ಮಂಡ್ಯ ಕೃಷಿಕ್ ಸರ್ವೋದಯ ಟ್ರಸ್ಟ್ನಿಂದ ಯುಪಿಎಸ್ಸಿ, ಕೆಪಿಎಸ್ಸಿ ಪರೀಕ್ಷೆಗಳಿಗೆ ತರಬೇತಿ
ಮಂಡ್ಯ: ಎಲ್ಲರೂ ಐಎಎಸ್ ಅಧಿಕಾರಿಯಾಗುತ್ತೇನೆ ಎಂಬ ಕನಸನ್ನಿಟ್ಟುಕೊಂಡೇ ಓದಿರಿ. ಹಾಗೆಂದು ಎಲ್ಲರಿಗೂ ಅವಕಾಶವೂ ಸಿಗುವುದಿಲ್ಲ. ಸಿಕ್ಕ ಉದ್ಯೋಗದಲ್ಲೇ ಪ್ರಾಮಾಣಿಕವಾಗಿ ಕೆಲಸ ಮಾಡಿ ಎಂದು ಅರಣ್ಯ ಇಲಾಖೆ ನಿವೃತ್ತ ಕಾರ್ಯದರ್ಶಿ ಎ.ಸಿ.ಲಕ್ಷ್ಮಣ ಕಿವಿಮಾತು ಹೇಳಿದರು.
ಮಂಡ್ಯದಲ್ಲಿ ಕೃಷಿಕ್ ಸರ್ವೋದಯ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವುದು ಯುಪಿಎಸ್ಸಿ, ಕೆಪಿಎಸ್ಸಿ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಿಬಿರವನ್ನು ಭಾನುವಾರ ಉದ್ಘಾಟಿಸಿ ವಿದ್ಯಾರ್ಥಿಗಳಲ್ಲಿ ಉತ್ತೇಜನ ತುಂಬಿದರು.
ತಯಾರಿ ಮಾಡುವಾಗಲೇ ಗುರಿ ಸ್ಪಷ್ಟವಾಗಿರಲಿ. ಮೊದಲ ಪ್ರಯತ್ನದಲ್ಲಿಯೇ ಯಶಸ್ಸು ಸಿಗುವುದಿಲ್ಲ ಎಂಬುದೂ ತಿಳಿದಿರಲಿ. ಹಾಗೆಂದು ನಿರಾಶರಾಗುವುದು ಬೇಡ. ಒಂದರಲ್ಲಿ ಹಿನ್ನಡೆಯಾದರೂ ಇನ್ನೂ ಒಂಬತ್ತು ಮಾರ್ಗಗಳನ್ನು ನೀವು ಯೋಜಿಸಿಕೊಂಡಿರಬೇಕು. ಈ ಆತ್ಮ ವಿಶ್ವಾಸವೇ ನಿಮ್ಮನ್ನು ಬದುಕಿನಲ್ಲಿ ಮುಂದೆ ತೆಗೆದುಕೊಂಡು ಹೋಗುತ್ತದೆ ಎಂದು ನುಡಿದರು. ೬೦ರ ದಶಕದಲ್ಲಿ ಅಂದರೆ ೬೨ ವರ್ಷದ ಹಿಂದೆ ನಾನೂ ನಿಮ್ಮ ಹಾಗೆಯೇ ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಯಾಗುತ್ತಿದ್ದೆ. ಐಎಫ್ಎಸ್ ಅಧಿಕಾರಿಯಾಗಿ ಉತ್ತೀರ್ಣನಾಗಿ ಮೂರೂವರೆ ದಶಕಕ್ಕೂ ಹೆಚ್ಚು ಕಾಲ ಕೆಲಸ ಮಾಡುವ ಅವಕಾಶ ಸಿಕ್ಕಿತು. ಏನೇ ಮಾಡಿದಾಗ ನಾನೂ ಕೊಡುವೆ. ನಿನ್ನ ಭಾಗವೂ ಇರಲಿ ಎಂದು ಹೇಳಿದಾಗ ಸೋರಿಕೆ ತಪ್ಪುತ್ತದೆ. ಇದರಲ್ಲಿ ನನ್ನ ಬೆವರೂ ಇದೆ ಎಂದಾಗ ಪ್ರಾಮಾಣಿಕತೆಯೂ ಬೆಳೆಯುತ್ತದೆ. ಇದನ್ನು ಪ್ರತಿಯೊಬ್ಬರೂ ಉದ್ಯೋಗ ಮಾಡುವಾಗ ರೂಢಿಸಿಕೊಳ್ಳಬೇಕು ಎಂದು ಸೂಚಿಸಿದರು.
ನಿವೃತ್ತ ಐಎಎಸ್ ಅಧಿಕಾರಿ ಮಂಗಲ ತಿಮ್ಮೇಗೌಡ, ನಿವೃತ್ತ ಐಎಫ್ಎಸ್ ಅಧಿಕಾರಿ ಎ.ಎಂ.ಅಣ್ಣಯ್ಯ, ಮಂಡ್ಯ ಜಿಲ್ಲೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಕೆನರಾ ಬ್ಯಾಂಕ್ ನಿವೃತ್ತ ಡಿಜಿಎಂ ಎಸ್.ಟಿ.ರಾಮಚಂದ್ರ, ಮೈಸೂರು ಮಹಾರಾಣಿ ಕಾಲೇಜು ಪ್ರಾಧ್ಯಾಪಕ ಡಾ.ಹೇಮಚಂದ್ರ ಮತ್ತಿತರರು ಹಾಜರಿದ್ದರು. ಮಂಡ್ಯ ಹಾಗೂ ಸುತ್ತಮುತ್ತಲಿನ ಪ್ರದೇಶದ ವಿವಿಧ ಕಾಲೇಜುಗಳ ೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡರು. ತಜ್ಞರ ಉಪನ್ಯಾಸಗಳನ್ನು ಆಲಿಸಿ ಸಂವಾದದಲ್ಲೂ ಭಾಗಿಯಾದರು.
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…