ಜಿಲ್ಲೆಗಳು

ಎಲ್ಲರೂ IAS ಕನಸನ್ನಿಟ್ಟುಕೊಂಡೇ ಓದಿರಿ, ಸಿಕ್ಕ ಉದ್ಯೋಗದಲ್ಲೇ ಪ್ರಾಮಾಣಿಕವಾಗಿ ಕೆಲಸ ಮಾಡಿ : ಎ.ಸಿ.ಲಕ್ಷ್ಮಣ ಕಿವಿಮಾತು

ಮಂಡ್ಯ ಕೃಷಿಕ್ ಸರ್ವೋದಯ ಟ್ರಸ್ಟ್‌ನಿಂದ ಯುಪಿಎಸ್‌ಸಿ, ಕೆಪಿಎಸ್‌ಸಿ ಪರೀಕ್ಷೆಗಳಿಗೆ ತರಬೇತಿ

ಮಂಡ್ಯ: ಎಲ್ಲರೂ ಐಎಎಸ್ ಅಧಿಕಾರಿಯಾಗುತ್ತೇನೆ ಎಂಬ ಕನಸನ್ನಿಟ್ಟುಕೊಂಡೇ ಓದಿರಿ. ಹಾಗೆಂದು ಎಲ್ಲರಿಗೂ ಅವಕಾಶವೂ ಸಿಗುವುದಿಲ್ಲ. ಸಿಕ್ಕ ಉದ್ಯೋಗದಲ್ಲೇ ಪ್ರಾಮಾಣಿಕವಾಗಿ ಕೆಲಸ ಮಾಡಿ ಎಂದು ಅರಣ್ಯ ಇಲಾಖೆ ನಿವೃತ್ತ ಕಾರ್ಯದರ್ಶಿ ಎ.ಸಿ.ಲಕ್ಷ್ಮಣ ಕಿವಿಮಾತು ಹೇಳಿದರು.

ಮಂಡ್ಯದಲ್ಲಿ ಕೃಷಿಕ್ ಸರ್ವೋದಯ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವುದು ಯುಪಿಎಸ್‌ಸಿ, ಕೆಪಿಎಸ್‌ಸಿ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಿಬಿರವನ್ನು ಭಾನುವಾರ ಉದ್ಘಾಟಿಸಿ ವಿದ್ಯಾರ್ಥಿಗಳಲ್ಲಿ ಉತ್ತೇಜನ ತುಂಬಿದರು.

ಪದವಿ ಹಂತದಲ್ಲಿ ಇರುವಾಗಲೇ ಬಹುತೇಕರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಯಾಗುವುದು ಒಳ್ಳೆಯ ಬೆಳವಣಿಗೆ. ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವವರು ಬಹುತೇಕರು ಐಎಎಸ್ ಅಧಿಕಾರಿ ಆಗಬೇಕು ಎನ್ನುವ ಕನಸು, ಗುರಿ ಇಟ್ಟುಕೊಂಡಿರುತ್ತೀರಿ. ಇದೇ ಉತ್ಸಾಹದಲ್ಲಿ ತಯಾರಿಯನ್ನೂ ಮಾಡಿ ಐಎಎಸ್ ಅಲ್ಲದೇ ಇದ್ದೂ ಒಂದಿಲ್ಲೊಂದು ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತೀರಿ. ಎಲ್ಲರೂ ಐಎಎಸ್ ಅಧಿಕಾರಿಗಳು ಆಗಲು ಆಗುವುದಿಲ್ಲ. ಹಾಗೆಂದು ಸಿಕ್ಕ ಉದ್ಯೋಗದಲ್ಲಿ ಪ್ರಾಮಾಣಿಕವಾಗಿ ಜನಮುಖಿಯಾಗಿ ಕೆಲಸ ಮಾಡುವುದನ್ನು ಮರೆಯಬಾರದು ಎಂದು ಸಲಹೆ ನೀಡಿದರು.

ತಯಾರಿ ಮಾಡುವಾಗಲೇ ಗುರಿ ಸ್ಪಷ್ಟವಾಗಿರಲಿ. ಮೊದಲ ಪ್ರಯತ್ನದಲ್ಲಿಯೇ ಯಶಸ್ಸು ಸಿಗುವುದಿಲ್ಲ ಎಂಬುದೂ ತಿಳಿದಿರಲಿ. ಹಾಗೆಂದು ನಿರಾಶರಾಗುವುದು ಬೇಡ. ಒಂದರಲ್ಲಿ ಹಿನ್ನಡೆಯಾದರೂ ಇನ್ನೂ ಒಂಬತ್ತು ಮಾರ್ಗಗಳನ್ನು ನೀವು ಯೋಜಿಸಿಕೊಂಡಿರಬೇಕು. ಈ ಆತ್ಮ ವಿಶ್ವಾಸವೇ ನಿಮ್ಮನ್ನು ಬದುಕಿನಲ್ಲಿ ಮುಂದೆ ತೆಗೆದುಕೊಂಡು ಹೋಗುತ್ತದೆ ಎಂದು ನುಡಿದರು. ೬೦ರ ದಶಕದಲ್ಲಿ ಅಂದರೆ ೬೨ ವರ್ಷದ ಹಿಂದೆ ನಾನೂ ನಿಮ್ಮ ಹಾಗೆಯೇ ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಯಾಗುತ್ತಿದ್ದೆ. ಐಎಫ್‌ಎಸ್ ಅಧಿಕಾರಿಯಾಗಿ ಉತ್ತೀರ್ಣನಾಗಿ ಮೂರೂವರೆ ದಶಕಕ್ಕೂ ಹೆಚ್ಚು ಕಾಲ ಕೆಲಸ ಮಾಡುವ ಅವಕಾಶ ಸಿಕ್ಕಿತು. ಏನೇ ಮಾಡಿದಾಗ ನಾನೂ ಕೊಡುವೆ. ನಿನ್ನ ಭಾಗವೂ ಇರಲಿ ಎಂದು ಹೇಳಿದಾಗ ಸೋರಿಕೆ ತಪ್ಪುತ್ತದೆ. ಇದರಲ್ಲಿ ನನ್ನ ಬೆವರೂ ಇದೆ ಎಂದಾಗ ಪ್ರಾಮಾಣಿಕತೆಯೂ ಬೆಳೆಯುತ್ತದೆ. ಇದನ್ನು ಪ್ರತಿಯೊಬ್ಬರೂ ಉದ್ಯೋಗ ಮಾಡುವಾಗ ರೂಢಿಸಿಕೊಳ್ಳಬೇಕು ಎಂದು ಸೂಚಿಸಿದರು.

ನಿವೃತ್ತ ಐಎಎಸ್ ಅಧಿಕಾರಿ ಮಂಗಲ ತಿಮ್ಮೇಗೌಡ, ನಿವೃತ್ತ ಐಎಫ್‌ಎಸ್ ಅಧಿಕಾರಿ ಎ.ಎಂ.ಅಣ್ಣಯ್ಯ, ಮಂಡ್ಯ ಜಿಲ್ಲೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಕೆನರಾ ಬ್ಯಾಂಕ್ ನಿವೃತ್ತ ಡಿಜಿಎಂ ಎಸ್.ಟಿ.ರಾಮಚಂದ್ರ, ಮೈಸೂರು ಮಹಾರಾಣಿ ಕಾಲೇಜು ಪ್ರಾಧ್ಯಾಪಕ ಡಾ.ಹೇಮಚಂದ್ರ ಮತ್ತಿತರರು ಹಾಜರಿದ್ದರು. ಮಂಡ್ಯ ಹಾಗೂ ಸುತ್ತಮುತ್ತಲಿನ ಪ್ರದೇಶದ ವಿವಿಧ ಕಾಲೇಜುಗಳ ೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡರು. ತಜ್ಞರ ಉಪನ್ಯಾಸಗಳನ್ನು ಆಲಿಸಿ ಸಂವಾದದಲ್ಲೂ ಭಾಗಿಯಾದರು.

andolanait

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

4 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

4 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

4 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

5 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

6 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

6 hours ago