ಜಿಲ್ಲೆಗಳು

ದೇಶದ ಬೆಳವಣಿಗೆ ದೃಷ್ಟಿಯಿಂದ ಪ್ರತಿಯೊಬ್ಬರೂ ಮತದಾನ ಮಾಡಿ: ಎಚ್.ಡಿ.ಗಿರೀಶ್

ಮೈಸೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಹತ್ವದ್ದಾಗಿದ್ದು, ದೇಶದ ಬೆಳವಣಿಗೆ ಮತ್ತು ಭವಿಷ್ಯದ ದೃಷ್ಟಿಯಿಂದ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಮೈಸೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ಗಿರೀಶ್ ಅವರು ಹೇಳಿದರು.

ನಗರದ ಜಿಲ್ಲಾ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ನಗರದ ರುಡ್ ಸೆಟ್ ಸಂಸ್ಥೆಯಲ್ಲಿ ನಡೆದ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಿಳಿಸಿದರು. ಜಗತ್ತಿನಲ್ಲಿಯೇ ಅತಿದೊಡ್ಡ ಸಂವಿಧಾನ ಹೊಂದಿರುವ ಭಾರತ ದೇಶದಲ್ಲಿ ಚುನಾವಣೆ ವ್ಯವಸ್ಥೆಯು ದೇಶದ ಅಭಿವೃದ್ಧಿಗೆ ಬಹುಮುಖ್ಯವಾದ ಪಾತ್ರವಹಿಸುತ್ತದೆ. ಈ ಹಿನ್ನೆಲೆ ನೀವು ಮತದಾನ ಮಾಡಿ ಹಾಗೂ ನಿಮ್ಮ ಕುಟುಂಬದವರಿಗೂ ಮತದಾನ ಮಾಡಲು ಸಲಹೆ ನೀಡಿ ಎಂದು ಕರೆ ನೀಡಿದರು.

ಹೊಸದಾಗಿ ಮತದಾರ ಪಟ್ಟಿಗೆ ಹೆಸರು ಸೇರಿಸಲು ನಿಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳನ್ನು ಭೇಟಿ ಮಾಡಿ, ಅಗತ್ಯ ದಾಖಲಾತಿಗಳನ್ನು ನೀಡುವ ಮೂಲಕ ನಮೂನೆ-6 ರಲ್ಲಿ ಮತದಾರ ಪಟ್ಟಿಗೆ ನಿಮ್ಮ ಹೆಸರು ಸೇರ್ಪಡೆಗೊಳಿಸಿ. ಮತದಾನ ಗುರುತಿನ ಚೀಟಿ ಹೊಂದಿದ್ದರೂ ನಿಮ್ಮ ಹೆಸರನ್ನು ಮತ್ತೊಮ್ಮೆ ಪರಿಶೀಲಿಸಿಕೊಳ್ಳಿ. ಹೆಸರು, ಮಾಹಿತಿ ತಪ್ಪಿದ್ದರೆ ಹಾಗೂ ವಿಳಾಸ ವರ್ಗಾವಣೆಯನ್ನು ಕೂಡಲೇ ಮಾಡಿಸಿಕೊಳ್ಳಿ ಎಂದು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು‌.

ಕಾರ್ಯಕ್ರಮದಲ್ಲಿ ಉಪ ತಹಸಿಲ್ದಾರ್ ಪುಟ್ಟಸ್ವಾಮಿಗೌಡ ಮಾತನಾಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಜುಳಾ ಪಾಟೀಲ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು‌. ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಆನಂದನಾಯಕ, ಮೈಸೂರು ತಾಲ್ಲೂಕಿನ ಎಲ್‌.ಸಿ.ಸಿ ಡಿ.ಟಿ.ವೆಂಕಟೇಶ್, ಉಪನ್ಯಾಸಕರಾದ ಆರ್.ಪಾಲರಾಜು, ಲತಾಮಣಿ ಸೇರಿದಂತೆ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಯ 94 ಹಳ್ಳಿಗಳಿಂದ ತರಬೇತಿಗೆ ಆಗಮಿಸಿದ್ದ ಮಹಿಳಾ ಶಿಬಿರಾರ್ಥಿಗಳು ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

1 hour ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

1 hour ago

ಓದುಗರ ಪತ್ರ: ಮಲತಾಯಿ ಧೋರಣೆ ಏಕೆ?

ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

2 hours ago

ಗಾಂಧಿ ಅನುಸಂಧಾನದ ವೈರುಧ್ಯಗಳು

ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…

2 hours ago

ನಮ್ಮ ತಂದೆಯ ಮರಣ ಮತ್ತು ನನ್ನ ಇಮ್ಮಡಿ ಅವಮಾನ

ಗಾಂಧಿ ಅಭಿಯಾನ ಅರಿವಿನ ಯಾನ  ನಾನು ಮೊದಲೇ ಹೇಳಿರುವಂತೆ, ನಮ್ಮ ತಂದೆ ಭಗಂದರ ರೋಗದಿಂದ ನರಳುತ್ತಿದ್ದರು. ಅವರ ಶುಶ್ರೂಷೆಯ ಅಧಿಕಾಂಶದ ಹೊರೆ…

3 hours ago