ಹನೂರು: ಸಾಮಾಜಿಕ ಭದ್ರತೆ ಯೋಜನೆಯ ವಿವಿಧ ಪಿಂಚಣಿ ಸೌಲಭ್ಯಗಳು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಪಿಂಚಣಿ ಆದಾಲತ್ ಕಾರ್ಯಕ್ರಮವನ್ನು ಗ್ರಾಮಗಳಲ್ಲಿಯೇ ಆಯೋಜಿಸಲಾಗುತ್ತಿದೆ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಗ್ರೇಡ್ 2 ತಹಸಿಲ್ದಾರ್ ಧನಂಜಯ್ ಅವರು ತಿಳಿಸಿದರು.
ತಾಲೂಕಿನ ನಾಗನತ್ತ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಪಿಂಚಣಿ ಆದಾಲತ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂಧ್ಯಾ ಸುರಕ್ಷಾ, ವಿಧವಾ ವೇತನ, ವಿಶೇಷ ಚೇತನರ ಪಿಂಚಣಿ ಸೇರಿದಂತೆ ಸಾಮಾಜಿಕ ಭದ್ರತೆ ಯೋಜನೆಯಲ್ಲಿ ಬರುವ ಪಿಂಚಣಿ ಅನುಕೂಲಗಳನ್ನು ಒದಗಿಸಲು ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ತಮ್ಮ ಗ್ರಾಮದಲ್ಲೇ ಬಂದು ಅರ್ಜಿ ಮತ್ತು ಕುಂದು ಕೊರತೆಗಳನ್ನು ಆಲಿಸಲಿದ್ದಾರೆ ಎಂದರು.
ಸೇತುವೆ ನಿರ್ಮಾಣಕ್ಕೆ ಒತ್ತಾಯ: ಪಿಂಚಣಿ ಆದಾಲತ್ ಕಾರ್ಯಕ್ರಮದಲ್ಲಿ ಮಣಗಳ್ಳಿಯಿಂದ ನಾಗನತ್ತ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬರುವ ದೊಡ್ಡಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡುವಂತೆ ಅಧಿಕಾರಿಗಳಲ್ಲಿ ಸಾರ್ವಜನಿಕರು ಮನವಿ ಮಾಡಿದ ಪ್ರಸಂಗ ಜರುಗಿತು.
ದಿನಂಪ್ರತಿ ಈ ರಸ್ತೆಯಲ್ಲಿ ಓಡಾಡುವ ಜನತೆ ಬಿದ್ದು ಈಗಾಗಲೇ ಕೆಲವರು ಗಾಯಗೊಂಡು ಪ್ರಾಣ ಬಿಟ್ಟಿರುವ ಉದಾಹರಣೆಗಳು ಸಹ ಇದೆ. ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೇತುವೆ ನಿರ್ಮಾಣ ಮಾಡುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದರು. ಈ ಹಳ್ಳದಲ್ಲಿ ಸದಾ ನೀರು ಹರಿಯುತ್ತಿರುವುದರಿಂದ ಪಾಚಿ ಕಟ್ಟಿ ಜಾರಿ ಬೀಳುವ ದುಸ್ಥಿತಿ ಇದೆ ಎಂದು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.
ಕಾರ್ಯಕ್ರಮದಲ್ಲಿ ಸಾಮಾಜಿಕ ಭದ್ರತೆ ಯೋಜನೆ ವಿವಿಧ ಪಿಂಚಣಿ ಸೌಲಭ್ಯಗಳಿಗೆ ಅರ್ಜಿ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಆರ್. ಐ. ಮಹದೇವಸ್ವಾಮಿ, ಗ್ರಾಮ ಲೆಕ್ಕಿಗ ವಾಸುದೇವ್, ಸಿಬ್ಬಂದಿಗಳು ಸೇರಿದಂತೆ ಮುಖಂಡರುಗಳಾದ ಮಾದೇವ(ಕೆಂ
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…