ಮಂಡ್ಯ ಕೃಷಿಕ್ ಸರ್ವೋದಯ ಟ್ರಸ್ಟ್ನಿಂದ ಯುಪಿಎಸ್ಸಿ, ಕೆಪಿಎಸ್ಸಿ ಪರೀಕ್ಷೆಗಳಿಗೆ ತರಬೇತಿ
ಮಂಡ್ಯ: ಎಲ್ಲರೂ ಐಎಎಸ್ ಅಧಿಕಾರಿಯಾಗುತ್ತೇನೆ ಎಂಬ ಕನಸನ್ನಿಟ್ಟುಕೊಂಡೇ ಓದಿರಿ. ಹಾಗೆಂದು ಎಲ್ಲರಿಗೂ ಅವಕಾಶವೂ ಸಿಗುವುದಿಲ್ಲ. ಸಿಕ್ಕ ಉದ್ಯೋಗದಲ್ಲೇ ಪ್ರಾಮಾಣಿಕವಾಗಿ ಕೆಲಸ ಮಾಡಿ ಎಂದು ಅರಣ್ಯ ಇಲಾಖೆ ನಿವೃತ್ತ ಕಾರ್ಯದರ್ಶಿ ಎ.ಸಿ.ಲಕ್ಷ್ಮಣ ಕಿವಿಮಾತು ಹೇಳಿದರು.
ಮಂಡ್ಯದಲ್ಲಿ ಕೃಷಿಕ್ ಸರ್ವೋದಯ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವುದು ಯುಪಿಎಸ್ಸಿ, ಕೆಪಿಎಸ್ಸಿ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಿಬಿರವನ್ನು ಭಾನುವಾರ ಉದ್ಘಾಟಿಸಿ ವಿದ್ಯಾರ್ಥಿಗಳಲ್ಲಿ ಉತ್ತೇಜನ ತುಂಬಿದರು.
ತಯಾರಿ ಮಾಡುವಾಗಲೇ ಗುರಿ ಸ್ಪಷ್ಟವಾಗಿರಲಿ. ಮೊದಲ ಪ್ರಯತ್ನದಲ್ಲಿಯೇ ಯಶಸ್ಸು ಸಿಗುವುದಿಲ್ಲ ಎಂಬುದೂ ತಿಳಿದಿರಲಿ. ಹಾಗೆಂದು ನಿರಾಶರಾಗುವುದು ಬೇಡ. ಒಂದರಲ್ಲಿ ಹಿನ್ನಡೆಯಾದರೂ ಇನ್ನೂ ಒಂಬತ್ತು ಮಾರ್ಗಗಳನ್ನು ನೀವು ಯೋಜಿಸಿಕೊಂಡಿರಬೇಕು. ಈ ಆತ್ಮ ವಿಶ್ವಾಸವೇ ನಿಮ್ಮನ್ನು ಬದುಕಿನಲ್ಲಿ ಮುಂದೆ ತೆಗೆದುಕೊಂಡು ಹೋಗುತ್ತದೆ ಎಂದು ನುಡಿದರು. ೬೦ರ ದಶಕದಲ್ಲಿ ಅಂದರೆ ೬೨ ವರ್ಷದ ಹಿಂದೆ ನಾನೂ ನಿಮ್ಮ ಹಾಗೆಯೇ ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಯಾಗುತ್ತಿದ್ದೆ. ಐಎಫ್ಎಸ್ ಅಧಿಕಾರಿಯಾಗಿ ಉತ್ತೀರ್ಣನಾಗಿ ಮೂರೂವರೆ ದಶಕಕ್ಕೂ ಹೆಚ್ಚು ಕಾಲ ಕೆಲಸ ಮಾಡುವ ಅವಕಾಶ ಸಿಕ್ಕಿತು. ಏನೇ ಮಾಡಿದಾಗ ನಾನೂ ಕೊಡುವೆ. ನಿನ್ನ ಭಾಗವೂ ಇರಲಿ ಎಂದು ಹೇಳಿದಾಗ ಸೋರಿಕೆ ತಪ್ಪುತ್ತದೆ. ಇದರಲ್ಲಿ ನನ್ನ ಬೆವರೂ ಇದೆ ಎಂದಾಗ ಪ್ರಾಮಾಣಿಕತೆಯೂ ಬೆಳೆಯುತ್ತದೆ. ಇದನ್ನು ಪ್ರತಿಯೊಬ್ಬರೂ ಉದ್ಯೋಗ ಮಾಡುವಾಗ ರೂಢಿಸಿಕೊಳ್ಳಬೇಕು ಎಂದು ಸೂಚಿಸಿದರು.
ನಿವೃತ್ತ ಐಎಎಸ್ ಅಧಿಕಾರಿ ಮಂಗಲ ತಿಮ್ಮೇಗೌಡ, ನಿವೃತ್ತ ಐಎಫ್ಎಸ್ ಅಧಿಕಾರಿ ಎ.ಎಂ.ಅಣ್ಣಯ್ಯ, ಮಂಡ್ಯ ಜಿಲ್ಲೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಕೆನರಾ ಬ್ಯಾಂಕ್ ನಿವೃತ್ತ ಡಿಜಿಎಂ ಎಸ್.ಟಿ.ರಾಮಚಂದ್ರ, ಮೈಸೂರು ಮಹಾರಾಣಿ ಕಾಲೇಜು ಪ್ರಾಧ್ಯಾಪಕ ಡಾ.ಹೇಮಚಂದ್ರ ಮತ್ತಿತರರು ಹಾಜರಿದ್ದರು. ಮಂಡ್ಯ ಹಾಗೂ ಸುತ್ತಮುತ್ತಲಿನ ಪ್ರದೇಶದ ವಿವಿಧ ಕಾಲೇಜುಗಳ ೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡರು. ತಜ್ಞರ ಉಪನ್ಯಾಸಗಳನ್ನು ಆಲಿಸಿ ಸಂವಾದದಲ್ಲೂ ಭಾಗಿಯಾದರು.
ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…
ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…