ಜಿಲ್ಲೆಗಳು

ಪಿಂಚಣಿ ಅದಾಲತ್‌ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ : ಗ್ರೇಡ್ 2 ತಹಸಿಲ್ದಾರ್ ಧನಂಜಯ್

ಹನೂರು: ಸಾಮಾಜಿಕ ಭದ್ರತೆ ಯೋಜನೆಯ ವಿವಿಧ ಪಿಂಚಣಿ ಸೌಲಭ್ಯಗಳು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಪಿಂಚಣಿ ಆದಾಲತ್ ಕಾರ್ಯಕ್ರಮವನ್ನು ಗ್ರಾಮಗಳಲ್ಲಿಯೇ ಆಯೋಜಿಸಲಾಗುತ್ತಿದೆ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಗ್ರೇಡ್ 2 ತಹಸಿಲ್ದಾರ್ ಧನಂಜಯ್ ಅವರು ತಿಳಿಸಿದರು.

ತಾಲೂಕಿನ ನಾಗನತ್ತ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಪಿಂಚಣಿ ಆದಾಲತ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಧ್ಯಾ ಸುರಕ್ಷಾ, ವಿಧವಾ ವೇತನ, ವಿಶೇಷ ಚೇತನರ ಪಿಂಚಣಿ ಸೇರಿದಂತೆ ಸಾಮಾಜಿಕ ಭದ್ರತೆ ಯೋಜನೆಯಲ್ಲಿ ಬರುವ ಪಿಂಚಣಿ ಅನುಕೂಲಗಳನ್ನು ಒದಗಿಸಲು ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ತಮ್ಮ ಗ್ರಾಮದಲ್ಲೇ ಬಂದು ಅರ್ಜಿ ಮತ್ತು ಕುಂದು ಕೊರತೆಗಳನ್ನು ಆಲಿಸಲಿದ್ದಾರೆ ಎಂದರು.

ಸೇತುವೆ ನಿರ್ಮಾಣಕ್ಕೆ ಒತ್ತಾಯ: ಪಿಂಚಣಿ ಆದಾಲತ್ ಕಾರ್ಯಕ್ರಮದಲ್ಲಿ ಮಣಗಳ್ಳಿಯಿಂದ ನಾಗನತ್ತ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬರುವ ದೊಡ್ಡಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡುವಂತೆ ಅಧಿಕಾರಿಗಳಲ್ಲಿ ಸಾರ್ವಜನಿಕರು ಮನವಿ ಮಾಡಿದ ಪ್ರಸಂಗ ಜರುಗಿತು.
ದಿನಂಪ್ರತಿ ಈ ರಸ್ತೆಯಲ್ಲಿ ಓಡಾಡುವ ಜನತೆ ಬಿದ್ದು ಈಗಾಗಲೇ ಕೆಲವರು ಗಾಯಗೊಂಡು ಪ್ರಾಣ ಬಿಟ್ಟಿರುವ ಉದಾಹರಣೆಗಳು ಸಹ ಇದೆ. ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೇತುವೆ ನಿರ್ಮಾಣ ಮಾಡುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದರು. ಈ ಹಳ್ಳದಲ್ಲಿ ಸದಾ ನೀರು ಹರಿಯುತ್ತಿರುವುದರಿಂದ ಪಾಚಿ ಕಟ್ಟಿ ಜಾರಿ ಬೀಳುವ ದುಸ್ಥಿತಿ ಇದೆ ಎಂದು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.

ಕಾರ್ಯಕ್ರಮದಲ್ಲಿ ಸಾಮಾಜಿಕ ಭದ್ರತೆ ಯೋಜನೆ ವಿವಿಧ ಪಿಂಚಣಿ ಸೌಲಭ್ಯಗಳಿಗೆ ಅರ್ಜಿ ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಆರ್. ಐ. ಮಹದೇವಸ್ವಾಮಿ, ಗ್ರಾಮ ಲೆಕ್ಕಿಗ ವಾಸುದೇವ್, ಸಿಬ್ಬಂದಿಗಳು ಸೇರಿದಂತೆ ಮುಖಂಡರುಗಳಾದ ಮಾದೇವ(ಕೆಂ

andolanait

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

3 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

7 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

9 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

11 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

15 hours ago