡಿದ ಪ್ರಸಂಗ ಜರುಗಿತು.
ದಿನಂಪ್ರತಿ ಈ ರಸ್ತೆಯಲ್ಲಿ ಓಡಾಡುವ ಜನತೆ ಬಿದ್ದು ಈಗಾಗಲೇ ಕೆಲವರು ಗಾಯಗೊಂಡು ಪ್ರಾಣ ಬಿಟ್ಟಿರುವ ಉದಾಹರಣೆಗಳು ಸಹ ಇದೆ. ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೇತುವೆ ನಿರ್ಮಾಣ ಮಾಡುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದರು. ಈ ಹಳ್ಳದಲ್ಲಿ ಸದಾ ನೀರು ಹರಿಯುತ್ತಿರುವುದರಿಂದ ಪಾಚಿ ಕಟ್ಟಿ ಜಾರಿ ಬೀಳುವ ದುಸ್ಥಿತಿ ಇದೆ ಎಂದು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.
ಕಾರ್ಯಕ್ರಮದಲ್ಲಿ ಸಾಮಾಜಿಕ ಭದ್ರತೆ ಯೋಜನೆ ವಿವಿಧ ಪಿಂಚಣಿ ಸೌಲಭ್ಯಗಳಿಗೆ ಅರ್ಜಿ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಆರ್. ಐ. ಮಹದೇವಸ್ವಾಮಿ, ಗ್ರಾಮ ಲೆಕ್ಕಿಗ ವಾಸುದೇವ್, ಸಿಬ್ಬಂದಿಗಳು ಸೇರಿದಂತೆ ಮುಖಂಡರುಗಳಾದ ಮಾದೇವ(ಕೆಂ
ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…
ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…