ಜಿಲ್ಲೆಗಳು

ಎಲ್ಲರೂ IAS ಕನಸನ್ನಿಟ್ಟುಕೊಂಡೇ ಓದಿರಿ, ಸಿಕ್ಕ ಉದ್ಯೋಗದಲ್ಲೇ ಪ್ರಾಮಾಣಿಕವಾಗಿ ಕೆಲಸ ಮಾಡಿ : ಎ.ಸಿ.ಲಕ್ಷ್ಮಣ ಕಿವಿಮಾತು

ಮಂಡ್ಯ ಕೃಷಿಕ್ ಸರ್ವೋದಯ ಟ್ರಸ್ಟ್‌ನಿಂದ ಯುಪಿಎಸ್‌ಸಿ, ಕೆಪಿಎಸ್‌ಸಿ ಪರೀಕ್ಷೆಗಳಿಗೆ ತರಬೇತಿ

ಮಂಡ್ಯ: ಎಲ್ಲರೂ ಐಎಎಸ್ ಅಧಿಕಾರಿಯಾಗುತ್ತೇನೆ ಎಂಬ ಕನಸನ್ನಿಟ್ಟುಕೊಂಡೇ ಓದಿರಿ. ಹಾಗೆಂದು ಎಲ್ಲರಿಗೂ ಅವಕಾಶವೂ ಸಿಗುವುದಿಲ್ಲ. ಸಿಕ್ಕ ಉದ್ಯೋಗದಲ್ಲೇ ಪ್ರಾಮಾಣಿಕವಾಗಿ ಕೆಲಸ ಮಾಡಿ ಎಂದು ಅರಣ್ಯ ಇಲಾಖೆ ನಿವೃತ್ತ ಕಾರ್ಯದರ್ಶಿ ಎ.ಸಿ.ಲಕ್ಷ್ಮಣ ಕಿವಿಮಾತು ಹೇಳಿದರು.

ಮಂಡ್ಯದಲ್ಲಿ ಕೃಷಿಕ್ ಸರ್ವೋದಯ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವುದು ಯುಪಿಎಸ್‌ಸಿ, ಕೆಪಿಎಸ್‌ಸಿ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಿಬಿರವನ್ನು ಭಾನುವಾರ ಉದ್ಘಾಟಿಸಿ ವಿದ್ಯಾರ್ಥಿಗಳಲ್ಲಿ ಉತ್ತೇಜನ ತುಂಬಿದರು.

ಪದವಿ ಹಂತದಲ್ಲಿ ಇರುವಾಗಲೇ ಬಹುತೇಕರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಯಾಗುವುದು ಒಳ್ಳೆಯ ಬೆಳವಣಿಗೆ. ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವವರು ಬಹುತೇಕರು ಐಎಎಸ್ ಅಧಿಕಾರಿ ಆಗಬೇಕು ಎನ್ನುವ ಕನಸು, ಗುರಿ ಇಟ್ಟುಕೊಂಡಿರುತ್ತೀರಿ. ಇದೇ ಉತ್ಸಾಹದಲ್ಲಿ ತಯಾರಿಯನ್ನೂ ಮಾಡಿ ಐಎಎಸ್ ಅಲ್ಲದೇ ಇದ್ದೂ ಒಂದಿಲ್ಲೊಂದು ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತೀರಿ. ಎಲ್ಲರೂ ಐಎಎಸ್ ಅಧಿಕಾರಿಗಳು ಆಗಲು ಆಗುವುದಿಲ್ಲ. ಹಾಗೆಂದು ಸಿಕ್ಕ ಉದ್ಯೋಗದಲ್ಲಿ ಪ್ರಾಮಾಣಿಕವಾಗಿ ಜನಮುಖಿಯಾಗಿ ಕೆಲಸ ಮಾಡುವುದನ್ನು ಮರೆಯಬಾರದು ಎಂದು ಸಲಹೆ ನೀಡಿದರು.

ತಯಾರಿ ಮಾಡುವಾಗಲೇ ಗುರಿ ಸ್ಪಷ್ಟವಾಗಿರಲಿ. ಮೊದಲ ಪ್ರಯತ್ನದಲ್ಲಿಯೇ ಯಶಸ್ಸು ಸಿಗುವುದಿಲ್ಲ ಎಂಬುದೂ ತಿಳಿದಿರಲಿ. ಹಾಗೆಂದು ನಿರಾಶರಾಗುವುದು ಬೇಡ. ಒಂದರಲ್ಲಿ ಹಿನ್ನಡೆಯಾದರೂ ಇನ್ನೂ ಒಂಬತ್ತು ಮಾರ್ಗಗಳನ್ನು ನೀವು ಯೋಜಿಸಿಕೊಂಡಿರಬೇಕು. ಈ ಆತ್ಮ ವಿಶ್ವಾಸವೇ ನಿಮ್ಮನ್ನು ಬದುಕಿನಲ್ಲಿ ಮುಂದೆ ತೆಗೆದುಕೊಂಡು ಹೋಗುತ್ತದೆ ಎಂದು ನುಡಿದರು. ೬೦ರ ದಶಕದಲ್ಲಿ ಅಂದರೆ ೬೨ ವರ್ಷದ ಹಿಂದೆ ನಾನೂ ನಿಮ್ಮ ಹಾಗೆಯೇ ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಯಾಗುತ್ತಿದ್ದೆ. ಐಎಫ್‌ಎಸ್ ಅಧಿಕಾರಿಯಾಗಿ ಉತ್ತೀರ್ಣನಾಗಿ ಮೂರೂವರೆ ದಶಕಕ್ಕೂ ಹೆಚ್ಚು ಕಾಲ ಕೆಲಸ ಮಾಡುವ ಅವಕಾಶ ಸಿಕ್ಕಿತು. ಏನೇ ಮಾಡಿದಾಗ ನಾನೂ ಕೊಡುವೆ. ನಿನ್ನ ಭಾಗವೂ ಇರಲಿ ಎಂದು ಹೇಳಿದಾಗ ಸೋರಿಕೆ ತಪ್ಪುತ್ತದೆ. ಇದರಲ್ಲಿ ನನ್ನ ಬೆವರೂ ಇದೆ ಎಂದಾಗ ಪ್ರಾಮಾಣಿಕತೆಯೂ ಬೆಳೆಯುತ್ತದೆ. ಇದನ್ನು ಪ್ರತಿಯೊಬ್ಬರೂ ಉದ್ಯೋಗ ಮಾಡುವಾಗ ರೂಢಿಸಿಕೊಳ್ಳಬೇಕು ಎಂದು ಸೂಚಿಸಿದರು.

ನಿವೃತ್ತ ಐಎಎಸ್ ಅಧಿಕಾರಿ ಮಂಗಲ ತಿಮ್ಮೇಗೌಡ, ನಿವೃತ್ತ ಐಎಫ್‌ಎಸ್ ಅಧಿಕಾರಿ ಎ.ಎಂ.ಅಣ್ಣಯ್ಯ, ಮಂಡ್ಯ ಜಿಲ್ಲೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಕೆನರಾ ಬ್ಯಾಂಕ್ ನಿವೃತ್ತ ಡಿಜಿಎಂ ಎಸ್.ಟಿ.ರಾಮಚಂದ್ರ, ಮೈಸೂರು ಮಹಾರಾಣಿ ಕಾಲೇಜು ಪ್ರಾಧ್ಯಾಪಕ ಡಾ.ಹೇಮಚಂದ್ರ ಮತ್ತಿತರರು ಹಾಜರಿದ್ದರು. ಮಂಡ್ಯ ಹಾಗೂ ಸುತ್ತಮುತ್ತಲಿನ ಪ್ರದೇಶದ ವಿವಿಧ ಕಾಲೇಜುಗಳ ೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡರು. ತಜ್ಞರ ಉಪನ್ಯಾಸಗಳನ್ನು ಆಲಿಸಿ ಸಂವಾದದಲ್ಲೂ ಭಾಗಿಯಾದರು.

andolanait

Recent Posts

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

50 seconds ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

26 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

30 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

43 mins ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

50 mins ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

4 hours ago