ಜಿಲ್ಲೆಗಳು

ಎಲ್ಲರೂ IAS ಕನಸನ್ನಿಟ್ಟುಕೊಂಡೇ ಓದಿರಿ, ಸಿಕ್ಕ ಉದ್ಯೋಗದಲ್ಲೇ ಪ್ರಾಮಾಣಿಕವಾಗಿ ಕೆಲಸ ಮಾಡಿ : ಎ.ಸಿ.ಲಕ್ಷ್ಮಣ ಕಿವಿಮಾತು

ಮಂಡ್ಯ ಕೃಷಿಕ್ ಸರ್ವೋದಯ ಟ್ರಸ್ಟ್‌ನಿಂದ ಯುಪಿಎಸ್‌ಸಿ, ಕೆಪಿಎಸ್‌ಸಿ ಪರೀಕ್ಷೆಗಳಿಗೆ ತರಬೇತಿ

ಮಂಡ್ಯ: ಎಲ್ಲರೂ ಐಎಎಸ್ ಅಧಿಕಾರಿಯಾಗುತ್ತೇನೆ ಎಂಬ ಕನಸನ್ನಿಟ್ಟುಕೊಂಡೇ ಓದಿರಿ. ಹಾಗೆಂದು ಎಲ್ಲರಿಗೂ ಅವಕಾಶವೂ ಸಿಗುವುದಿಲ್ಲ. ಸಿಕ್ಕ ಉದ್ಯೋಗದಲ್ಲೇ ಪ್ರಾಮಾಣಿಕವಾಗಿ ಕೆಲಸ ಮಾಡಿ ಎಂದು ಅರಣ್ಯ ಇಲಾಖೆ ನಿವೃತ್ತ ಕಾರ್ಯದರ್ಶಿ ಎ.ಸಿ.ಲಕ್ಷ್ಮಣ ಕಿವಿಮಾತು ಹೇಳಿದರು.

ಮಂಡ್ಯದಲ್ಲಿ ಕೃಷಿಕ್ ಸರ್ವೋದಯ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವುದು ಯುಪಿಎಸ್‌ಸಿ, ಕೆಪಿಎಸ್‌ಸಿ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಿಬಿರವನ್ನು ಭಾನುವಾರ ಉದ್ಘಾಟಿಸಿ ವಿದ್ಯಾರ್ಥಿಗಳಲ್ಲಿ ಉತ್ತೇಜನ ತುಂಬಿದರು.

ಪದವಿ ಹಂತದಲ್ಲಿ ಇರುವಾಗಲೇ ಬಹುತೇಕರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಯಾಗುವುದು ಒಳ್ಳೆಯ ಬೆಳವಣಿಗೆ. ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವವರು ಬಹುತೇಕರು ಐಎಎಸ್ ಅಧಿಕಾರಿ ಆಗಬೇಕು ಎನ್ನುವ ಕನಸು, ಗುರಿ ಇಟ್ಟುಕೊಂಡಿರುತ್ತೀರಿ. ಇದೇ ಉತ್ಸಾಹದಲ್ಲಿ ತಯಾರಿಯನ್ನೂ ಮಾಡಿ ಐಎಎಸ್ ಅಲ್ಲದೇ ಇದ್ದೂ ಒಂದಿಲ್ಲೊಂದು ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತೀರಿ. ಎಲ್ಲರೂ ಐಎಎಸ್ ಅಧಿಕಾರಿಗಳು ಆಗಲು ಆಗುವುದಿಲ್ಲ. ಹಾಗೆಂದು ಸಿಕ್ಕ ಉದ್ಯೋಗದಲ್ಲಿ ಪ್ರಾಮಾಣಿಕವಾಗಿ ಜನಮುಖಿಯಾಗಿ ಕೆಲಸ ಮಾಡುವುದನ್ನು ಮರೆಯಬಾರದು ಎಂದು ಸಲಹೆ ನೀಡಿದರು.

ತಯಾರಿ ಮಾಡುವಾಗಲೇ ಗುರಿ ಸ್ಪಷ್ಟವಾಗಿರಲಿ. ಮೊದಲ ಪ್ರಯತ್ನದಲ್ಲಿಯೇ ಯಶಸ್ಸು ಸಿಗುವುದಿಲ್ಲ ಎಂಬುದೂ ತಿಳಿದಿರಲಿ. ಹಾಗೆಂದು ನಿರಾಶರಾಗುವುದು ಬೇಡ. ಒಂದರಲ್ಲಿ ಹಿನ್ನಡೆಯಾದರೂ ಇನ್ನೂ ಒಂಬತ್ತು ಮಾರ್ಗಗಳನ್ನು ನೀವು ಯೋಜಿಸಿಕೊಂಡಿರಬೇಕು. ಈ ಆತ್ಮ ವಿಶ್ವಾಸವೇ ನಿಮ್ಮನ್ನು ಬದುಕಿನಲ್ಲಿ ಮುಂದೆ ತೆಗೆದುಕೊಂಡು ಹೋಗುತ್ತದೆ ಎಂದು ನುಡಿದರು. ೬೦ರ ದಶಕದಲ್ಲಿ ಅಂದರೆ ೬೨ ವರ್ಷದ ಹಿಂದೆ ನಾನೂ ನಿಮ್ಮ ಹಾಗೆಯೇ ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಯಾಗುತ್ತಿದ್ದೆ. ಐಎಫ್‌ಎಸ್ ಅಧಿಕಾರಿಯಾಗಿ ಉತ್ತೀರ್ಣನಾಗಿ ಮೂರೂವರೆ ದಶಕಕ್ಕೂ ಹೆಚ್ಚು ಕಾಲ ಕೆಲಸ ಮಾಡುವ ಅವಕಾಶ ಸಿಕ್ಕಿತು. ಏನೇ ಮಾಡಿದಾಗ ನಾನೂ ಕೊಡುವೆ. ನಿನ್ನ ಭಾಗವೂ ಇರಲಿ ಎಂದು ಹೇಳಿದಾಗ ಸೋರಿಕೆ ತಪ್ಪುತ್ತದೆ. ಇದರಲ್ಲಿ ನನ್ನ ಬೆವರೂ ಇದೆ ಎಂದಾಗ ಪ್ರಾಮಾಣಿಕತೆಯೂ ಬೆಳೆಯುತ್ತದೆ. ಇದನ್ನು ಪ್ರತಿಯೊಬ್ಬರೂ ಉದ್ಯೋಗ ಮಾಡುವಾಗ ರೂಢಿಸಿಕೊಳ್ಳಬೇಕು ಎಂದು ಸೂಚಿಸಿದರು.

ನಿವೃತ್ತ ಐಎಎಸ್ ಅಧಿಕಾರಿ ಮಂಗಲ ತಿಮ್ಮೇಗೌಡ, ನಿವೃತ್ತ ಐಎಫ್‌ಎಸ್ ಅಧಿಕಾರಿ ಎ.ಎಂ.ಅಣ್ಣಯ್ಯ, ಮಂಡ್ಯ ಜಿಲ್ಲೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಕೆನರಾ ಬ್ಯಾಂಕ್ ನಿವೃತ್ತ ಡಿಜಿಎಂ ಎಸ್.ಟಿ.ರಾಮಚಂದ್ರ, ಮೈಸೂರು ಮಹಾರಾಣಿ ಕಾಲೇಜು ಪ್ರಾಧ್ಯಾಪಕ ಡಾ.ಹೇಮಚಂದ್ರ ಮತ್ತಿತರರು ಹಾಜರಿದ್ದರು. ಮಂಡ್ಯ ಹಾಗೂ ಸುತ್ತಮುತ್ತಲಿನ ಪ್ರದೇಶದ ವಿವಿಧ ಕಾಲೇಜುಗಳ ೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡರು. ತಜ್ಞರ ಉಪನ್ಯಾಸಗಳನ್ನು ಆಲಿಸಿ ಸಂವಾದದಲ್ಲೂ ಭಾಗಿಯಾದರು.

andolanait

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

5 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

5 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

6 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

7 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

8 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

9 hours ago